AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PU Classes: ಮೇ 4ರವರೆಗಿನ ಪಿಯು ತರಗತಿ, ಪೂರ್ವ ಸಿದ್ಧತಾ ಪರೀಕ್ಷೆ ಸ್ಥಗಿತ

Karnataka PUC Exams: ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿದೆ.

Karnataka PU Classes: ಮೇ 4ರವರೆಗಿನ ಪಿಯು ತರಗತಿ, ಪೂರ್ವ ಸಿದ್ಧತಾ ಪರೀಕ್ಷೆ ಸ್ಥಗಿತ
ಸಾಂದರ್ಭಿಕ ಚಿತ್ರ
guruganesh bhat
|

Updated on:Apr 22, 2021 | 7:34 PM

Share

ಬೆಂಗಳೂರು: ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಸ್ಥಗಿತಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೇ 4ರವರೆಗೆ ಪಿಯುಸಿ ಭೌತಿಕ ತರಗತಿಗಳು ಸ್ಥಗಿತಗೊಳ್ಳಲಿದ್ದು, ಪ್ರಥಮ, ದ್ವಿತೀಯ ಪಿಯು ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌ ಮಾತ್ರ ನಡೆಯಲಿದೆ. ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿದೆ.

ಮೇ 4ರವರೆಗೆ ಪಿಯುಸಿ ತರಗತಿಗಳು ಬಂದ್ ಆಗುವ ಕಾರಣ ವರ್ಕ್ ಫ್ರಂ ಹೋಂ ನೀಡಲು ಪಿಯು ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಮನೆಯಿಂದಲೆ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ  ಉಪನ್ಯಾಸಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಮನವಿ ಸಲ್ಲಿಸಲಾಗಿದೆ.

ಈಗಾಗಲೇ ಮೆಡಿಕಲ್ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೈಸೂರು ಜಿಲ್ಲೆಯ ಮೇಟಗಳ್ಳಿಯಲ್ಲಿರುವ ಕೊವಿಡ್ ಆಸ್ಪತ್ರೆಗೆ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ,  ವೈದ್ಯಕೀಯ ಪರೀಕ್ಷೆ ಮುಂದೂಡಿಕೆ ಕುರಿತು ಮಾತನಾಡಿದ್ದರು. ಇಂದು ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ, ಪದವಿ ಸೇರಿ ಎಲ್ಲಾ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣದ ಅಂತಿಮ ವರ್ಷದ ವಿದ್ಯಾರ್ಥಿಗಳನ್ನ ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಎಸ್​ಎಸ್​ಎಲ್​ ಪರೀಕ್ಷೆಗಳ ಕುರಿತು ಇತ್ತೀಚಿಗೆ ಮಾತನಾಡಿದ್ದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯುವುದರ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ. ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ರಾಜ್ಯ ಸರ್ಕಾರದಿಂದ ಕೊವಿಡ್ 19 ಸೋಂಕು ತಡೆಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಯಾಗಿದೆ. ರಾಜ್ಯಾದ್ಯಂತ ವಿವಿಧ ನಗರಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಬಂದ್‌ ಮಾಡಲಾಗುತ್ತಿದೆ. ಬೆಂಗಳೂರಿನ ಚಿಕ್ಕಪೇಟೆ, ಮೆಜೆಸ್ಟಿಕ್,ಮೈಸೂರು ದಾವಣಗೆರೆ ಮಂಡ್ಯ ಸೇರಿದಂತೆ ಹಲವೆಡೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಬಂದ್‌ ಮಾಡಲಾಗುತ್ತಿದೆ.  ವಾರಾಂತ್ಯದ ಕರ್ಫ್ಯೂ ನಾಳೆ ಸಂಜೆಯಿಂದ ಜಾರಿಗೆ ಬರಲಿದ್ದರೂ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಬಟ್ಟೆ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ.

ಮೇ 4ರವರೆಗೆ ಬಟ್ಟೆ ಅಂಗಡಿ ತೆರೆಯದಂತೆ ಸೂಚಿಸಿದ್ದಾರೆ ಎಂದು ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ಅಂಗಡಿ ವ್ಯಾಪಾರಿ ಹೇಳಿದ್ದಾರೆ. ಅಂಗಡಿ ಮುಚ್ಚಿಸಲು ಆದೇಶ ಬಂದಿದೆ. ಹೀಗಾಗಿ ಬಟ್ಟೆ ಅಂಗಡಿ ಮುಚ್ಚಿಸುತ್ತಿದ್ದೇವೆ. ಅಂಗಡಿ ಮುಚ್ಚದಿದ್ದರೆ ಪೊಲೀಸ್ ಠಾಣೆಗೆ ಬನ್ನಿ ಎಂದು ಪೊಲೀಸರು ತಿಳಿಸಿದ್ದಾರೆ.ಯಾವ ಅಂಗಡಿಗಳಿಗೂ ಇಲ್ಲದ ರೂಲ್ಸ್ ನಮಗೆ ಮಾತ್ರ ಏಕೆ ಎಂದು ಸದ್ಯ ಚಿಕ್ಕಪೇಟೆಯ ಬಟ್ಟೆ ಅಂಗಡಿ ವ್ಯಾಪಾರಿ ಅಳಲು ತೋಡಿಕೊಂಡಿದ್ದಾರೆ. ಬಟ್ಟೆ ಅಂಗಡಿಗಳನ್ನ ಮಾತ್ರ ಯಾಕೆ ಬಂದ್ ಮಾಡಬೇಕು. ಇದ್ದಕ್ಕಿದ್ದಂತೆ ಹೀಗೆ ಹೇಳಿದರೆ ಏನು ಮಾಡುವುದು ಎಂದು ಅವೆನ್ಯೂ ರಸ್ತೆಯ ಬಟ್ಟೆ ಮಾರಾಟ ಮಾಡುವ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Explainer: ಮಕ್ಕಳನ್ನೂ ಬಾಧಿಸುತ್ತಿದೆ ಕೊರೊನಾ; ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ ಈ ಸ್ಟೋರಿ‌ ಮಿಸ್ ಮಾಡದೇ ಓದಿ

ವೈದ್ಯಕೀಯ ಪರೀಕ್ಷೆ ಮುಂದೂಡಿಕೆ, ಅಂತಿಮ ವರ್ಷದ ವಿದ್ಯಾರ್ಥಿಗಳನ್ನ ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಲಾಗುವುದು; ಡಾ.ಕೆ.ಸುಧಾಕರ್

Published On - 7:13 pm, Thu, 22 April 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ