AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!

2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರೈಲ್ವೆ ಇಲಾಖೆಗೆ 7,564 ಕೋಟಿ ರೂ. ಅನುದಾನ ಮಂಜೂರಾಗಿದೆ. ಗದಗ-ವಾಡಿ, ತುಮಕೂರು-ಚಿತ್ರದುರ್ಗ-ದಾವಣಗೆರೆ ಸೇರಿದಂತೆ ಹಲವು ಪ್ರಮುಖ ರೈಲ್ವೆ ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗಗಳು ನಡೆಯಲಿವೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​!
ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ಮೀಸಲು: ಇದರಲ್ಲಿ ಕರ್ನಾಟಕಕ್ಕೆ ಬಂಪರ್​..!
ಹರೀಶ್ ಜಿ.ಆರ್​.
| Edited By: |

Updated on:Feb 01, 2025 | 5:46 PM

Share

ಬೆಂಗಳೂರು, ಫೆಬ್ರವರಿ 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ (Budget) ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,564 ಕೋಟಿ ರೂ. ಮೀಸಲಿಡಲಾಗಿದೆ.

ಸಚಿವ ವಿ.ಸೋಮಣ್ಣ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿರುವ ಸಚಿವ ವಿ.ಸೋಮಣ್ಣ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಹಣ ಮೀಸಲಾಡಲಾಗಿದೆ. ವಂದೇ ಭಾರತ್ ಸ್ಲೀಪರ್ ರೈಲುಗಳ ಪರೀಕ್ಷಾರ್ಥ ಪ್ರಯೋಗ ನಡೆಯುತ್ತೆ. ಕರ್ನಾಟಕಕ್ಕೆ ಕಳೆದ ವರ್ಷ 7,559 ಕೋಟಿ ರೂ ಮೀಸಲಾಡಲಾಗಿತ್ತು. ಈ ಬಾರಿ 7,564 ಕೋಟಿ ರೂ. ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲಿಗೆ ಈ ಬಾರಿಯೂ 350 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಯಾವೆಲ್ಲಾ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ

  • ಗದಗ-ವಾಡಿ ಮಾರ್ಗದ ಯೋಜನೆಗೆ 549.45 ಕೋಟಿ ರೂ.
  • ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆಗೆ 549.45 ಕೋಟಿ ರೂ.
  • ಬಾಗಲಕೋಟ-ಕುಡಚಿ ಮಾರ್ಗದ ಯೋಜನೆಗೆ 428.1 ಕೋಟಿ ರೂ.
  • ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ತಿನೈಘಾಟ್-ವಾಸ್ಕೋ ಡಿ ಗಾಮಾ (352.28 ಕಿ.ಮೀ) ರೈಲ್ವೆ ಮಾರ್ಗದ ಯೋಜನೆಗೆ 413.73 ಕೋಟಿ ರೂ.
  • ಹೊಟಗಿ-ಕುಡಗಿ-ಗದಗ ಮಾರ್ಗದ ಯೋಜನೆಗೆ 401.15 ಕೋಟಿ ರೂ.
  • ಬೆಂಗಳೂರು-ವೈಟ್‌ಫೀಲ್ಡ್-ಕೃಷ್ಣರಾಜಪುರಂ ಚತುಷ್ಪಥ ಪುಣೆ, ಮೀರಜ್-ಲೋಂಡಾ ಮಾರ್ಗದ ರೈಲ್ವೆ ಯೋಜನೆಗೆ 357.6 ಕೋಟಿ ರೂ.
  • ಬೈಯಪನಹಳ್ಳಿಯಿಂದ ಹೊಸೂರು ಮಾರ್ಗಕ್ಕೆ 223.5 ಕೋಟಿ ರೂ.
  • ಮುನಿರಾಬಾದ್-ಮಹಬೂಬ್ನರ ಮಾರ್ಗದ ಯೋಜನೆಗೆ 214.05 ಕೋಟಿ ರೂ.
  • ಯಶವಂತಪುರದಿಂದ ಚನ್ನಸಂದ್ರ ಮಾರ್ಗ ಯೋಜನೆಗೆ 178.8 ಕೋಟಿ ರೂ.
  • ತೋರಣಗಲ್ಲು-ರಂಜಿತ್‌ಪುರ ಮಾರ್ಗದ ಯೋಜನೆಗೆ 104.47 ಕೋಟಿ ರೂ.
  • ದೌಂಡ್-ಕಲಬುರಗಿ ಡಬ್ಲಿಂಗ್ ಮತ್ತು ಪುಣೆ-ಗುಂತಕಲ್ ವಿದ್ಯುತೀಕರಣಕ್ಕೆ ಒಟ್ಟು 641.37 ಕಿ.ಮೀ. ಮಾರ್ಗದ ಯೋಜನೆಗೆ 84.39 ಕೋಟಿ ರೂ.

ಇದನ್ನೂ ಓದಿ: ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಏನೇನು ಸಿಗುತ್ತೆ: ಮಾಹಿತಿ ಕೊಟ್ಟ ಬಿಜೆಪಿಗರು

  • ಕಡೂರು-ಚಿಕ್ಕಮಗಳೂರು-ಸಕಲೇಶಪುರ ಮಾರ್ಗಕ್ಕೆ 78.4 ಕೋಟಿ ರೂ.
  • ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಮಾರ್ಗಕ್ಕೆ 64.05 ಕೋಟಿ ರೂ.
  • ಕಲಬುರಗಿ-ಬೀದರ್ ಮಾರ್ಗದ ಯೋಜನೆಗೆ 38.43 ಕೋಟಿ ರೂ.
  • ಹುಬ್ಬಳ್ಳಿ-ಚಿಕ್ಕಜಾಜೂರು 27.714 ಕೋಟಿ ರೂ.
  • ಮಾರಿಕುಪ್ಪಂ-ಕುಪ್ಪಂ 25.62 ಕೋಟಿ ರೂ.
  • ಹಾಸನ-ಬೆಂಗಳೂರು ರೈಲ್ವೆ ಮಾರ್ಗದ ಯೋಜನೆಗೆ 15.54 ಕೋಟಿ ರೂ.
  • ರೇಣಿಗುಂಟಾ, ಗೂಟಿ, ವಾಡಿಯಲ್ಲಿ ಬೈಪಾಸ್- 15.198 ಕೋಟಿ‌ ರೂ.

  • ಅರಸೀಕೆರೆ-ತುಮಕೂರು ರೈಲ್ವೆ ಮಾರ್ಗದ ಯೋಜನೆಗೆ 13.41 ಕೋಟಿ‌ ರೂ.
  • ಕೆಂಗೇರಿ-ರಾಮನಗರ-ಮೈಸೂರು ಮಾರ್ಗದ ಯೋಜನೆಗೆ 10.728 ಕೋಟಿ ರೂ.
  • ಕಂಕನಾಡಿ-ಪಣಂಬೂರು ರೈಲ್ವೆ ಮಾರ್ಗದ ಯೋಜನೆಗೆ 8.94 ಕೋಟಿ‌ ರೂ.
  • ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗದ ಯೋಜನೆಗೆ 8.54 ಕೋಟಿ ರೂ.
  • ಯಲಹಂಕ-ಪೆನುಕೊಂಡ ರೈಲ್ವೆ ಮಾರ್ಗದ ಯೋಜನೆಗೆ 4.47 ಕೋಟಿ ರೂ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:12 pm, Sat, 1 February 25

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್