AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ 6 ಸಚಿವರು: ಅಚ್ಚರಿ ಹುಟ್ಟಿಸಿದ ನಡೆ

‘ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದು’ ಎಂದು ವಿನಂತಿಸಿ ನಗರದ ಬಹುತೇಕ ಪ್ರಮುಖ ಮಾಧ್ಯಮಗಳನ್ನು (ಟಿವಿ ಮತ್ತು ದಿನಪತ್ರಿಕೆಗಳು ಸೇರಿ) ಪ್ರತಿವಾದಿಗಳನ್ನಾಗಿಸಿ, ರಾಜ್ಯದ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ 6 ಸಚಿವರು: ಅಚ್ಚರಿ ಹುಟ್ಟಿಸಿದ ನಡೆ
ಸಾಂದರ್ಭಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 05, 2021 | 9:48 PM

Share

ಬೆಂಗಳೂರು: ‘ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದು’ ಎಂದು ವಿನಂತಿಸಿ ನಗರದ ಬಹುತೇಕ ಪ್ರಮುಖ ಮಾಧ್ಯಮಗಳನ್ನು (ಟಿವಿ ಮತ್ತು ದಿನಪತ್ರಿಕೆಗಳು ಸೇರಿ) ಪ್ರತಿವಾದಿಗಳನ್ನಾಗಿಸಿ, ರಾಜ್ಯದ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಕೆ.ಸುಧಾಕರ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ತೋಟಗಾರಿಕೆ ಹಾಗೂ ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಸಿಟಿ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿರುವ ಆರು ಸಚಿವರ ನಡೆ ಅಚ್ಚರಿ ಮೂಡಿಸಿದೆ.

ಈ ಸಚಿವರು ಏಕಾಏಕಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರಮೇಶ ಜಾರಕಿಹೊಳಿ ಪ್ರಕರಣ ಬಹಿರಂಗಗೊಂಡ ನಂತರ ಇತರ ಕೆಲವರ ಸಿಡಿಗಳೂ ಹೊರಬರಬಹುದು ಎಂಬ ಮಾತುಗಳು ಅಲ್ಲಲ್ಲಿ ಕೇಳಿಬಂದಿದ್ದವು. ಇದೀಗ ಈ ಆರೂ ಮಂದಿ ಅರ್ಜಿ ಸಲ್ಲಿಸಿರುವ ಬೆಳವಣಿಗೆಯನ್ನು ಹಲವು ರೀತಿಗಳಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ಜಲಸಂಪನ್ಮೂಲ ಖಾತೆ ಸಚಿವ, ಬೆಳಗಾವಿಯ ಪ್ರಭಾವಿ ನಾಯಕ ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದಾರೆ ಎನ್ನಲಾದ ಆಕ್ಷೇಪಾರ್ಹ ದೃಶ್ಯಗಳುಳ್ಳ ಸಿಡಿ ಬಹಿರಂಗಗೊಂಡು ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಇದು ಎಡಿಟ್ ಆಗಿರುವ ಸಿಡಿ ಎಂದಿರುವ ರಮೇಶ್ ಜಾರಕಿಹೊಳಿ, ಸಿಡಿಯಲ್ಲಿರುವ ವ್ಯಕ್ತಿ ನಾನಲ್ಲ ಎಂದಿದ್ದರು. ಆದರೆ ಕೊನೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅತ್ತ ಗೋಕಾಕ ಪಟ್ಟಣದಲ್ಲಿ ತಮ್ಮ ನಾಯಕನ ಪರವಾಗಿ ಬೆಂಬಲಿಗರು ಬೀದಿಗಳಿದು ಪ್ರತಿಭಟಿಸುತ್ತಿದ್ದರು.

ಈ ಸಂದರ್ಭ ಮಾಧ್ಯಮಗಳ ಎದುರು ಮಾತನಾಡಿದ್ದ ಕೆಲವರು, ಇನ್ನಷ್ಟು ನಾಯಕರ ಇಂಥ ಸಿಡಿಗಳು ನಮ್ಮ ಬಳಿಯಿವೆ ಎಂದಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿದೆ ಹಲವು ಲೆಕ್ಕಾಚಾರ: ‘ಸಾಹುಕಾರ’ನ ಮುಂದಿನ ನಡೆ ನಿಗೂಢ

ಇದನ್ನೂ ಓದಿ: ಮಂತ್ರಿಗಿರಿ ಇಲ್ಲದ ಜಾರಕಿಹೊಳಿ ಕುಟುಂಬದಿಂದ ಬಿಜೆಪಿ ಸರಕಾರ ಕೆಡವಲು ಸಾಧ್ಯವೇ?

Published On - 9:30 pm, Fri, 5 March 21

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​