ಸಿಎಂ ಸಿದ್ದರಾಮಯ್ಯಗೆ ಕೆ.ಎನ್. ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್ ಏನು?
ಸಚಿವ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನಲೆ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಗೆಳು ಗರಿಗೆದರಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ಆತಿಥ್ಯ ನೀಡಲು ಮುಂದಾಗಿರೋದು ಭಾರಿ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಶಾಸಕರ ಮನೆಯಲ್ಲಿ ಸಕಲ ಸಿದ್ಧತೆ ನಡೆದಿದೆ.
ತುಮಕೂರು, ನವೆಂಬರ್ 07: ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನಲೆ ಮಾಜಿ ಸಚಿವ, ಶಾಸಕ ಕೆ.ಎನ್. ರಾಜಣ್ಣ ತುಮಕೂರು ನಿವಾಸದಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. ಮಂತ್ರಿ ಸ್ಥಾನ ಕೈತಪ್ಪಿದ ಬಳಿಕ ಮೊದಲ ಬಾರಿಗೆ ಸಿಎಂಗೆ ರಾಜಣ್ಣ ಅತಿಥ್ಯ ನೀಡುತ್ತಿದ್ದು, ಸಹಜವಾಗಿಯೇ ಈ ಬಗ್ಗೆ ಕುತೂಹಲ ಹೆಚ್ಚಿದೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಮತ್ತೆ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಗ್ಗೆ ಬಹಿರಂಗವಾಗಿಯೇ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದು, ಇಂದು ಊಟದ ವೇಳೆ ರಾಜ್ಯ ರಾಜಕೀಯ ಚರ್ಚೆ ಸಾಧ್ಯತೆ ಇದೆ. ಈ ವೇಳೆ ಪರಮೇಶ್ವರ್ ಮತ್ತು ತುಮಕೂರು ಶಾಸಕರು ಭಾಗಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ

