AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ ಎಂದಿವೆ.

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
ಎನ್​ಇಪಿ ರದ್ದತಿಗೆ ವಿರೋಧ
Vinay Kashappanavar
| Edited By: |

Updated on: Aug 25, 2023 | 9:49 AM

Share

ಬೆಂಗಳೂರು: ಹಿಂದಿನ ಬಿಜೆಪಿ (BJP) ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದು ಮಾಡಿ ಎಸ್​ಇಪಿಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ಮುಂದಾಗಿದೆ. ಈ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಹೇಳಿದ್ದರು. ಆದರೆ ರಾಜ್ಯ ಸರ್ಕಾರಕ್ಕೆ ಕೌಂಟರ್​ ಕೊಡಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಅಂತಾರಾಷ್ಟ್ರೀಯ ಮಕ್ಕಳ ಜೊತೆಗೆ ಸ್ಪರ್ಧಿಸಲು ಎನ್​ಇಪಿ ಅಗತ್ಯವಿದೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ. ಎನ್ಇಪಿ ಲೋಪ ದೋಷ ಸರಿಪಡಿಸಿಕೊಂಡು ಕೊಂಚ ಬದಲಾವಣೆ ಮಾಡಿಕೊಂಡು, ಎನ್ಇಪಿ ಮುಂದುವರೆಸಬೇಕು ಅಂತ ಖಾಸಗಿ ಶಾಲೆಗಳು ಒತ್ತಾಯ ಹೇರುತ್ತಿವೆ. ಇದರಿಂದ ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಎನ್‌ಇಪಿಯನ್ನು ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಬದಲಿಗೆ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದಾಗಿ ಹೇಳಿತ್ತು. ಅದರಂತೆ ಇದೀಗ ಎನ್​ಇಪಿ ರದ್ದು ಮಾಡಲು ಸರ್ಕಾರ ಯೋಜನೆ ರೂಪಿಸಿದೆ.

2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರವು ಪರಿಚಯಿಸಿದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್