AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ರಾಜೀನಾಮೆ ನೀಡುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎಂದ ವಲಸಿಗ ಸಚಿವರು

ರಾಜೀನಾಮೆಯ ವದಂತಿಗೆ ತೆರೆ ಎಳೆದಿರುವ ವಲಸಿಗ ಸಚಿವರು ತಾವು ತಮ್ಮ ಇಲಾಖೆಗೆ ಸಂಬಂಧಿಸಿದ ಪತ್ರಗಳಿಗೆ ಮುಖ್ಯಮಂತ್ರಿಗಳ ಸಹಿ ಪಡೆಯಲು ಹೋಗಿದ್ದಾಗಿ ತಿಳಿಸಿದ್ದಾರೆ.

Karnataka Politics: ರಾಜೀನಾಮೆ ನೀಡುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎಂದ ವಲಸಿಗ ಸಚಿವರು
ಬಿ.ಎಸ್​.ಯಡಿಯೂರಪ್ಪ
TV9 Web
| Edited By: |

Updated on:Jul 22, 2021 | 6:59 PM

Share

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗುತ್ತಿದ್ದಂತೆ ರಾಜಕೀಯ ವಿದ್ಯಮಾನಗಳು ಕೂಡ ಗರಿಗೆದರಿವೆ. ನಾನು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 25ರಂದು ಹೈಕಮಾಂಡ್ ನೀಡುವ ಆದೇಶಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಮೂಲಕ ಬಿ.ಎಸ್. ಯಡಿಯೂರಪ್ಪ ತಾವು ರಾಜೀನಾಮೆ (BS Yediyurappa Resignation) ನೀಡುವ ಸುಳಿವು ನೀಡಿದ್ದಾರೆ. ಅದರ ಬೆನ್ನಲ್ಲೇ ಇಂದು ಸಂಜೆ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಈ ಸಭೆ ನಡೆದ ಬಳಿಕ ವಲಸಿಗ ಸಚಿವರು ಒಟ್ಟಾಗಿ ಕುಳಿತು ಕೆಲ ಕಾಲ ಚರ್ಚೆ ಮಾಡಿದ್ದಾರೆ. ಬಳಿಕ ಎಲ್ಲರೂ ಕೈಯಲ್ಲೊಂದು ಪತ್ರ ಹಿಡಿದುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದಾರೆ. ಹೀಗಾಗಿ, ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ತಾವು ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ವಲಸಿಗ ಸಚಿವರು ನಿರ್ಧರಿಸಿರಬಹುದು ಎಂಬ ಲೆಕ್ಕಾಚಾರಗಳು ರಾಜ್ಯ ರಾಜಕೀಯದಲ್ಲಿ (Karnataka Politics) ನಡೆದಿದ್ದವು. ಆದರೆ, ಅದೆಲ್ಲದಕ್ಕೂ ತೆರೆ ಎಳೆದಿರುವ ವಲಸಿಗ ಸಚಿವರು ತಮ್ಮ ಕೈಯಲ್ಲಿದ್ದುದು ರಾಜೀನಾಮೆ ಪತ್ರ (Resignation Letter) ಅಲ್ಲ ಎಂಬ ಮಾಹಿತಿಯನ್ನು ತಮ್ಮ ಆಪ್ತರ ಮೂಲಕ ಕಳುಹಿಸಿದ್ದಾರೆ.

ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆರ್. ಅಶೋಕ್ ಅವರು ವಲಸಿಗ ಸಚಿವರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಈ ವೇಳೆ ತಾವು ರಾಜೀನಾಮೆ ನೀಡುತ್ತಿದ್ದೇವೆ ಎಂಬ ಸುದ್ದಿ ಎಲ್ಲೆಡೆ ಹರಡಿ, ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಿಎಂ ಕ್ಯಾಬಿನ್​ನಿಂದಲೇ ಸಂದೇಶ ಕಳುಹಿಸಿರುವ ವಲಸಿಗ ಸಚಿವರು ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟ ಪತ್ರ ಹಿಡಿದಿದ್ದಾಗಿ ತಿಳಿಸಿದ್ದಾರೆ. ಆ ಪತ್ರಕ್ಕೆ ಸಿಎಂ ಸಹಿ ಹಾಕಿಸಿಕೊಳ್ಳಲು ಹೋಗಿದ್ದಾಗಿ 6 ಮಂದಿ ಸಚಿವರು ತಿಳಿಸಿದ್ದಾರೆ.

ರಾಜೀನಾಮೆ ನೀಡಲು ಮುಖ್ಯಮಂತ್ರಿಗಳ ಬಳಿ ಹೋಗದಿದ್ದರೂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ತಮ್ಮ ಭವಿಷ್ಯವೇನೆಂಬ ಚಿಂತೆ ಅವರನ್ನು ಕಾಡುತ್ತಿದೆ. ಹೀಗಾಗಿ, ಈ ಬಗ್ಗೆ ಸಿಎಂ ಯಡಿಯೂರಪ್ಪನವರ ಬಳಿ ಅವರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ವಲಸಿಗ ಸಚಿವರು ಈಗಲೇ ರಾಜೀನಾಮೆ ನೀಡಿದರೆ ಯಾವ ಸಮಸ್ಯೆಯೂ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದು ಬೇರೆಯವರು ಆ ಪಟ್ಟಕ್ಕೇರಿದ ನಂತರ ಹೇಗಿದ್ದರೂ ಆ ಸಚಿವರು ರಾಜೀನಾಮೆ ನೀಡಲೇಬೇಕಾಗುತ್ತದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ವಲಸಿಗರು ಮೂಲೆಗುಂಪಾಗುತ್ತಾರೆ. ಹಾಗಾಗಿ, ಈಗಲೇ ರಾಜೀನಾಮೆ ನೀಡಿದರೂ ಸರ್ಕಾರಕ್ಕೆ ಏನೂ ಸಮಸ್ಯೆಯಾಗುವುದಿಲ್ಲ ಎಂದು ಟಿವಿ9ಗೆ ಬಿಜೆಪಿ ಎಂಎಲ್‌ಸಿ ಹೆಚ್‌. ವಿಶ್ವನಾಥ್ ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲೇಬೇಕೆಂದು ಒಂದು ಬಣದವರು ಹಠ ತೊಟ್ಟಿದ್ದರು. ಆದರೆ, ಯಡಿಯೂರಪ್ಪ ಮಾತ್ರ ನಾನು ಸಿಎಂ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಎಂದು ಹೇಳುತ್ತಲೇ ಬಂದಿದ್ದರು. ಆದರೆ, ಕೆಲವು ದಿನಗಳ ಹಿಂದೆ ತಮ್ಮ ಬಣದವರೊಂದಿಗೆ ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಅಮಿತ್ ಶಾ ಮುಂತಾದ ನಾಯಕರನ್ನು ಭೇಟಿಯಾಗಿ ಬಂದಿದ್ದ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಜುಲೈ 25ರಂದು ಹೈಕಮಾಂಡ್​ನಿಂದ ಬರುವ ಸಂದೇಶಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಮೂಲಕ ಸಿಎಂ ಪಟ್ಟದಿಂದ ಕೆಳಗಿಳಿಯುವ ಸೂಚನೆ ನೀಡಿದ್ದಾರೆ.

ಯಡಿಯೂರಪ್ಪನವರ ಮಾತನ್ನು ನಂಬಿ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷವನ್ನು ತೊರೆದು ಬಂದಿರುವ ವಲಸಿಗ ಸಚಿವರಿಗೆ ಈಗ ಭವಿಷ್ಯದ ಭೀತಿ ಎದುರಾಗಿದೆ. ವಲಸಿಗ ಸಚಿವರಾದ ಬಿ.ಸಿ. ಪಾಟೀಲ್, ಡಾ.ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ.

ತಮ್ಮನ್ನು ಬಿಜೆಪಿ ಪಕ್ಷಕ್ಕೆ ಕರೆಸಿಕೊಂಡು, ಚುನಾವಣೆಯಲ್ಲಿ ಟಿಕೆಟ್ ನೀಡಿ, ಸ್ವಪಕ್ಷೀಯರ ವಿರೋಧಧ ನಡುವೆಯೂ ಸಚಿವ ಸ್ಥಾನ ನೀಡಿರುವ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ವಲಸಿಗ ಸಚಿವರ ಸ್ಥಿತಿ ಅತಂತ್ರವಾಗುವ ಆತಂಕ ಅವರನ್ನು ಕಾಡುತ್ತಿದೆ ಎನ್ನಲಾಗಿದೆ. ಇಂದು ಸಚಿವ ಸಂಪುಟ ಸಭೆ ಮುಗಿದ ಬೆನ್ನಲ್ಲೇ ಸಿಎಂ ಕಚೇರಿಗೆ ದೌಡಾಯಿಸಿದ ಸಚಿವರು ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಮೊದಲು ಹತ್ತು ನಿಮಿಷ ಭೈರತಿ ಬಸವರಾಜ್ ಕೊಠಡಿಯಲ್ಲಿ ಚರ್ಚೆ ನಡೆಸಿದ ವಲಸಿಗರು ನಂತರ ಒಟ್ಟಾಗಿ ಪತ್ರ ಹಿಡಿದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ, ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Politics: ಸಿಎಂ ಸ್ಥಾನ ಉಳಿಸಿಕೊಳ್ಳಲು ವಲಸಿಗ ಸಚಿವರ ಮೂಲಕ ಒತ್ತಡ ಹಾಕಿದರಾ ಯಡಿಯೂರಪ್ಪ?

ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ಮುಕ್ತಾಯ: 8 ಸಾವಿರ ಕೋಟಿ ವೆಚ್ಚದಲ್ಲಿ 2 ವರ್ಷದಲ್ಲಿ ಒಟ್ಟು 5 ಲಕ್ಷ ಮನೆ ನಿರ್ಮಾಣಕ್ಕೆ ತೀರ್ಮಾನ

Published On - 6:57 pm, Thu, 22 July 21

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ