AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಪ್ರತಾಪಚಂದ್ರಶೆಟ್ಟಿ ಹೇಳಿದ್ದಾರೆ.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ
ಪ್ರತಾಪ್ ಚಂದ್ರ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 04, 2021 | 8:54 PM

Share

ಬೆಂಗಳೂರು: ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಉಪಸಭಾಪತಿಗೆ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.  2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. 113 ವರ್ಷಗಳ ರಾಜ್ಯದ ಮೇಲ್ಮನೆಗೆ ಭವ್ಯ ಇತಿಹಾಸವಿದೆ. ಈ ಸದನದ ಘನತೆ ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಕಳೆದ 37 ವರ್ಷಗಳಿಂದ ನಾನು ಸಾರ್ವಜನಿಕ ಬದುಕಿನಲ್ಲಿದ್ದೇನೆ. ಆದರೆ ಈಗ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಪರಿಷತ್​ ಸಭಾಪತಿ ಪ್ರತಾಪಚಂದ್ರಶೆಟ್ಟಿ ವಿದಾಯ ಭಾಷಣ ಮಾಡಿದ್ದಾರೆ. 

2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. ಇವರು ವಿಧಾನಪರಿಷತ್​ನ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಪ್ರತಾಪಚಂದ್ರಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಬಿಜೆಪಿಯ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸಿತ್ತು. ಹೀಗಾಗಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.  ನಿನ್ನೆ ನಡೆದ ಸಿಎಲ್​ಪಿ ಸಭೆಯಲ್ಲೇ ಅವರು  ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದರು.  ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ರಾಜೀನಾಮೆ ನೀಡುತ್ತಿರುವುದಾಗಿ ಅವರು ಸಿಎಲ್​ಪಿ ಸಭೆಯಲ್ಲಿ ಹೇಳಿದ್ದರು ಎನ್ನಲಾಗಿದೆ.

ರಾಜೀನಾಮೆ ನೀಡಿದ ನಂತರ ವಿಧಾನಸೌಧದ ತಮ್ಮ ಕೊಠಡಿಗೆ ಪ್ರತಾಪಚಂದ್ರ ಶೆಟ್ಟಿ ತೆರಳಿದ್ದಾರೆ. ಸಭಾಪತಿ ಭೇಟಿಗೆ ಮೂರೂ ಪಕ್ಷಗಳ ನಾಯಕರು ಆಗಮಿಸಿದ್ದಾರೆ. ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ಎಸ್.ಆರ್.ಪಾಟೀಲ್, ಹೆಚ್.ವಿಶ್ವನಾಥ್​, ಬಸವರಾಜ ಹೊರಟ್ಟಿ ಸೇರಿ ಹಲವು ನಾಯರು ಪ್ರತಾಪಚಂದ್ರ ಶೆಟ್ಟಿ ಭೇಟಿಯಾಗಿದ್ದಾರೆ.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’

Published On - 8:30 pm, Thu, 4 February 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ