ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!

2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ ಮಂಜೂರಾಗಿದೆ. ಗದಗ-ವಾಡಿ, ತುಮಕೂರು-ಚಿತ್ರದುರ್ಗ-ದಾವಣಗೆರೆ ಸೇರಿದಂತೆ ಹಲವು ಪ್ರಮುಖ ರೈಲ್ವೆ ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗಗಳು ನಡೆಯಲಿವೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!
ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​..!
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 01, 2025 | 5:46 PM

ಬೆಂಗಳೂರು, ಫೆಬ್ರವರಿ 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ (Budget) ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ಮೀಸಲಿಡಲಾಗಿದೆ.

ಸಚಿವ ವಿ.ಸೋಮಣ್ಣ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿರುವ ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ ಮೀಸಲಾಡಲಾಗಿತ್ತು. ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಯಾವೆಲ್ಲಾ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ

  • ಗದಗ-ವಾಡಿ ಮಾರ್ಗದ ಯೋಜನೆಗೆ 549.45 ಕೋಟಿ ರೂ.
  • ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ 549.45 ಕೋಟಿ ರೂ.
  • ಬಾಗಲಕೋಟ-ಕುಡಚಿ ಮಾರ್ಗದ ಯೋಜನೆಗೆ 428.1 ಕೋಟಿ ರೂ.
  • ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ತಿನೈಘಾಟ್-ವಾಸ್ಕೋ ಡಿ ಗಾಮಾ (352.28 ಕಿ.ಮೀ) ರೈಲ್ವೆ ಮಾರ್ಗದ ಯೋಜನೆಗೆ 413.73 ಕೋಟಿ ರೂ.
  • ಹೊಟಗಿ-ಕುಡಗಿ-ಗದಗ ಮಾರ್ಗದ ಯೋಜನೆಗೆ 401.15 ಕೋಟಿ ರೂ.
  • ಬೆಂಗಳೂರು-ವೈಟ್‌ಫೀಲ್ಡ್-ಕೃಷ್ಣರಾಜಪುರಂ ಚತುಷ್ಪಥ ಪುಣೆ, ಮೀರಜ್-ಲೋಂಡಾ ಮಾರ್ಗದ ರೈಲ್ವೆ ಯೋಜನೆಗೆ 357.6 ಕೋಟಿ ರೂ.
  • ಬೈಯಪನಹಳ್ಳಿಯಿಂದ ಹೊಸೂರು ಮಾರ್ಗಕ್ಕೆ 223.5 ಕೋಟಿ ರೂ.
  • ಮುನಿರಾಬಾದ್-ಮಹಬೂಬ್ನರ ಮಾರ್ಗದ ಯೋಜನೆಗೆ 214.05 ಕೋಟಿ ರೂ.
  • ಯಶವಂತಪುರದಿಂದ ಚನ್ನಸಂದ್ರ ಮಾರ್ಗ ಯೋಜನೆಗೆ 178.8 ಕೋಟಿ ರೂ.
  • ತೋರಣಗಲ್ಲು-ರಂಜಿತ್‌ಪುರ ಮಾರ್ಗದ ಯೋಜನೆಗೆ 104.47 ಕೋಟಿ ರೂ.
  • ದೌಂಡ್-ಕಲಬುರಗಿ ಡಬ್ಲಿಂಗ್ ಮತ್ತು ಪುಣೆ-ಗುಂತಕಲ್ ವಿದ್ಯುತೀಕರಣಕ್ಕೆ ಒಟ್ಟು 641.37 ಕಿ.ಮೀ. ಮಾರ್ಗದ ಯೋಜನೆಗೆ 84.39 ಕೋಟಿ ರೂ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಏನೇನು ಸಿಗುತ್ತೆ: ಮಾಹಿತಿ ಕೊಟ್ಟ ಬಿಜೆಪಿಗರು

  • ಕಡೂರು-ಚಿಕ್ಕಮಗಳೂರು-ಸಕಲೇಶಪುರ ಮಾರ್ಗಕ್ಕೆ 78.4 ಕೋಟಿ ರೂ.
  • ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗಕ್ಕೆ 64.05 ಕೋಟಿ ರೂ.
  • ಕಲಬುರಗಿ-ಬೀದರ್ ಮಾರ್ಗದ ಯೋಜನೆಗೆ 38.43 ಕೋಟಿ ರೂ.
  • ಹುಬ್ಬಳ್ಳಿ-ಚಿಕ್ಕಜಾಜೂರು 27.714 ಕೋಟಿ ರೂ.
  • ಮಾರಿಕುಪ್ಪಂ-ಕುಪ್ಪಂ 25.62 ಕೋಟಿ ರೂ.
  • ಹಾಸನ-ಬೆಂಗಳೂರು ರೈಲ್ವೆ ಮಾರ್ಗದ ಯೋಜನೆಗೆ 15.54 ಕೋಟಿ ರೂ.
  • ರೇಣಿಗುಂಟಾ, ಗೂಟಿ, ವಾಡಿಯಲ್ಲಿ ಬೈಪಾಸ್- 15.198 ಕೋಟಿ‌ ರೂ.

  • ಅರಸೀಕೆರೆ-ತುಮಕೂರು ರೈಲ್ವೆ ಮಾರ್ಗದ ಯೋಜನೆಗೆ 13.41 ಕೋಟಿ‌ ರೂ.
  • ಕೆಂಗೇರಿ-ರಾಮನಗರ-ಮೈಸೂರು ಮಾರ್ಗದ ಯೋಜನೆಗೆ 10.728 ಕೋಟಿ ರೂ.
  • ಕಂಕನಾಡಿ-ಪಣಂಬೂರು ರೈಲ್ವೆ ಮಾರ್ಗದ ಯೋಜನೆಗೆ 8.94 ಕೋಟಿ‌ ರೂ.
  • ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗದ ಯೋಜನೆಗೆ 8.54 ಕೋಟಿ ರೂ.
  • ಯಲಹಂಕ-ಪೆನುಕೊಂಡ ರೈಲ್ವೆ ಮಾರ್ಗದ ಯೋಜನೆಗೆ 4.47 ಕೋಟಿ ರೂ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:12 pm, Sat, 1 February 25

ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ