Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವ ಹುದ್ದೆಯಿಂದ ಸುರೇಶ್ ಕುಮಾರ್ ಕೈಬಿಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಗ್ರಹ

ಕಳೆದ ವರ್ಷ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನೇ ನೀಡಿಲ್ಲ ಎಂಬ ಸತ್ಯ ಶಿಕ್ಷಣ ಇಲಾಖೆಯ ಸರ್ವೇಯಲ್ಲಿಯೇ ಬಯಲಾಗಿದೆ. ಶಿಕ್ಷಕರಿಗೆ ಕೊರೊನಾ ವಾರಿಯರ್ಸ್​ ಅಂತ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೂ ಸಹ ಯಾವುದೇ ಪ್ಯಾಕೇಜ್​ ಮಾತ್ರ ಕೈ ಸೇರಿಲ್ಲ. ಖಾಸಗಿ ಶಾಲೆಗಳಿಗೆ ನೀಡಬೇಕಾದ ಆರ್​ಟಿಇ ಶುಲ್ಕ ಮರುಪಾವತಿಯನ್ನ ವಿಳಂಬ ಮಾಡಲಾಗುತ್ತಿದೆ: ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿ

ಶಿಕ್ಷಣ ಸಚಿವ ಹುದ್ದೆಯಿಂದ ಸುರೇಶ್ ಕುಮಾರ್ ಕೈಬಿಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಗ್ರಹ
ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us
TV9 Web
| Updated By: guruganesh bhat

Updated on:Jul 02, 2021 | 4:28 PM

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಪತ್ರ ಬರೆದಿದೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಅತೃಪ್ತಿ ಸೂಚಿಸಿರುವ ಒಕ್ಕೂಟ ಈ ಪತ್ರ ಬರೆದಿದೆ.

ಸಚಿವ ಸುರೇಶ್​ ಕುಮಾರ್​​, ಅಧಿಕಾರ ಸ್ವೀಕರಿಸಿದ ಬಳಿಕ ಖಾಸಗಿ ಶಾಲೆಗಳ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಸರ್ಕಾರಿ, ಖಾಸಗಿ ಶಾಲಾ ಮಕ್ಕಳೆನ್ನದೆ ಎಲ್ಲಾ ಮಕ್ಕಳಿಗೂ ಹಸಿವು, ಅಪೌಷ್ಠಿಕತೆ ಇದ್ದೇ ಇರುತ್ತದೆ. ಆದರೆ ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಆಹಾರ ವಿತರಿಸುವುದು ಹಾಗೂ ಸರ್ಕಾರಿ ಶಾಲೆಗಳಿಗೆ ಸೇರಿದರೆ ಮಾತ್ರ ಎನ್ನುವ ನಡೆ ಅಮಾನವೀಯ. ಮಕ್ಕಳ ಹಸಿವನ್ನು ದೌರ್ಬಲ್ಯವಾಗಿ ದಾಖಲಾತಿಗೆ ಬಳಸಿಕೊಳ್ಳುವುದು ಕೆಳದರ್ಜೆಯ ಮನಸ್ಥಿತಿ ಎಂದು ಒಕ್ಕೂಟ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಆರೋಪಿಸಿ ಪತ್ರ ಬರೆದಿದೆ

ಖಾಸಗಿ ಶಾಲಾ ಶುಲ್ಕ ವಿವಾದವನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಿ ಬಹುತೇಕ ಖಾಸಗಿ ಶಾಲೆಗಳ ಮೇಲೆ ಸಾರ್ವಜನಿಕ ಆಕ್ರೋಶ ಹೆಚ್ಚುವಂತೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಬೇಕೆಂಬ ಮಹದಾಸೆಯಿಂದ ಶಾಲೆಗಳನ್ನ ಪ್ರಾರಂಭಿಸದೆ ಕೇವಲ ಹೆಸರಿಗೆ ಮಾತ್ರ ದಾಖಲಾತಿ ಪ್ರಾರಂಭಿಸಿ ಸರ್ಕಾರಿ ಶಾಲೆಗಳಲ್ಲಿ ಸೇರುವ ಹಾಗೂ ಈಗಾಗಲೇ ಇರುವ ಸುಮಾರು 40 ಲಕ್ಷ ಮಕ್ಕಳಿಗೆ ಶಿಕ್ಷಣ ನೀಡದೆ ವಂಚನೆ ಮಾಡಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನೀಡುತ್ತೇವೆ ಎಂದು ಸಚಿವರು ಸುಳ್ಳು ಹೇಳುತ್ತಿದ್ದಾರೆ. ಕಳೆದ ವರ್ಷ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನೇ ನೀಡಿಲ್ಲ ಎಂಬ ಸತ್ಯ ಶಿಕ್ಷಣ ಇಲಾಖೆಯ ಸರ್ವೇಯಲ್ಲಿಯೇ ಬಯಲಾಗಿದೆ. ಶಿಕ್ಷಕರಿಗೆ ಕೊರೊನಾ ವಾರಿಯರ್ಸ್​ ಅಂತ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೂ ಸಹ ಯಾವುದೇ ಪ್ಯಾಕೇಜ್​ ಮಾತ್ರ ಕೈ ಸೇರಿಲ್ಲ. ಖಾಸಗಿ ಶಾಲೆಗಳಿಗೆ ನೀಡಬೇಕಾದ ಆರ್​ಟಿಇ ಶುಲ್ಕ ಮರುಪಾವತಿಯನ್ನ ವಿಳಂಬ ಮಾಡಲಾಗುತ್ತಿದೆ. ಇಂತಹ ಮನಸ್ಥಿತಿ ಉಳ್ಳ ಶಿಕ್ಷಣ ಸಚಿವರನ್ನು ಕೂಡಲೇ ವಜಾಗೊಳಿಸಿ ಎಂದು ಆರೋಪಿಸಿ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಪತ್ರ ಬರೆದಿದೆ.

ಮಂಡ್ಯದ ಕಾರ್ಮೆಲಾ ಕಾನ್ವೆಂಟ್‌ನಲ್ಲಿ ಶುಲ್ಕ ವಿಚಾರಕ್ಕೆ ಪೋಷಕರು, ಶಾಲಾ ಆಡಳಿತ ಮಂಡಳಿ ನಡುವೆ ಗಲಾಟೆ ನಡೆದಿದೆ. ಸಂಪೂರ್ಣ ಶುಲ್ಕ ಕಟ್ಟಿದರಷ್ಟೇ ಮಾರ್ಕ್ಸ್​ ಕಾರ್ಡ್, ಅಡ್ಮಿಷನ್ ನೀಡಲು ಶಾಲೆ ಮುಂದಾಗಿದ್ದು, ಕಳೆದ ವರ್ಷ, ಈ ವರ್ಷ ಸಂಪೂರ್ಣ ಶುಲ್ಕ ಪಾವತಿಗೆ ಒತ್ತಡ ಹಾಕಿದೆ. ಕಳೆದ ವರ್ಷಕ್ಕಿಂತ ಈ ವರ್ಷ 4 ಸಾವಿರ ರೂ. ಶುಲ್ಕ ಹೆಚ್ಚಳ ಮಾಡಿದೆ. ಹೀಗಾಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.

ಇದನ್ನೂ ಓದಿ: 

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಭರದ ಸಿದ್ಧತೆ

(Karnataka private school and college administration wrote letter to CM Yediyurappa to dismiss Education Minister Suresh Kumar)

Published On - 4:18 pm, Fri, 2 July 21

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ