AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯಗೆ ಕೆ.ಎನ್​. ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್​ ಏನು?

ಸಿಎಂ ಸಿದ್ದರಾಮಯ್ಯಗೆ ಕೆ.ಎನ್​. ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್​ ಏನು?

Jagadisha B
| Updated By: ಪ್ರಸನ್ನ ಹೆಗಡೆ|

Updated on: Nov 07, 2025 | 11:57 AM

Share

ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನಲೆ ರಾಜ್ಯ ಕಾಂಗ್ರೆಸ್​​ನಲ್ಲಿ ರಾಜಕೀಯ ಚಟುವಟಿಗೆಳು ಗರಿಗೆದರಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ, ಶಾಸಕ ಕೆ.ಎನ್​. ರಾಜಣ್ಣ ಆತಿಥ್ಯ ನೀಡಲು ಮುಂದಾಗಿರೋದು ಭಾರಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಶಾಸಕರ ಮನೆಯಲ್ಲಿ ಸಕಲ ಸಿದ್ಧತೆ ನಡೆದಿದೆ.

ತುಮಕೂರು, ನವೆಂಬರ್​ 07: ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನಲೆ ಮಾಜಿ ಸಚಿವ, ಶಾಸಕ ಕೆ.ಎನ್​. ರಾಜಣ್ಣ ತುಮಕೂರು ನಿವಾಸದಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. ಮಂತ್ರಿ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಸಿಎಂಗೆ ರಾಜಣ್ಣ ಅತಿಥ್ಯ ನೀಡುತ್ತಿದ್ದು, ಸಹಜವಾಗಿಯೇ ಈ ಬಗ್ಗೆ ಕುತೂಹಲ ಹೆಚ್ಚಿದೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮತ್ತೆ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಗ್ಗೆ ಬಹಿರಂಗವಾಗಿಯೇ ಕೆ.ಎನ್‌.ರಾಜಣ್ಣ ಹೇಳಿಕೆ ನೀಡಿದ್ದು, ಇಂದು ಊಟದ ವೇಳೆ ರಾಜ್ಯ ರಾಜಕೀಯ ಚರ್ಚೆ ಸಾಧ್ಯತೆ ಇದೆ. ಈ ವೇಳೆ ಪರಮೇಶ್ವರ್‌ ಮತ್ತು ತುಮಕೂರು ಶಾಸಕರು ಭಾಗಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.