AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಪ್ರತಾಪಚಂದ್ರಶೆಟ್ಟಿ ಹೇಳಿದ್ದಾರೆ.

ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ
ಪ್ರತಾಪ್ ಚಂದ್ರ ಶೆಟ್ಟಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 04, 2021 | 8:54 PM

Share

ಬೆಂಗಳೂರು: ಪರಿಷತ್​ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಉಪಸಭಾಪತಿಗೆ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.  2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. 113 ವರ್ಷಗಳ ರಾಜ್ಯದ ಮೇಲ್ಮನೆಗೆ ಭವ್ಯ ಇತಿಹಾಸವಿದೆ. ಈ ಸದನದ ಘನತೆ ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಕಳೆದ 37 ವರ್ಷಗಳಿಂದ ನಾನು ಸಾರ್ವಜನಿಕ ಬದುಕಿನಲ್ಲಿದ್ದೇನೆ. ಆದರೆ ಈಗ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಪರಿಷತ್​ ಸಭಾಪತಿ ಪ್ರತಾಪಚಂದ್ರಶೆಟ್ಟಿ ವಿದಾಯ ಭಾಷಣ ಮಾಡಿದ್ದಾರೆ. 

2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. ಇವರು ವಿಧಾನಪರಿಷತ್​ನ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಪ್ರತಾಪಚಂದ್ರಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಬಿಜೆಪಿಯ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸಿತ್ತು. ಹೀಗಾಗಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.  ನಿನ್ನೆ ನಡೆದ ಸಿಎಲ್​ಪಿ ಸಭೆಯಲ್ಲೇ ಅವರು  ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದರು.  ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ರಾಜೀನಾಮೆ ನೀಡುತ್ತಿರುವುದಾಗಿ ಅವರು ಸಿಎಲ್​ಪಿ ಸಭೆಯಲ್ಲಿ ಹೇಳಿದ್ದರು ಎನ್ನಲಾಗಿದೆ.

ರಾಜೀನಾಮೆ ನೀಡಿದ ನಂತರ ವಿಧಾನಸೌಧದ ತಮ್ಮ ಕೊಠಡಿಗೆ ಪ್ರತಾಪಚಂದ್ರ ಶೆಟ್ಟಿ ತೆರಳಿದ್ದಾರೆ. ಸಭಾಪತಿ ಭೇಟಿಗೆ ಮೂರೂ ಪಕ್ಷಗಳ ನಾಯಕರು ಆಗಮಿಸಿದ್ದಾರೆ. ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀನಿವಾಸ ಪೂಜಾರಿ, ಲಕ್ಷ್ಮಣ ಸವದಿ, ಎಸ್.ಆರ್.ಪಾಟೀಲ್, ಹೆಚ್.ವಿಶ್ವನಾಥ್​, ಬಸವರಾಜ ಹೊರಟ್ಟಿ ಸೇರಿ ಹಲವು ನಾಯರು ಪ್ರತಾಪಚಂದ್ರ ಶೆಟ್ಟಿ ಭೇಟಿಯಾಗಿದ್ದಾರೆ.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’

Published On - 8:30 pm, Thu, 4 February 21

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!