AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವ ಹುದ್ದೆಯಿಂದ ಸುರೇಶ್ ಕುಮಾರ್ ಕೈಬಿಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಗ್ರಹ

ಕಳೆದ ವರ್ಷ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನೇ ನೀಡಿಲ್ಲ ಎಂಬ ಸತ್ಯ ಶಿಕ್ಷಣ ಇಲಾಖೆಯ ಸರ್ವೇಯಲ್ಲಿಯೇ ಬಯಲಾಗಿದೆ. ಶಿಕ್ಷಕರಿಗೆ ಕೊರೊನಾ ವಾರಿಯರ್ಸ್​ ಅಂತ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೂ ಸಹ ಯಾವುದೇ ಪ್ಯಾಕೇಜ್​ ಮಾತ್ರ ಕೈ ಸೇರಿಲ್ಲ. ಖಾಸಗಿ ಶಾಲೆಗಳಿಗೆ ನೀಡಬೇಕಾದ ಆರ್​ಟಿಇ ಶುಲ್ಕ ಮರುಪಾವತಿಯನ್ನ ವಿಳಂಬ ಮಾಡಲಾಗುತ್ತಿದೆ: ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿ

ಶಿಕ್ಷಣ ಸಚಿವ ಹುದ್ದೆಯಿಂದ ಸುರೇಶ್ ಕುಮಾರ್ ಕೈಬಿಡಲು ಖಾಸಗಿ ಶಿಕ್ಷಣ ಸಂಸ್ಥೆಗಳ ಆಗ್ರಹ
ಶಿಕ್ಷಣ ಸಚಿವ ಸುರೇಶ್ ಕುಮಾರ್
TV9 Web
| Updated By: guruganesh bhat|

Updated on:Jul 02, 2021 | 4:28 PM

Share

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಪತ್ರ ಬರೆದಿದೆ. ಸಚಿವ ಸುರೇಶ್ ಕುಮಾರ್ ವಿರುದ್ಧ ಅತೃಪ್ತಿ ಸೂಚಿಸಿರುವ ಒಕ್ಕೂಟ ಈ ಪತ್ರ ಬರೆದಿದೆ.

ಸಚಿವ ಸುರೇಶ್​ ಕುಮಾರ್​​, ಅಧಿಕಾರ ಸ್ವೀಕರಿಸಿದ ಬಳಿಕ ಖಾಸಗಿ ಶಾಲೆಗಳ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಸರ್ಕಾರಿ, ಖಾಸಗಿ ಶಾಲಾ ಮಕ್ಕಳೆನ್ನದೆ ಎಲ್ಲಾ ಮಕ್ಕಳಿಗೂ ಹಸಿವು, ಅಪೌಷ್ಠಿಕತೆ ಇದ್ದೇ ಇರುತ್ತದೆ. ಆದರೆ ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಆಹಾರ ವಿತರಿಸುವುದು ಹಾಗೂ ಸರ್ಕಾರಿ ಶಾಲೆಗಳಿಗೆ ಸೇರಿದರೆ ಮಾತ್ರ ಎನ್ನುವ ನಡೆ ಅಮಾನವೀಯ. ಮಕ್ಕಳ ಹಸಿವನ್ನು ದೌರ್ಬಲ್ಯವಾಗಿ ದಾಖಲಾತಿಗೆ ಬಳಸಿಕೊಳ್ಳುವುದು ಕೆಳದರ್ಜೆಯ ಮನಸ್ಥಿತಿ ಎಂದು ಒಕ್ಕೂಟ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಆರೋಪಿಸಿ ಪತ್ರ ಬರೆದಿದೆ

ಖಾಸಗಿ ಶಾಲಾ ಶುಲ್ಕ ವಿವಾದವನ್ನು ಉದ್ದೇಶಪೂರ್ವಕವಾಗಿ ಹೆಚ್ಚಿಸಿ ಬಹುತೇಕ ಖಾಸಗಿ ಶಾಲೆಗಳ ಮೇಲೆ ಸಾರ್ವಜನಿಕ ಆಕ್ರೋಶ ಹೆಚ್ಚುವಂತೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಬೇಕೆಂಬ ಮಹದಾಸೆಯಿಂದ ಶಾಲೆಗಳನ್ನ ಪ್ರಾರಂಭಿಸದೆ ಕೇವಲ ಹೆಸರಿಗೆ ಮಾತ್ರ ದಾಖಲಾತಿ ಪ್ರಾರಂಭಿಸಿ ಸರ್ಕಾರಿ ಶಾಲೆಗಳಲ್ಲಿ ಸೇರುವ ಹಾಗೂ ಈಗಾಗಲೇ ಇರುವ ಸುಮಾರು 40 ಲಕ್ಷ ಮಕ್ಕಳಿಗೆ ಶಿಕ್ಷಣ ನೀಡದೆ ವಂಚನೆ ಮಾಡಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನೀಡುತ್ತೇವೆ ಎಂದು ಸಚಿವರು ಸುಳ್ಳು ಹೇಳುತ್ತಿದ್ದಾರೆ. ಕಳೆದ ವರ್ಷ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನೇ ನೀಡಿಲ್ಲ ಎಂಬ ಸತ್ಯ ಶಿಕ್ಷಣ ಇಲಾಖೆಯ ಸರ್ವೇಯಲ್ಲಿಯೇ ಬಯಲಾಗಿದೆ. ಶಿಕ್ಷಕರಿಗೆ ಕೊರೊನಾ ವಾರಿಯರ್ಸ್​ ಅಂತ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೂ ಸಹ ಯಾವುದೇ ಪ್ಯಾಕೇಜ್​ ಮಾತ್ರ ಕೈ ಸೇರಿಲ್ಲ. ಖಾಸಗಿ ಶಾಲೆಗಳಿಗೆ ನೀಡಬೇಕಾದ ಆರ್​ಟಿಇ ಶುಲ್ಕ ಮರುಪಾವತಿಯನ್ನ ವಿಳಂಬ ಮಾಡಲಾಗುತ್ತಿದೆ. ಇಂತಹ ಮನಸ್ಥಿತಿ ಉಳ್ಳ ಶಿಕ್ಷಣ ಸಚಿವರನ್ನು ಕೂಡಲೇ ವಜಾಗೊಳಿಸಿ ಎಂದು ಆರೋಪಿಸಿ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಪತ್ರ ಬರೆದಿದೆ.

ಮಂಡ್ಯದ ಕಾರ್ಮೆಲಾ ಕಾನ್ವೆಂಟ್‌ನಲ್ಲಿ ಶುಲ್ಕ ವಿಚಾರಕ್ಕೆ ಪೋಷಕರು, ಶಾಲಾ ಆಡಳಿತ ಮಂಡಳಿ ನಡುವೆ ಗಲಾಟೆ ನಡೆದಿದೆ. ಸಂಪೂರ್ಣ ಶುಲ್ಕ ಕಟ್ಟಿದರಷ್ಟೇ ಮಾರ್ಕ್ಸ್​ ಕಾರ್ಡ್, ಅಡ್ಮಿಷನ್ ನೀಡಲು ಶಾಲೆ ಮುಂದಾಗಿದ್ದು, ಕಳೆದ ವರ್ಷ, ಈ ವರ್ಷ ಸಂಪೂರ್ಣ ಶುಲ್ಕ ಪಾವತಿಗೆ ಒತ್ತಡ ಹಾಕಿದೆ. ಕಳೆದ ವರ್ಷಕ್ಕಿಂತ ಈ ವರ್ಷ 4 ಸಾವಿರ ರೂ. ಶುಲ್ಕ ಹೆಚ್ಚಳ ಮಾಡಿದೆ. ಹೀಗಾಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.

ಇದನ್ನೂ ಓದಿ: 

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಭರದ ಸಿದ್ಧತೆ

(Karnataka private school and college administration wrote letter to CM Yediyurappa to dismiss Education Minister Suresh Kumar)

Published On - 4:18 pm, Fri, 2 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ