AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ: ಖಾತೆ ಕೈತಪ್ಪಿದ ಬೇಸರದಿಂದ ಇನ್ನೂ ಹೊರ ಬಾರದ ಮಾಧುಸ್ವಾಮಿ..!

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ ಎಂದು ಗಟ್ಟಿ ಧ್ವನಿಯಲ್ಲಿ ಉತ್ತರಿಸಿದರು. ಈ ಮೂಲಕ ಖಾತೆ ಕಿತ್ತುಕೊಂಡಿದ್ದಕ್ಕೆ‌‌ ಸದನದಲ್ಲೇ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ: ಖಾತೆ ಕೈತಪ್ಪಿದ ಬೇಸರದಿಂದ ಇನ್ನೂ ಹೊರ ಬಾರದ ಮಾಧುಸ್ವಾಮಿ..!
ಸಚಿವ ಮಾಧುಸ್ವಾಮಿ
ಪೃಥ್ವಿಶಂಕರ
|

Updated on:Feb 04, 2021 | 2:33 PM

Share

ಬೆಂಗಳೂರು: ನನ್ನ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಬಿಟ್ಟು ಬೇರೆ ಇಲಾಖೆಗೆ ನಾನು ಹೇಗೆ ಉತ್ತರಿಸಲಿ ಎಂದು ಸದನದಲ್ಲಿ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಮುಳವಾಡ ಮುಖ್ಯ ಕಾಲುವೆ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್, ಅನಧಿಕೃತವಾಗಿ ಕಾಲುವೆ ಒಡೆದು ಬೇರೆಯವರಿಗೆ ನೀರು ಕೊಟ್ಟಿದ್ದಾರೆ. ಈ ಬಗ್ಗೆ ಫೋಟೋ ಸಮೇತ ನೀರಾವರಿ ಸಚಿವರಿಗೆ ಪತ್ರ ಬರೆದ್ರೂ ಏನೂ ಕ್ರಮ ಆಗಿಲ್ಲ ಎಂದು ಆರೋಪ ಮಾಡಿದರು. ಈ ವೇಳೆ ಸಚಿವಾಲಯದ ಅಧಿಕಾರಿಗಳು, ಉತ್ತರ ಕೊಡಲು ಸಚಿವ ಮಾಧುಸ್ವಾಮಿಗೆ ಉತ್ತರದ ಪ್ರತಿ ಕಳುಹಿಸಿದರು. ಆದರೆ ಇದಕ್ಕೆ ಉತ್ತರ ಕೊಡಲು ಸಚಿವ ಮಾಧುಸ್ವಾಮಿ ಹಿಂದೇಟು ಹಾಕಿದ‌್ದಾರೆ.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ.. ಅಲ್ಲ, ಇದು ನನ್ನ ಇಲಾಖೆಗೆ ಬರಲ್ಲ. ಆದರೂ ನೀವೇ ಉತ್ತರ ಕೊಡಿ ಎಂದು ಅಧಿಕಾರಿಗಳು ನನಗೆ ನೋಟಿಸ್ ಕೊಡ್ತಾರೆ ಎಂದು ಮಾಧುಸ್ವಾಮಿ ಖಾರವಾಗಿಯೇ ಪ್ರತಿಕ್ರಿಯಿಸಿದರು. ಇದಕ್ಕೆ ನೀವೇ ಉತ್ತರ ಕೊಡಿ ಪರವಾಗಿಲ್ಲ ಎಂದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಮಾಧುಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಮಾಧುಸ್ವಾಮಿ, ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ ಎಂದು ಗಟ್ಟಿ ಧ್ವನಿಯಲ್ಲಿ ಉತ್ತರಿಸಿದರು. ಈ ಮೂಲಕ ಖಾತೆ ಕಿತ್ತುಕೊಂಡಿದ್ದಕ್ಕೆ‌‌ ಸದನದಲ್ಲೇ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಕಾನೂನು ಹಾಗೂ ಸಂಸದೀಯ ಖಾತೆ ಕಿತ್ತುಕೊಂಡು, ಸಣ್ಣ ನೀರಾವರಿ ಖಾತೆ ಕೊಟ್ಟಿದ್ದಕ್ಕೆ ಈಗಾಗಲೇ ಭಾರೀ ಬೇಸರಗೊಂಡಿರುವ ಮಾಧುಸ್ವಾಮಿ, ಸಿಎಂ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.

ಖಾತೆ ಬದಲಾವಣೆ: ಪೋನ್ ಸಂಪರ್ಕಕ್ಕೆ ಸಿಗದೆ ಸಚಿವ ಮಾಧುಸ್ವಾಮಿ ಕೋಪತಾಪ, ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೂ ಗೈರು?

Published On - 2:09 pm, Thu, 4 February 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ