AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ ಎಂದಿವೆ.

ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
ಎನ್​ಇಪಿ ರದ್ದತಿಗೆ ವಿರೋಧ
Vinay Kashappanavar
| Edited By: |

Updated on: Aug 25, 2023 | 9:49 AM

Share

ಬೆಂಗಳೂರು: ಹಿಂದಿನ ಬಿಜೆಪಿ (BJP) ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ರದ್ದು ಮಾಡಿ ಎಸ್​ಇಪಿಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ಮುಂದಾಗಿದೆ. ಈ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಹೇಳಿದ್ದರು. ಆದರೆ ರಾಜ್ಯ ಸರ್ಕಾರಕ್ಕೆ ಕೌಂಟರ್​ ಕೊಡಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.

ಸರ್ಕಾರ ಮುಂದಿನ ವರ್ಷದಿಂದ ಎನ್​ಇಪಿ ರದ್ದುಪಡಿಸಲು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ನಮಗೆ ಎನ್ಇಪಿ ಬೇಕು, ಎಸ್ಇಪಿ ಬೇಡ ಅಂತ ಪಟ್ಟು ಹಿಡಿದಿವೆ. ಅಂತಾರಾಷ್ಟ್ರೀಯ ಮಕ್ಕಳ ಜೊತೆಗೆ ಸ್ಪರ್ಧಿಸಲು ಎನ್​ಇಪಿ ಅಗತ್ಯವಿದೆ. ಎಸ್​ಇಪಿ ಪಠ್ಯಕ್ರಮ ವ್ಯವಸ್ಥೆಯಿಂದ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆಯಾಗುತ್ತೆ. ಎನ್ಇಪಿ ಲೋಪ ದೋಷ ಸರಿಪಡಿಸಿಕೊಂಡು ಕೊಂಚ ಬದಲಾವಣೆ ಮಾಡಿಕೊಂಡು, ಎನ್ಇಪಿ ಮುಂದುವರೆಸಬೇಕು ಅಂತ ಖಾಸಗಿ ಶಾಲೆಗಳು ಒತ್ತಾಯ ಹೇರುತ್ತಿವೆ. ಇದರಿಂದ ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗಿದೆ.

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಎನ್‌ಇಪಿಯನ್ನು ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಬದಲಿಗೆ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದಾಗಿ ಹೇಳಿತ್ತು. ಅದರಂತೆ ಇದೀಗ ಎನ್​ಇಪಿ ರದ್ದು ಮಾಡಲು ಸರ್ಕಾರ ಯೋಜನೆ ರೂಪಿಸಿದೆ.

2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರವು ಪರಿಚಯಿಸಿದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ