AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್ ಮೊರೆ ಹೋದ ಮುಂಬೈ ಮಿತ್ರ ಮಂಡಳಿ ಸದಸ್ಯರು ನೀಡಿದ ಸ್ಪಷ್ಟನೆ ಏನು ಗೊತ್ತಾ? ಇಲ್ಲಿದೆ ವಿವರ

ನಿನ್ನೆ 6 ಸಚಿವರು ಕೋರ್ಟ್​ಗೆ ಅರ್ಜಿ ಹಾಕಿದ್ದೇವೆ. ಇಂದು ಮತ್ತೆ 6 ಜನ ಕೋರ್ಟ್​ಗೆ ಅರ್ಜಿ ಹಾಕುತ್ತಾರೆ ಎಂದು ಮತ್ತಷ್ಟು ಸಚಿವರು ಅರ್ಜಿ ಹಾಕುವ ಬಗ್ಗೆ ಸೋಮಶೇಖರ್ ಸುಳಿವು ನೀಡಿದ್ದಾರೆ.

ಕೋರ್ಟ್ ಮೊರೆ ಹೋದ ಮುಂಬೈ ಮಿತ್ರ ಮಂಡಳಿ ಸದಸ್ಯರು ನೀಡಿದ ಸ್ಪಷ್ಟನೆ ಏನು ಗೊತ್ತಾ? ಇಲ್ಲಿದೆ ವಿವರ
ಭೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್
ಪೃಥ್ವಿಶಂಕರ
| Edited By: |

Updated on: Mar 06, 2021 | 10:34 AM

Share

ಬೆಂಗಳೂರು: ತಮ್ಮ ಆಪ್ತ ರಮೇಶ್​ ಜಾರಕಿಹೊಳಿ ಅವರ ಸಿಡಿ ಪ್ರಕರಣ ಹೊರಬರುತ್ತಿದ್ದಂತೆ, ರಮೇಶ್​ ಆಪ್ತರಾದ ಆರು ಮಂದಿ ಸಚಿವರು ತಮ್ಮ ವಿರುದ್ಧ ಯಾವುದೇ ರೀತಿಯ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೀಗಾಗಿ ತಾವು ಕೋರ್ಟ್​ ಮೊರೆ ಹೋಗಲು ನಿಜವಾದ ಕಾರಣ ಏನೆಂಬುದನ್ನು ಮುಂಬೈ ಮಿತ್ರಮಂಡಳಿ ವಿವರಿಸಿದ್ದು ಹೀಗೆ:

ಈ ಬಗ್ಗೆ ಟ್ವಿಟ್ಟರ್​ನಲ್ಲಿ ಪೋಸ್ಟ್​ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದುಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ , ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ. ಆದ್ದರಿಂದ ನಾವೆಲ್ಲರೂ ನಮ್ಮ ವಿರುದ್ಧ ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಪ್ರಸಾರವಾಗಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಭೈರತಿ ಬಸವರಾಜ್ ನ್ಯಾಯಾಲಯದ ಮೊರೆ ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಟಿವಿ9 ಜೊತೆ ಮಾತಾನಾಡಿದ ಸಚಿವ ಭೈರತಿ ಬಸವರಾಜ್, ನಮ್ಮ ತೇಜೋವಧೆ ಆಗಬಾರದೆಂದು ಕೋರ್ಟ್ ಮೊರೆ ಹೋಗಿದ್ದೇವೆ. ಹೀಗಾಗಿ ಇದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ತಂತ್ರಜ್ಞಾನ ಬಳಸಿಕೊಂಡು ಏನಾದ್ರು ಮಾಡಬಹುದು.

ನಾವು ಯಾವುದೇ ರೀತಿಯ ತಪ್ಪು ಮಾಡಿಯೇ ಇಲ್ಲ. ನಮ್ಮ ವಿರುದ್ಧ ಬಹಳಷ್ಟು ಷಡ್ಯಂತ್ರಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನು ಬೇಕಾದ್ರೂ ನಡೀಬಹುದು. ನಮ್ಮ ವೇಗಕ್ಕೆ ಕಡಿವಾಣ ಹಾಕಲು ಷಡ್ಯಂತ್ರ ನಡೀತಿದೆ. ಹೀಗಾಗಿ ನಾವು ಕೋರ್ಟ್ ಮೊರೆ ಹೋಗಿದ್ದೇವೆ ಅಷ್ಟೆ. ನಾನು ನನ್ನ ಕೈ, ಬಾಯಿ ಶುದ್ಧವಾಗಿ ಇಟ್ಟುಕೊಂಡು ಬಂದ ವ್ಯಕ್ತಿ. ಷಡ್ಯಂತ್ರದ ಬಗ್ಗೆ ಗೊತ್ತಿದ್ದು ನಾವು ಸುಮ್ಮನಾಗಬಾರದು.

ಈಗ ಬಹಳಷ್ಟು ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ವಿರೋಧಿಗಳು ಬಹಳಷ್ಟು ಜನ ಹುಟ್ಟಿಕೊಂಡಿದ್ದಾರೆ. ತನಿಖೆಯ ನಂತರ ಷಡ್ಯಂತ್ರಗಳು ಬಯಲಾಗಲಿದೆ. ನಾವು ಕುಂಬಳಕಾಯಿ ಕಳ್ಳರೂ ಅಲ್ಲ, ಹೆಗಲೂ ಮುಟ್ಟಿಕೊಂಡಿಲ್ಲ. ಬುಟ್ಟಿಯಲ್ಲಿ ಯಾವುದೇ ಹಾವೂ ಇಲ್ಲ, ಚೇಳೂ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಅಧಿವೇಶನದ ವೇಳೆ ಟಾರ್ಗೆಟ್ ಮಾಡಲು ಪ್ಲ್ಯಾನ್: ಎಸ್.ಟಿ.ಸೋಮಶೇಖರ್ ಈ ಬಗ್ಗೆ ಮಾತಾನಾಡಿದ ಎಸ್.ಟಿ.ಸೋಮಶೇಖರ್, ಅಧಿವೇಶನದ ವೇಳೆ ನಮ್ಮನ್ನು ಟಾರ್ಗೆಟ್ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎಂದು ಹಳೆಯ ಸ್ನೇಹಿತರು ನಮಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಅವಮಾನ, ತೇಜೋವಧೆ ಮಾಡಲು ಟಾರ್ಗೆಟ್ ಮಾಡಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ.

ನಾವು ಯಾವುದೋ ಭೀತಿಯಿಂದ ಕೋರ್ಟ್‌ಗೆ ಹೋಗಿಲ್ಲ. ನಾವು ರಾಜಕೀಯ ಷಡ್ಯಂತ್ರಕ್ಕೆ ಟಾರ್ಗೆಟ್ ಆಗಬಾರದು. 2-3 ನಿಮಿಷದಲ್ಲಿ ತೇಜೋವಧೆ ಮಾಡಿದ್ರೆ ಹೇಗೆ? ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ನಮಗೆ ಯಾವುದೇ ವಿಡಿಯೋಗಳ ಬಗ್ಗೆ ಭಯ ಇಲ್ಲ. ಏನೋ ಕ್ರಿಯೇಟ್ ಮಾಡಿ ಬ್ಲ್ಯಾಕ್‌ಮೇಲ್ ಮಾಡ್ತಾರೆ. ಯಾರು ಷಡ್ಯಂತ್ರ ಮಾಡುತ್ತಿದ್ದಾರೆಂದು ತಿಳಿಯುತ್ತೆ. 2-3 ದಿನದಲ್ಲಿ ಎಲ್ಲ ವಿಚಾರಗಳು ಬಯಲಾಗುತ್ತೆ. ಬಳಿಕ ನಾವು 15 ಜನ ಕುಳಿತು ಚರ್ಚೆ ಮಾಡುತ್ತೇವೆ. ಈ ಬಗ್ಗೆಯೂ ನಾವು ಸಿಎಂ ಜತೆ ಚರ್ಚೆ ಮಾಡುತ್ತೇವೆ.

ಮುಂಬೈನಲ್ಲಿ ಏನೇನು ನಡೆದಿತ್ತು ಎಂದು 2-3 ದಿನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇವೆ.15 ಜಂಟಿ ಸುದ್ದಿಗೋಷ್ಠಿ ಮಾಡುತ್ತೇವೆ. ನಿನ್ನೆ 6 ಸಚಿವರು ಕೋರ್ಟ್​ಗೆ ಅರ್ಜಿ ಹಾಕಿದ್ದೇವೆ. ಇಂದು ಮತ್ತೆ 6 ಜನ ಕೋರ್ಟ್​ಗೆ ಅರ್ಜಿ ಹಾಕುತ್ತಾರೆ ಎಂದು ಮತ್ತಷ್ಟು ಸಚಿವರು ಅರ್ಜಿ ಹಾಕುವ ಬಗ್ಗೆ ಸೋಮಶೇಖರ್ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಆ ಆರು ಸಚಿವರಿಗೆ ಕಾಡ್ತಿದೆಯಾ ‘ಮುಂಬೈ ಡೈರೀಸ್’ ನೆನಪು! ದಿನೇಶ್ ಕಲ್ಲಹಳ್ಳಿ ವಿರುದ್ಧ ಕಂಪ್ಲೇಂಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮೇಲೆ ಒತ್ತಡ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್