AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ: ಖಾತೆ ಕೈತಪ್ಪಿದ ಬೇಸರದಿಂದ ಇನ್ನೂ ಹೊರ ಬಾರದ ಮಾಧುಸ್ವಾಮಿ..!

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ ಎಂದು ಗಟ್ಟಿ ಧ್ವನಿಯಲ್ಲಿ ಉತ್ತರಿಸಿದರು. ಈ ಮೂಲಕ ಖಾತೆ ಕಿತ್ತುಕೊಂಡಿದ್ದಕ್ಕೆ‌‌ ಸದನದಲ್ಲೇ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ: ಖಾತೆ ಕೈತಪ್ಪಿದ ಬೇಸರದಿಂದ ಇನ್ನೂ ಹೊರ ಬಾರದ ಮಾಧುಸ್ವಾಮಿ..!
ಸಚಿವ ಮಾಧುಸ್ವಾಮಿ
ಪೃಥ್ವಿಶಂಕರ
|

Updated on:Feb 04, 2021 | 2:33 PM

Share

ಬೆಂಗಳೂರು: ನನ್ನ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಬಿಟ್ಟು ಬೇರೆ ಇಲಾಖೆಗೆ ನಾನು ಹೇಗೆ ಉತ್ತರಿಸಲಿ ಎಂದು ಸದನದಲ್ಲಿ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಮುಳವಾಡ ಮುಖ್ಯ ಕಾಲುವೆ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್, ಅನಧಿಕೃತವಾಗಿ ಕಾಲುವೆ ಒಡೆದು ಬೇರೆಯವರಿಗೆ ನೀರು ಕೊಟ್ಟಿದ್ದಾರೆ. ಈ ಬಗ್ಗೆ ಫೋಟೋ ಸಮೇತ ನೀರಾವರಿ ಸಚಿವರಿಗೆ ಪತ್ರ ಬರೆದ್ರೂ ಏನೂ ಕ್ರಮ ಆಗಿಲ್ಲ ಎಂದು ಆರೋಪ ಮಾಡಿದರು. ಈ ವೇಳೆ ಸಚಿವಾಲಯದ ಅಧಿಕಾರಿಗಳು, ಉತ್ತರ ಕೊಡಲು ಸಚಿವ ಮಾಧುಸ್ವಾಮಿಗೆ ಉತ್ತರದ ಪ್ರತಿ ಕಳುಹಿಸಿದರು. ಆದರೆ ಇದಕ್ಕೆ ಉತ್ತರ ಕೊಡಲು ಸಚಿವ ಮಾಧುಸ್ವಾಮಿ ಹಿಂದೇಟು ಹಾಕಿದ‌್ದಾರೆ.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ.. ಅಲ್ಲ, ಇದು ನನ್ನ ಇಲಾಖೆಗೆ ಬರಲ್ಲ. ಆದರೂ ನೀವೇ ಉತ್ತರ ಕೊಡಿ ಎಂದು ಅಧಿಕಾರಿಗಳು ನನಗೆ ನೋಟಿಸ್ ಕೊಡ್ತಾರೆ ಎಂದು ಮಾಧುಸ್ವಾಮಿ ಖಾರವಾಗಿಯೇ ಪ್ರತಿಕ್ರಿಯಿಸಿದರು. ಇದಕ್ಕೆ ನೀವೇ ಉತ್ತರ ಕೊಡಿ ಪರವಾಗಿಲ್ಲ ಎಂದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಮಾಧುಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಮಾಧುಸ್ವಾಮಿ, ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ ಎಂದು ಗಟ್ಟಿ ಧ್ವನಿಯಲ್ಲಿ ಉತ್ತರಿಸಿದರು. ಈ ಮೂಲಕ ಖಾತೆ ಕಿತ್ತುಕೊಂಡಿದ್ದಕ್ಕೆ‌‌ ಸದನದಲ್ಲೇ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಕಾನೂನು ಹಾಗೂ ಸಂಸದೀಯ ಖಾತೆ ಕಿತ್ತುಕೊಂಡು, ಸಣ್ಣ ನೀರಾವರಿ ಖಾತೆ ಕೊಟ್ಟಿದ್ದಕ್ಕೆ ಈಗಾಗಲೇ ಭಾರೀ ಬೇಸರಗೊಂಡಿರುವ ಮಾಧುಸ್ವಾಮಿ, ಸಿಎಂ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.

ಖಾತೆ ಬದಲಾವಣೆ: ಪೋನ್ ಸಂಪರ್ಕಕ್ಕೆ ಸಿಗದೆ ಸಚಿವ ಮಾಧುಸ್ವಾಮಿ ಕೋಪತಾಪ, ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೂ ಗೈರು?

Published On - 2:09 pm, Thu, 4 February 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!