AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!

2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ ಮಂಜೂರಾಗಿದೆ. ಗದಗ-ವಾಡಿ, ತುಮಕೂರು-ಚಿತ್ರದುರ್ಗ-ದಾವಣಗೆರೆ ಸೇರಿದಂತೆ ಹಲವು ಪ್ರಮುಖ ರೈಲ್ವೆ ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗಗಳು ನಡೆಯಲಿವೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!
ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​..!
ಹರೀಶ್ ಜಿ.ಆರ್​.
| Edited By: |

Updated on:Feb 01, 2025 | 5:46 PM

Share

ಬೆಂಗಳೂರು, ಫೆಬ್ರವರಿ 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ (Budget) ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ಮೀಸಲಿಡಲಾಗಿದೆ.

ಸಚಿವ ವಿ.ಸೋಮಣ್ಣ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿರುವ ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ ಮೀಸಲಾಡಲಾಗಿತ್ತು. ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಯಾವೆಲ್ಲಾ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ

  • ಗದಗ-ವಾಡಿ ಮಾರ್ಗದ ಯೋಜನೆಗೆ 549.45 ಕೋಟಿ ರೂ.
  • ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ 549.45 ಕೋಟಿ ರೂ.
  • ಬಾಗಲಕೋಟ-ಕುಡಚಿ ಮಾರ್ಗದ ಯೋಜನೆಗೆ 428.1 ಕೋಟಿ ರೂ.
  • ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ತಿನೈಘಾಟ್-ವಾಸ್ಕೋ ಡಿ ಗಾಮಾ (352.28 ಕಿ.ಮೀ) ರೈಲ್ವೆ ಮಾರ್ಗದ ಯೋಜನೆಗೆ 413.73 ಕೋಟಿ ರೂ.
  • ಹೊಟಗಿ-ಕುಡಗಿ-ಗದಗ ಮಾರ್ಗದ ಯೋಜನೆಗೆ 401.15 ಕೋಟಿ ರೂ.
  • ಬೆಂಗಳೂರು-ವೈಟ್‌ಫೀಲ್ಡ್-ಕೃಷ್ಣರಾಜಪುರಂ ಚತುಷ್ಪಥ ಪುಣೆ, ಮೀರಜ್-ಲೋಂಡಾ ಮಾರ್ಗದ ರೈಲ್ವೆ ಯೋಜನೆಗೆ 357.6 ಕೋಟಿ ರೂ.
  • ಬೈಯಪನಹಳ್ಳಿಯಿಂದ ಹೊಸೂರು ಮಾರ್ಗಕ್ಕೆ 223.5 ಕೋಟಿ ರೂ.
  • ಮುನಿರಾಬಾದ್-ಮಹಬೂಬ್ನರ ಮಾರ್ಗದ ಯೋಜನೆಗೆ 214.05 ಕೋಟಿ ರೂ.
  • ಯಶವಂತಪುರದಿಂದ ಚನ್ನಸಂದ್ರ ಮಾರ್ಗ ಯೋಜನೆಗೆ 178.8 ಕೋಟಿ ರೂ.
  • ತೋರಣಗಲ್ಲು-ರಂಜಿತ್‌ಪುರ ಮಾರ್ಗದ ಯೋಜನೆಗೆ 104.47 ಕೋಟಿ ರೂ.
  • ದೌಂಡ್-ಕಲಬುರಗಿ ಡಬ್ಲಿಂಗ್ ಮತ್ತು ಪುಣೆ-ಗುಂತಕಲ್ ವಿದ್ಯುತೀಕರಣಕ್ಕೆ ಒಟ್ಟು 641.37 ಕಿ.ಮೀ. ಮಾರ್ಗದ ಯೋಜನೆಗೆ 84.39 ಕೋಟಿ ರೂ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಏನೇನು ಸಿಗುತ್ತೆ: ಮಾಹಿತಿ ಕೊಟ್ಟ ಬಿಜೆಪಿಗರು

  • ಕಡೂರು-ಚಿಕ್ಕಮಗಳೂರು-ಸಕಲೇಶಪುರ ಮಾರ್ಗಕ್ಕೆ 78.4 ಕೋಟಿ ರೂ.
  • ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗಕ್ಕೆ 64.05 ಕೋಟಿ ರೂ.
  • ಕಲಬುರಗಿ-ಬೀದರ್ ಮಾರ್ಗದ ಯೋಜನೆಗೆ 38.43 ಕೋಟಿ ರೂ.
  • ಹುಬ್ಬಳ್ಳಿ-ಚಿಕ್ಕಜಾಜೂರು 27.714 ಕೋಟಿ ರೂ.
  • ಮಾರಿಕುಪ್ಪಂ-ಕುಪ್ಪಂ 25.62 ಕೋಟಿ ರೂ.
  • ಹಾಸನ-ಬೆಂಗಳೂರು ರೈಲ್ವೆ ಮಾರ್ಗದ ಯೋಜನೆಗೆ 15.54 ಕೋಟಿ ರೂ.
  • ರೇಣಿಗುಂಟಾ, ಗೂಟಿ, ವಾಡಿಯಲ್ಲಿ ಬೈಪಾಸ್- 15.198 ಕೋಟಿ‌ ರೂ.

  • ಅರಸೀಕೆರೆ-ತುಮಕೂರು ರೈಲ್ವೆ ಮಾರ್ಗದ ಯೋಜನೆಗೆ 13.41 ಕೋಟಿ‌ ರೂ.
  • ಕೆಂಗೇರಿ-ರಾಮನಗರ-ಮೈಸೂರು ಮಾರ್ಗದ ಯೋಜನೆಗೆ 10.728 ಕೋಟಿ ರೂ.
  • ಕಂಕನಾಡಿ-ಪಣಂಬೂರು ರೈಲ್ವೆ ಮಾರ್ಗದ ಯೋಜನೆಗೆ 8.94 ಕೋಟಿ‌ ರೂ.
  • ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗದ ಯೋಜನೆಗೆ 8.54 ಕೋಟಿ ರೂ.
  • ಯಲಹಂಕ-ಪೆನುಕೊಂಡ ರೈಲ್ವೆ ಮಾರ್ಗದ ಯೋಜನೆಗೆ 4.47 ಕೋಟಿ ರೂ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:12 pm, Sat, 1 February 25

Follow Us
Harish GR
Harish GR
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?