AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರು ಸಮಾಧಾನವಾಗಿದ್ದಾರೆ, ಇಲಾಖೆ ಇಷ್ಟವಾಗದಿದ್ರೆ ಮುಂದೆ ನೋಡೋಣ: ಬಿ.ಎಸ್.ಯಡಿಯೂರಪ್ಪ

ಸಚಿವರಾದ ಬಸವರಾಜ ಬೊಮ್ಮಾಯಿ, ಅಶೋಕ್ ಸಮ್ಮುಖದಲ್ಲಿ ಮಾಧ್ಯಮಗಳ ಮುಂದೆ ತರಾತುರಿಯಲ್ಲಿ ಬಂದ ಇಬ್ಬರು, ನಮಗೇನು ಅಸಮಾಧಾನವಿಲ್ಲ ಎಂದು ಹೇಳಿ ಮತ್ತೆ ಸಿಎಂ ನಿವಾಸದ ಒಳಗೆ ತೆರಳಿದ್ದಾರೆ.

ಸಚಿವರು ಸಮಾಧಾನವಾಗಿದ್ದಾರೆ, ಇಲಾಖೆ ಇಷ್ಟವಾಗದಿದ್ರೆ ಮುಂದೆ ನೋಡೋಣ: ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 4:28 PM

Share

ಬೆಂಗಳೂರು: ನೂತನ ಖಾತೆ ಸಂಬಂಧ ಸಚಿವರಿಗೆ ಅಸಮಾಧಾನವಿಲ್ಲ. ಎಲ್ಲ ಸಚಿವರು ಸಮಾಧಾನವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಅಸಮಾಧಾನಿತರ ಜೊತೆ ಮಾತುಕತೆ ನಡೆಸಿದ ನಂತರ ಮಾತನಾಡಿದ ಯಡಿಯೂರಪ್ಪ, ಸಚಿವ ಸ್ಥಾನ ಹಂಚಿಕೆ ಮಾಡುವುದು ಸುಲಭದ ಕೆಲಸವಲ್ಲ. ಮಾಧುಸ್ವಾಮಿ, ಗೋಪಾಲಯ್ಯ ಸಮಾಧಾನವಾಗಿದ್ದಾರೆ.  ಅಕಸ್ಮಾತ್ ಅವರಿಗೆ ಸಚಿವ ಸ್ಥಾನ ಇಷ್ಟವಾಗದಿದ್ದರೆ ಮುಂದೆ ನೋಡೋಣ. ಎಲ್ಲರ ಜತೆಯೂ ನಾನು ಮಾತನಾಡಿದ್ದೇನೆ ಎಂದರು.

ಖಾತೆ ಹಂಚಿಕೆ ವಿಚಾರಕ್ಕೆ ಸಬಂಧಿಸಿದಂತೆ ಅಬಕಾರಿ ಸಚಿವ ಎಂ.ಟಿ.ಬಿ.ನಾಗರಾಜ್​ ಹಾಗೂ ತೋಟಗಾರಿಕೆ ಮತ್ತು ಸಕ್ಕರೆ ಸಚಿವ ಗೋಪಾಲಯ್ಯ ಅಸಮಾಧಾನ ಹೊರ ಹಾಕಿದ್ದರು. ಇವರನ್ನು ಕಾವೇರಿ ನಿವಾಸಕ್ಕೆ ಕರೆಸಿ ಯಡಿರೂಪ್ಪ ಮಾತುಕತೆ ನಡೆಸಿದ್ದರು. ಈಗ ಮಾತುಕತೆ ಯಶಸ್ವಿಯಾದಂತಾಗಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿ ಬಿ.ಎಸ್.ಯಡಿಯೂರಪ್ಪ ಬಳಿ ಸಚಿವರಿಬ್ಬರೂ ಚರ್ಚೆ ನಡೆಸಿದ್ದಾರೆ. ನಂತರ  ಸಚಿವರಾದ ಬಸವರಾಜ ಬೊಮ್ಮಾಯಿ, ಅಶೋಕ್ ಸಮ್ಮುಖದಲ್ಲಿ ಮಾಧ್ಯಮಗಳ ಮುಂದೆ ತರಾತುರಿಯಲ್ಲಿ ಬಂದ ಇಬ್ಬರು, ನಮಗೇನು ಅಸಮಾಧಾನವಿಲ್ಲ ಎಂದು ಹೇಳಿ ಮತ್ತೆ ಸಿಎಂ ನಿವಾಸದ ಒಳಗೆ ತೆರಳಿದ್ದಾರೆ.

ಅಬಕಾರಿ ಖಾತೆ ನೀಡಿರುವ ಬಗ್ಗೆ ಮಾತನಾಡಿದ್ದ ಎಂಟಿಬಿ, ಅಬಕಾರಿ ಇಲಾಖೆಯಲ್ಲಿ ಮಾಡೋಕೆ ಏನಿದೆ? ಕಂಪನಿಗಳಿಂದ ಮದ್ಯ ಖರೀದಿಸಲಾಗುತ್ತದೆ. ಹೋಲ್​ಸೇಲ್ ದರದಲ್ಲಿ ಡೀಲರ್​ಗಳಿಗೆ ಮದ್ಯ ಕೊಡಲಾಗುತ್ತದೆ. ಡೀಲರ್​ಗಳು ಇದನ್ನು ಅಂಗಡಿಗೆ ಮಾರಿ, ಬಂದ ಹಣವನ್ನು ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಅಸಮಾಧಾನದ ಬುಗ್ಗೆ ಚಿಮ್ಮಿಸಿದ್ದರು. ಇನ್ನು ಖಾತೆ ಬದಲಾವಣೆ ಮಾಡಿದ್ದಕ್ಕೆ ಗೋಪಾಲಯ್ಯ ಕಿಡಿಕಾರಿದ್ದರು. ನನ್ನ ಖಾತೆ ಬದಲಾವಣೆ ಮಾಡಿದ್ದಾರೆ. ಸಂಜೆ ಸಿಎಂ ಜತೆ ಮಾತಾಡಿ ನಾನೇನು ತಪ್ಪು ಮಾಡಿದ್ದೇವೆ ಎಂದು ಕೇಳುತ್ತೇನೆ ಎಂದಿದ್ದರು.

ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್​​ಸಿಗ್ನಲ್.. ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?