AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!

2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ ಮಂಜೂರಾಗಿದೆ. ಗದಗ-ವಾಡಿ, ತುಮಕೂರು-ಚಿತ್ರದುರ್ಗ-ದಾವಣಗೆರೆ ಸೇರಿದಂತೆ ಹಲವು ಪ್ರಮುಖ ರೈಲ್ವೆ ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗಗಳು ನಡೆಯಲಿವೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!
ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​..!
ಹರೀಶ್ ಜಿ.ಆರ್​.
| Edited By: |

Updated on:Feb 01, 2025 | 5:46 PM

Share

ಬೆಂಗಳೂರು, ಫೆಬ್ರವರಿ 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ (Budget) ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ಮೀಸಲಿಡಲಾಗಿದೆ.

ಸಚಿವ ವಿ.ಸೋಮಣ್ಣ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿರುವ ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ ಮೀಸಲಾಡಲಾಗಿತ್ತು. ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಯಾವೆಲ್ಲಾ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ

  • ಗದಗ-ವಾಡಿ ಮಾರ್ಗದ ಯೋಜನೆಗೆ 549.45 ಕೋಟಿ ರೂ.
  • ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ 549.45 ಕೋಟಿ ರೂ.
  • ಬಾಗಲಕೋಟ-ಕುಡಚಿ ಮಾರ್ಗದ ಯೋಜನೆಗೆ 428.1 ಕೋಟಿ ರೂ.
  • ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ತಿನೈಘಾಟ್-ವಾಸ್ಕೋ ಡಿ ಗಾಮಾ (352.28 ಕಿ.ಮೀ) ರೈಲ್ವೆ ಮಾರ್ಗದ ಯೋಜನೆಗೆ 413.73 ಕೋಟಿ ರೂ.
  • ಹೊಟಗಿ-ಕುಡಗಿ-ಗದಗ ಮಾರ್ಗದ ಯೋಜನೆಗೆ 401.15 ಕೋಟಿ ರೂ.
  • ಬೆಂಗಳೂರು-ವೈಟ್‌ಫೀಲ್ಡ್-ಕೃಷ್ಣರಾಜಪುರಂ ಚತುಷ್ಪಥ ಪುಣೆ, ಮೀರಜ್-ಲೋಂಡಾ ಮಾರ್ಗದ ರೈಲ್ವೆ ಯೋಜನೆಗೆ 357.6 ಕೋಟಿ ರೂ.
  • ಬೈಯಪನಹಳ್ಳಿಯಿಂದ ಹೊಸೂರು ಮಾರ್ಗಕ್ಕೆ 223.5 ಕೋಟಿ ರೂ.
  • ಮುನಿರಾಬಾದ್-ಮಹಬೂಬ್ನರ ಮಾರ್ಗದ ಯೋಜನೆಗೆ 214.05 ಕೋಟಿ ರೂ.
  • ಯಶವಂತಪುರದಿಂದ ಚನ್ನಸಂದ್ರ ಮಾರ್ಗ ಯೋಜನೆಗೆ 178.8 ಕೋಟಿ ರೂ.
  • ತೋರಣಗಲ್ಲು-ರಂಜಿತ್‌ಪುರ ಮಾರ್ಗದ ಯೋಜನೆಗೆ 104.47 ಕೋಟಿ ರೂ.
  • ದೌಂಡ್-ಕಲಬುರಗಿ ಡಬ್ಲಿಂಗ್ ಮತ್ತು ಪುಣೆ-ಗುಂತಕಲ್ ವಿದ್ಯುತೀಕರಣಕ್ಕೆ ಒಟ್ಟು 641.37 ಕಿ.ಮೀ. ಮಾರ್ಗದ ಯೋಜನೆಗೆ 84.39 ಕೋಟಿ ರೂ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಏನೇನು ಸಿಗುತ್ತೆ: ಮಾಹಿತಿ ಕೊಟ್ಟ ಬಿಜೆಪಿಗರು

  • ಕಡೂರು-ಚಿಕ್ಕಮಗಳೂರು-ಸಕಲೇಶಪುರ ಮಾರ್ಗಕ್ಕೆ 78.4 ಕೋಟಿ ರೂ.
  • ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗಕ್ಕೆ 64.05 ಕೋಟಿ ರೂ.
  • ಕಲಬುರಗಿ-ಬೀದರ್ ಮಾರ್ಗದ ಯೋಜನೆಗೆ 38.43 ಕೋಟಿ ರೂ.
  • ಹುಬ್ಬಳ್ಳಿ-ಚಿಕ್ಕಜಾಜೂರು 27.714 ಕೋಟಿ ರೂ.
  • ಮಾರಿಕುಪ್ಪಂ-ಕುಪ್ಪಂ 25.62 ಕೋಟಿ ರೂ.
  • ಹಾಸನ-ಬೆಂಗಳೂರು ರೈಲ್ವೆ ಮಾರ್ಗದ ಯೋಜನೆಗೆ 15.54 ಕೋಟಿ ರೂ.
  • ರೇಣಿಗುಂಟಾ, ಗೂಟಿ, ವಾಡಿಯಲ್ಲಿ ಬೈಪಾಸ್- 15.198 ಕೋಟಿ‌ ರೂ.

  • ಅರಸೀಕೆರೆ-ತುಮಕೂರು ರೈಲ್ವೆ ಮಾರ್ಗದ ಯೋಜನೆಗೆ 13.41 ಕೋಟಿ‌ ರೂ.
  • ಕೆಂಗೇರಿ-ರಾಮನಗರ-ಮೈಸೂರು ಮಾರ್ಗದ ಯೋಜನೆಗೆ 10.728 ಕೋಟಿ ರೂ.
  • ಕಂಕನಾಡಿ-ಪಣಂಬೂರು ರೈಲ್ವೆ ಮಾರ್ಗದ ಯೋಜನೆಗೆ 8.94 ಕೋಟಿ‌ ರೂ.
  • ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗದ ಯೋಜನೆಗೆ 8.54 ಕೋಟಿ ರೂ.
  • ಯಲಹಂಕ-ಪೆನುಕೊಂಡ ರೈಲ್ವೆ ಮಾರ್ಗದ ಯೋಜನೆಗೆ 4.47 ಕೋಟಿ ರೂ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:12 pm, Sat, 1 February 25

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!