Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಅಲರ್ಟ್

Karnataka Weather: ಕೊಂಚ ರಿಲೀಫ್ ನೀಡಿದ್ದ ಮಳೆ ಇದೀಗ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಜೊತೆಗೆ ಕೆಲ ಜಿಲ್ಲೆಗಳಿಗೆ ಎಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಅಲರ್ಟ್
ಪ್ರಾತಿನಿಧಿಕ ಚಿತ್ರ
Image Credit source: earth.com
Edited By:

Updated on: Mar 24, 2026 | 7:36 PM

ಬೆಂಗಳೂರು, ಮಾರ್ಚ್​​ 24: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಜೊತೆಗೆ ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇತ್ತ ಬೆಂಗಳೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇಲ್ಲದಿದ್ದರೂ, ಹೆಚ್ಚುತ್ತಿರುವ ಬಿಸಿಗಾಳಿಯಿಂದ ತಾತ್ಕಾಲಿಕ ಪರಿಹಾರ ಸಿಗಲಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಉಷ್ಣತೆ ಹೆಚ್ಚಳಗೊಳ್ಳುತ್ತಿರುವುದು ಕಂಡುಬರುತ್ತಿದೆ. ಜೊತೆಗೆ ನಗರದಲ ಕೆಲವೆಡೆ ಮೋಡ ಕವಿದ ವಾತಾವರಣ ಕಾಣಬಹುದು.

ಬಿರುಗಾಳಿ ಸಹಿತ ಮಳೆ: ಮನೆಗಳಿಗೆ ನುಗ್ಗಿದ ನೀರು

ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿದೆ. ಇತ್ತ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ರಸ್ತೆಗಳು ನದಿಯಂತಾಗಿದ್ದು, ಬೇಸ್​ಮೆಂಟ್​ನಲ್ಲಿ ನಿಲ್ಲಿಸಿದ್ದ ಕಾರುಗಳು, ಬೈಕ್​ಗಳು ಮುಳುಗಡೆ ಆಗಿವೆ. ಸದಾಶಿವನಗರ, ನೆಹರುನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಬಹುತೇಕ ರಸ್ತೆಗಳ ಮೇಲೆ ಚರಂಡಿ ನೀರು ಉಕ್ಕಿಹರಿದಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ರಸ್ತೆಯಲ್ಲಿ ಉಕ್ಕಿ ಹರಿಯುತ್ತಿರುವ ನೀರಿನಲ್ಲೇ ಸವಾರರು ವಾಹನ ಸಂಚಾರ ಮಾಡುತ್ತಿದ್ದಾರೆ. ಸದ್ಯ ಜೆಸಿಬಿ ಮೂಲಕ ನೀರು ಹೋಗಲು ಸ್ಥಳೀಯರಿಂದ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ಚರಂಡಿ ವ್ಯವಸ್ಥೆ ಮಾಡದ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಬೆಳಗಾವಿ ಜನತೆ ಹಿಡಿಶಾಪ ಹಾಕಿದ್ದಾರೆ.

ಬಿರುಗಾಳಿ ಸಮೇತ ಮಳೆ: ಕೊಚ್ಚಿಹೋದ ತರಕಾರಿ

ಹಾವೇರಿ ಜಿಲ್ಲೆಯ ಹಲವೆಡೆಗಳಲ್ಲಿ ಬಿರುಗಾಳಿ ಸಮೇತ ಮಳೆ ಸುರಿದಿದೆ. ಧಾರಕಾರ ಮಳೆಗೆ ಸಂತೆಯಲ್ಲಿದ್ದ ತರಕಾರಿ ಕೊಚ್ಚಿಕೊಂಡು ಹೋಗಿದೆ. ಬದನೆಕಾಯಿ, ಟೊಮ್ಯಾಟೊ, ಆಲೂಗಡ್ಡೆ ಸೇರಿದಂತೆ ಹಲವು ತರಕಾರಿ ‌ನೀರಿನಲ್ಲಿ ಜಲಾವೃತವಾಗಿವೆ. ಇನ್ನು ಸಂತೆಗೆ ಬಂದ ಜನರು ಮನೆಗೆ ಹೋಗಲು ಪರದಾಡಿದ್ದಾರೆ. ಅಕಾಲಿಕ ಮಳೆಗೆ ಜಿಲ್ಲೆಯ ಜನರು ಹೈರಾಣಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us