Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ, ರಾಜ್ಯ ಸರ್ಕಾರದ ಆರ್ಥಿಕ ಸೇವೆಗಳನ್ನು ಜನರಿಗೆ ತಿಳಿಸಲು ಅಂಚೆ ಇಲಾಖೆಯಿಂದ ವಿಶಿಷ್ಟ ಅಭಿಯಾನ

ಜನರಲ್ಲಿ ಆರ್ಥಿಕತೆ ಸೇವೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಸಾರ್ವಜನಿಕ ಸೇವೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಎಲ್ಲಾ ಅಂಚೆ ವಿಭಾಗಗಳಿಂದ ದಕ್ ಜನ ಸಂಪರ್ಕ ಅಭಿಯಾನವನ್ನು ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ.

ಕೇಂದ್ರ, ರಾಜ್ಯ ಸರ್ಕಾರದ ಆರ್ಥಿಕ ಸೇವೆಗಳನ್ನು ಜನರಿಗೆ ತಿಳಿಸಲು ಅಂಚೆ ಇಲಾಖೆಯಿಂದ ವಿಶಿಷ್ಟ ಅಭಿಯಾನ
ಸಾಂರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 04, 2023 | 11:00 AM

ಉತ್ತರ ಕನ್ನಡ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ (State Government) ಸೇವೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಕರ್ನಾಟಕ ಅಂಚೆ ಇಲಾಖೆ (Karnataka postal department) ಮುಂದಾಗಿದೆ. ಇದರ ಮೊದಲ ಭಾಗವಾಗಿ ಶಿರಸಿ ಅಂಚೆ ವಿಭಾಗವು ಮೂರು ದಿನಗಳ ಕಾಲ “ದಕ್ ಜನ ಸಂಪರ್ಕ ಅಭಿಯಾನ” ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಆಗಸ್ಟ್ 29 ರಿಂದ 31 ರವರೆಗೆ ಕಾಂಗೋಡು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಶಿರ್ಸಿ ಅಂಚೆ ವಿಭಾಗದ ಅಧೀಕ್ಷಕ ಜಿ. ಹೂವಪ್ಪ ಅವರು ಉದ್ಘಾಟಿಸಿದರು. ಈ ಅಭಿಯಾನದಲ್ಲಿ ಇಲಾಖೆಯ ವಿವಿಧ ಉಳಿತಾಯ ಯೋಜನೆಗಳು ಮತ್ತು ಅಂಚೆ ಜೀವ ವಿಮಾ ಸೌಲಭ್ಯಗಳು/ ಅಪಘಾತ ವಿಮಾ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಸಲಾಯಿತು. ಅಂಚೆ ಇಲಾಖೆಯ ಈ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Small Business Idea: ಕೇವಲ 5 ಸಾವಿರ ಹೂಡಿಕೆ ಮಾಡಿ ಭರ್ಜರಿ ಆದಾಯ ಗಳಿಸಿ; ಅಂಚೆ ಇಲಾಖೆ ನೀಡಿದೆ ಅವಕಾಶ

200 ಕ್ಕೂ ಹೆಚ್ಚು ಜನರು ಈ ಉಳಿತಾಯ ಯೋಜನೆಗಳನ್ನು (ಉಳಿತಾಯ ಬ್ಯಾಂಕ್ ಖಾತೆ, ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ, ಸಾರ್ವಜನಿಕ ಭವಿಷ್ಯ ನಿಧಿ), ಅಂಚೆ ಜೀವ ವಿಮಾ ಸೇವೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸೇವೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ.

ಜನರಲ್ಲಿ ಆರ್ಥಿಕತೆ ಸೇವೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಸಾರ್ವಜನಿಕ ಸೇವೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಎಲ್ಲಾ ಅಂಚೆ ವಿಭಾಗಗಳಿಂದ ದಕ್ ಜನ ಸಂಪರ್ಕ ಅಭಿಯಾನವನ್ನು ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ