AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PU Classes: ಮೇ 4ರವರೆಗಿನ ಪಿಯು ತರಗತಿ, ಪೂರ್ವ ಸಿದ್ಧತಾ ಪರೀಕ್ಷೆ ಸ್ಥಗಿತ

Karnataka PUC Exams: ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿದೆ.

Karnataka PU Classes: ಮೇ 4ರವರೆಗಿನ ಪಿಯು ತರಗತಿ, ಪೂರ್ವ ಸಿದ್ಧತಾ ಪರೀಕ್ಷೆ ಸ್ಥಗಿತ
ಸಾಂದರ್ಭಿಕ ಚಿತ್ರ
guruganesh bhat
|

Updated on:Apr 22, 2021 | 7:34 PM

Share

ಬೆಂಗಳೂರು: ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಸ್ಥಗಿತಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೇ 4ರವರೆಗೆ ಪಿಯುಸಿ ಭೌತಿಕ ತರಗತಿಗಳು ಸ್ಥಗಿತಗೊಳ್ಳಲಿದ್ದು, ಪ್ರಥಮ, ದ್ವಿತೀಯ ಪಿಯು ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌ ಮಾತ್ರ ನಡೆಯಲಿದೆ. ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿದೆ.

ಮೇ 4ರವರೆಗೆ ಪಿಯುಸಿ ತರಗತಿಗಳು ಬಂದ್ ಆಗುವ ಕಾರಣ ವರ್ಕ್ ಫ್ರಂ ಹೋಂ ನೀಡಲು ಪಿಯು ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಮನೆಯಿಂದಲೆ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ  ಉಪನ್ಯಾಸಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಮನವಿ ಸಲ್ಲಿಸಲಾಗಿದೆ.

ಈಗಾಗಲೇ ಮೆಡಿಕಲ್ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೈಸೂರು ಜಿಲ್ಲೆಯ ಮೇಟಗಳ್ಳಿಯಲ್ಲಿರುವ ಕೊವಿಡ್ ಆಸ್ಪತ್ರೆಗೆ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ,  ವೈದ್ಯಕೀಯ ಪರೀಕ್ಷೆ ಮುಂದೂಡಿಕೆ ಕುರಿತು ಮಾತನಾಡಿದ್ದರು. ಇಂದು ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ, ಪದವಿ ಸೇರಿ ಎಲ್ಲಾ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣದ ಅಂತಿಮ ವರ್ಷದ ವಿದ್ಯಾರ್ಥಿಗಳನ್ನ ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಎಸ್​ಎಸ್​ಎಲ್​ ಪರೀಕ್ಷೆಗಳ ಕುರಿತು ಇತ್ತೀಚಿಗೆ ಮಾತನಾಡಿದ್ದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯುವುದರ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ. ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ರಾಜ್ಯ ಸರ್ಕಾರದಿಂದ ಕೊವಿಡ್ 19 ಸೋಂಕು ತಡೆಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಯಾಗಿದೆ. ರಾಜ್ಯಾದ್ಯಂತ ವಿವಿಧ ನಗರಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಬಂದ್‌ ಮಾಡಲಾಗುತ್ತಿದೆ. ಬೆಂಗಳೂರಿನ ಚಿಕ್ಕಪೇಟೆ, ಮೆಜೆಸ್ಟಿಕ್,ಮೈಸೂರು ದಾವಣಗೆರೆ ಮಂಡ್ಯ ಸೇರಿದಂತೆ ಹಲವೆಡೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಬಂದ್‌ ಮಾಡಲಾಗುತ್ತಿದೆ.  ವಾರಾಂತ್ಯದ ಕರ್ಫ್ಯೂ ನಾಳೆ ಸಂಜೆಯಿಂದ ಜಾರಿಗೆ ಬರಲಿದ್ದರೂ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಬಟ್ಟೆ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ.

ಮೇ 4ರವರೆಗೆ ಬಟ್ಟೆ ಅಂಗಡಿ ತೆರೆಯದಂತೆ ಸೂಚಿಸಿದ್ದಾರೆ ಎಂದು ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ಅಂಗಡಿ ವ್ಯಾಪಾರಿ ಹೇಳಿದ್ದಾರೆ. ಅಂಗಡಿ ಮುಚ್ಚಿಸಲು ಆದೇಶ ಬಂದಿದೆ. ಹೀಗಾಗಿ ಬಟ್ಟೆ ಅಂಗಡಿ ಮುಚ್ಚಿಸುತ್ತಿದ್ದೇವೆ. ಅಂಗಡಿ ಮುಚ್ಚದಿದ್ದರೆ ಪೊಲೀಸ್ ಠಾಣೆಗೆ ಬನ್ನಿ ಎಂದು ಪೊಲೀಸರು ತಿಳಿಸಿದ್ದಾರೆ.ಯಾವ ಅಂಗಡಿಗಳಿಗೂ ಇಲ್ಲದ ರೂಲ್ಸ್ ನಮಗೆ ಮಾತ್ರ ಏಕೆ ಎಂದು ಸದ್ಯ ಚಿಕ್ಕಪೇಟೆಯ ಬಟ್ಟೆ ಅಂಗಡಿ ವ್ಯಾಪಾರಿ ಅಳಲು ತೋಡಿಕೊಂಡಿದ್ದಾರೆ. ಬಟ್ಟೆ ಅಂಗಡಿಗಳನ್ನ ಮಾತ್ರ ಯಾಕೆ ಬಂದ್ ಮಾಡಬೇಕು. ಇದ್ದಕ್ಕಿದ್ದಂತೆ ಹೀಗೆ ಹೇಳಿದರೆ ಏನು ಮಾಡುವುದು ಎಂದು ಅವೆನ್ಯೂ ರಸ್ತೆಯ ಬಟ್ಟೆ ಮಾರಾಟ ಮಾಡುವ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Explainer: ಮಕ್ಕಳನ್ನೂ ಬಾಧಿಸುತ್ತಿದೆ ಕೊರೊನಾ; ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ ಈ ಸ್ಟೋರಿ‌ ಮಿಸ್ ಮಾಡದೇ ಓದಿ

ವೈದ್ಯಕೀಯ ಪರೀಕ್ಷೆ ಮುಂದೂಡಿಕೆ, ಅಂತಿಮ ವರ್ಷದ ವಿದ್ಯಾರ್ಥಿಗಳನ್ನ ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಲಾಗುವುದು; ಡಾ.ಕೆ.ಸುಧಾಕರ್

Published On - 7:13 pm, Thu, 22 April 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ