AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ ಎಂದಿವೆ.

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
ಎನ್​ಇಪಿ ರದ್ದತಿಗೆ ವಿರೋಧ
ವಿನಯ್​ ಕಾಶಪ್ಪನವರ್​
| Edited By: ವಿವೇಕ ಬಿರಾದಾರ|

Updated on: Aug 25, 2023 | 9:49 AM

Share

ಬೆಂಗಳೂರು: ಹಿಂದಿನ ಬಿಜೆಪಿ (BJP) ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದು ಮಾಡಿ ಎಸ್​ಇಪಿಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ಮುಂದಾಗಿದೆ. ಈ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಹೇಳಿದ್ದರು. ಆದರೆ ರಾಜ್ಯ ಸರ್ಕಾರಕ್ಕೆ ಕೌಂಟರ್​ ಕೊಡಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಅಂತಾರಾಷ್ಟ್ರೀಯ ಮಕ್ಕಳ ಜೊತೆಗೆ ಸ್ಪರ್ಧಿಸಲು ಎನ್​ಇಪಿ ಅಗತ್ಯವಿದೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ. ಎನ್ಇಪಿ ಲೋಪ ದೋಷ ಸರಿಪಡಿಸಿಕೊಂಡು ಕೊಂಚ ಬದಲಾವಣೆ ಮಾಡಿಕೊಂಡು, ಎನ್ಇಪಿ ಮುಂದುವರೆಸಬೇಕು ಅಂತ ಖಾಸಗಿ ಶಾಲೆಗಳು ಒತ್ತಾಯ ಹೇರುತ್ತಿವೆ. ಇದರಿಂದ ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಎನ್‌ಇಪಿಯನ್ನು ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಬದಲಿಗೆ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದಾಗಿ ಹೇಳಿತ್ತು. ಅದರಂತೆ ಇದೀಗ ಎನ್​ಇಪಿ ರದ್ದು ಮಾಡಲು ಸರ್ಕಾರ ಯೋಜನೆ ರೂಪಿಸಿದೆ.

2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರವು ಪರಿಚಯಿಸಿದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ