AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರು ಸಮಾಧಾನವಾಗಿದ್ದಾರೆ, ಇಲಾಖೆ ಇಷ್ಟವಾಗದಿದ್ರೆ ಮುಂದೆ ನೋಡೋಣ: ಬಿ.ಎಸ್.ಯಡಿಯೂರಪ್ಪ

ಸಚಿವರಾದ ಬಸವರಾಜ ಬೊಮ್ಮಾಯಿ, ಅಶೋಕ್ ಸಮ್ಮುಖದಲ್ಲಿ ಮಾಧ್ಯಮಗಳ ಮುಂದೆ ತರಾತುರಿಯಲ್ಲಿ ಬಂದ ಇಬ್ಬರು, ನಮಗೇನು ಅಸಮಾಧಾನವಿಲ್ಲ ಎಂದು ಹೇಳಿ ಮತ್ತೆ ಸಿಎಂ ನಿವಾಸದ ಒಳಗೆ ತೆರಳಿದ್ದಾರೆ.

ಸಚಿವರು ಸಮಾಧಾನವಾಗಿದ್ದಾರೆ, ಇಲಾಖೆ ಇಷ್ಟವಾಗದಿದ್ರೆ ಮುಂದೆ ನೋಡೋಣ: ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 4:28 PM

Share

ಬೆಂಗಳೂರು: ನೂತನ ಖಾತೆ ಸಂಬಂಧ ಸಚಿವರಿಗೆ ಅಸಮಾಧಾನವಿಲ್ಲ. ಎಲ್ಲ ಸಚಿವರು ಸಮಾಧಾನವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಅಸಮಾಧಾನಿತರ ಜೊತೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಯಡಿಯೂರಪ್ಪ, ಸಚಿವ ಸ್ಥಾನ ಹಂಚಿಕೆ ಮಾಡುವುದು ಸುಲಭದ ಕೆಲಸವಲ್ಲ. ಮಾಧುಸ್ವಾಮಿ, ಗೋಪಾಲಯ್ಯ ಸಮಾಧಾನವಾಗಿದ್ದಾರೆ.  ಅಕಸ್ಮಾತ್ ಅವರಿಗೆ ಸಚಿವ ಸ್ಥಾನ ಇಷ್ಟವಾಗದಿದ್ದರೆ ಮುಂದೆ ನೋಡೋಣ. ಎಲ್ಲರ ಜತೆಯೂ ನಾನು ಮಾತನಾಡಿದ್ದೇನೆ ಎಂದರು.

ಖಾತೆ ಹಂಚಿಕೆ ವಿಚಾರಕ್ಕೆ ಸಬಂಧಿಸಿದಂತೆ ಅಬಕಾರಿ ಸಚಿವ ಎಂ.ಟಿ.ಬಿ.ನಾಗರಾಜ್​ ಹಾಗೂ ತೋಟಗಾರಿಕೆ ಮತ್ತು ಸಕ್ಕರೆ ಸಚಿವ ಗೋಪಾಲಯ್ಯ ಅಸಮಾಧಾನ ಹೊರ ಹಾಕಿದ್ದರು. ಇವರನ್ನು ಕಾವೇರಿ ನಿವಾಸಕ್ಕೆ ಕರೆಸಿ ಯಡಿರೂಪ್ಪ ಮಾತುಕತೆ ನಡೆಸಿದ್ದರು. ಈಗ ಮಾತುಕತೆ ಯಶಸ್ವಿಯಾದಂತಾಗಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿ ಬಿ.ಎಸ್.ಯಡಿಯೂರಪ್ಪ ಬಳಿ ಸಚಿವರಿಬ್ಬರೂ ಚರ್ಚೆ ನಡೆಸಿದ್ದಾರೆ. ನಂತರ  ಸಚಿವರಾದ ಬಸವರಾಜ ಬೊಮ್ಮಾಯಿ, ಅಶೋಕ್ ಸಮ್ಮುಖದಲ್ಲಿ ಮಾಧ್ಯಮಗಳ ಮುಂದೆ ತರಾತುರಿಯಲ್ಲಿ ಬಂದ ಇಬ್ಬರು, ನಮಗೇನು ಅಸಮಾಧಾನವಿಲ್ಲ ಎಂದು ಹೇಳಿ ಮತ್ತೆ ಸಿಎಂ ನಿವಾಸದ ಒಳಗೆ ತೆರಳಿದ್ದಾರೆ.

ಅಬಕಾರಿ ಖಾತೆ ನೀಡಿರುವ ಬಗ್ಗೆ ಮಾತನಾಡಿದ್ದ ಎಂಟಿಬಿ, ಅಬಕಾರಿ ಇಲಾಖೆಯಲ್ಲಿ ಮಾಡೋಕೆ ಏನಿದೆ? ಕಂಪನಿಗಳಿಂದ ಮದ್ಯ ಖರೀದಿಸಲಾಗುತ್ತದೆ. ಹೋಲ್​ಸೇಲ್ ದರದಲ್ಲಿ ಡೀಲರ್​ಗಳಿಗೆ ಮದ್ಯ ಕೊಡಲಾಗುತ್ತದೆ. ಡೀಲರ್​ಗಳು ಇದನ್ನು ಅಂಗಡಿಗೆ ಮಾರಿ, ಬಂದ ಹಣವನ್ನು ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಅಸಮಾಧಾನದ ಬುಗ್ಗೆ ಚಿಮ್ಮಿಸಿದ್ದರು. ಇನ್ನು ಖಾತೆ ಬದಲಾವಣೆ ಮಾಡಿದ್ದಕ್ಕೆ ಗೋಪಾಲಯ್ಯ ಕಿಡಿಕಾರಿದ್ದರು. ನನ್ನ ಖಾತೆ ಬದಲಾವಣೆ ಮಾಡಿದ್ದಾರೆ. ಸಂಜೆ ಸಿಎಂ ಜತೆ ಮಾತಾಡಿ ನಾನೇನು ತಪ್ಪು ಮಾಡಿದ್ದೇವೆ ಎಂದು ಕೇಳುತ್ತೇನೆ ಎಂದಿದ್ದರು.

ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್​​ಸಿಗ್ನಲ್.. ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?