AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ: ಖಾತೆ ಕೈತಪ್ಪಿದ ಬೇಸರದಿಂದ ಇನ್ನೂ ಹೊರ ಬಾರದ ಮಾಧುಸ್ವಾಮಿ..!

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ ಎಂದು ಗಟ್ಟಿ ಧ್ವನಿಯಲ್ಲಿ ಉತ್ತರಿಸಿದರು. ಈ ಮೂಲಕ ಖಾತೆ ಕಿತ್ತುಕೊಂಡಿದ್ದಕ್ಕೆ‌‌ ಸದನದಲ್ಲೇ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ: ಖಾತೆ ಕೈತಪ್ಪಿದ ಬೇಸರದಿಂದ ಇನ್ನೂ ಹೊರ ಬಾರದ ಮಾಧುಸ್ವಾಮಿ..!
ಸಚಿವ ಮಾಧುಸ್ವಾಮಿ
ಪೃಥ್ವಿಶಂಕರ
|

Updated on:Feb 04, 2021 | 2:33 PM

Share

ಬೆಂಗಳೂರು: ನನ್ನ ಇಲಾಖೆಗೆ ಸಂಬಂಧಿಸಿದ ಪ್ರಶ್ನೆ ಬಿಟ್ಟು ಬೇರೆ ಇಲಾಖೆಗೆ ನಾನು ಹೇಗೆ ಉತ್ತರಿಸಲಿ ಎಂದು ಸದನದಲ್ಲಿ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಮುಳವಾಡ ಮುಖ್ಯ ಕಾಲುವೆ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್, ಅನಧಿಕೃತವಾಗಿ ಕಾಲುವೆ ಒಡೆದು ಬೇರೆಯವರಿಗೆ ನೀರು ಕೊಟ್ಟಿದ್ದಾರೆ. ಈ ಬಗ್ಗೆ ಫೋಟೋ ಸಮೇತ ನೀರಾವರಿ ಸಚಿವರಿಗೆ ಪತ್ರ ಬರೆದ್ರೂ ಏನೂ ಕ್ರಮ ಆಗಿಲ್ಲ ಎಂದು ಆರೋಪ ಮಾಡಿದರು. ಈ ವೇಳೆ ಸಚಿವಾಲಯದ ಅಧಿಕಾರಿಗಳು, ಉತ್ತರ ಕೊಡಲು ಸಚಿವ ಮಾಧುಸ್ವಾಮಿಗೆ ಉತ್ತರದ ಪ್ರತಿ ಕಳುಹಿಸಿದರು. ಆದರೆ ಇದಕ್ಕೆ ಉತ್ತರ ಕೊಡಲು ಸಚಿವ ಮಾಧುಸ್ವಾಮಿ ಹಿಂದೇಟು ಹಾಕಿದ‌್ದಾರೆ.

ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ.. ಅಲ್ಲ, ಇದು ನನ್ನ ಇಲಾಖೆಗೆ ಬರಲ್ಲ. ಆದರೂ ನೀವೇ ಉತ್ತರ ಕೊಡಿ ಎಂದು ಅಧಿಕಾರಿಗಳು ನನಗೆ ನೋಟಿಸ್ ಕೊಡ್ತಾರೆ ಎಂದು ಮಾಧುಸ್ವಾಮಿ ಖಾರವಾಗಿಯೇ ಪ್ರತಿಕ್ರಿಯಿಸಿದರು. ಇದಕ್ಕೆ ನೀವೇ ಉತ್ತರ ಕೊಡಿ ಪರವಾಗಿಲ್ಲ ಎಂದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಮಾಧುಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಮಾಧುಸ್ವಾಮಿ, ಉತ್ತರ ಕೊಟ್ಟಿದ್ದಕ್ಕೆ ನಾನು ಈಗ ಹಿಂದಕ್ಕೆ ಬಂದಿದ್ದೇನೆ ಎಂದು ಗಟ್ಟಿ ಧ್ವನಿಯಲ್ಲಿ ಉತ್ತರಿಸಿದರು. ಈ ಮೂಲಕ ಖಾತೆ ಕಿತ್ತುಕೊಂಡಿದ್ದಕ್ಕೆ‌‌ ಸದನದಲ್ಲೇ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಕಾನೂನು ಹಾಗೂ ಸಂಸದೀಯ ಖಾತೆ ಕಿತ್ತುಕೊಂಡು, ಸಣ್ಣ ನೀರಾವರಿ ಖಾತೆ ಕೊಟ್ಟಿದ್ದಕ್ಕೆ ಈಗಾಗಲೇ ಭಾರೀ ಬೇಸರಗೊಂಡಿರುವ ಮಾಧುಸ್ವಾಮಿ, ಸಿಎಂ ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.

ಖಾತೆ ಬದಲಾವಣೆ: ಪೋನ್ ಸಂಪರ್ಕಕ್ಕೆ ಸಿಗದೆ ಸಚಿವ ಮಾಧುಸ್ವಾಮಿ ಕೋಪತಾಪ, ಸಿದ್ದಗಂಗಾ ಮಠದ ಕಾರ್ಯಕ್ರಮಕ್ಕೂ ಗೈರು?

Published On - 2:09 pm, Thu, 4 February 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ