AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್? ಇಲ್ಲಿದೆ ವಿವರ

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ತಲೆದೋರಿದೆ. ಈ ಮಧ್ಯೆ, ಪ್ರಮುಖ ಘಾಟಿ ರಸ್ತೆಗಳಲ್ಲಿ ಭೂಕುಸಿತದ ಪರಿಣಾಮ ಸಂಚಾರಕ್ಕೆ ಅಡಚಣೆಯಾಗಿದೆ. ಇನ್ನು ಕೆಲವೇ ಪ್ರವಾಹದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತತಗೊಂಡಿದೆ. ರಾಜ್ಯದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್ ಆಗಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕದ ಯಾವೆಲ್ಲ ಹೆದ್ದಾರಿಗಳಲ್ಲಿ ಸಂಚಾರ ಬಂದ್? ಇಲ್ಲಿದೆ ವಿವರ
ಅಂಕೋಲಾ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೂಕುಸಿತದ ಡ್ರೋನ್ ಚಿತ್ರ
ಗಣಪತಿ ಶರ್ಮಾ
|

Updated on: Jul 19, 2024 | 10:06 AM

Share

ಬೆಂಗಳೂರು, ಜುಲೈ 19: ಭಾರಿ ಮಳೆಯ ಕಾರಣ ಕರ್ನಾಟಕದ ಹಲವೆಡೆ ಭೂಕುಸಿತ, ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪರಿಣಾಮವಾಗಿ ಅನೇಕ ಹೆದ್ದಾರಿಗಳಲ್ಲಿ ಸಂಚಾರ ಭಾಗಶಃ ಸ್ಥಗಿತಗೊಂಡಿದ್ದರೆ, ಇನ್ನು ಕೆಲವು ರಸ್ತೆಗಳಲ್ಲಿ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಅಂಕೋಲಾದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಕಾರಣ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಇದೇ ರೀತಿಯ ಪರಿಸ್ಥಿತಿ ರಾಜ್ಯದ ಇನ್ನೂ ಹಲವು ರಸ್ತೆಗಳಲ್ಲಿದೆ.

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದ್ಯಕ್ಕಿಲ್ಲ ಸಂಚಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹತ್ತಾರು ಅವಾಂತರಗಳನ್ನು ಸೃಷ್ಟಿ ಮಾಡಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುವ ವಾಹನ ಸವಾರರ ಜೀವ ಹಿಂಡುತ್ತಿದೆ. ಶಿರೂರು ಮತ್ತು ಬರ್ಗಿಯಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಕಳೆದ ನಾಲ್ಕು ದಿನದಿಂದ ಹೆದ್ದಾರಿಯಲ್ಲಿ ಊಟ ನಿದ್ದೆ ಇಲ್ಲದೇ ಲಾರಿ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣ ವಾಗಿದೆ. ಕಿಲೋಮೀಟರ್​ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.

ತಮಿಳುನಾಡು, ಕೇರಳಕ್ಕೆ ಸಂಪರ್ಕ ಕಡಿತ

ಕಬಿನಿ ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ಬಿಟ್ಟ ಕಾರಣ ಮೈಸೂರು ಜಿಲ್ಲೆಯ ನಂಜನಗೂಡು ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಪರಿಣಾಮವಾಗಿ ತಮಿಳುನಾಡು, ಕೇರಳಕ್ಕೆ ಸಂಪರ್ಕ ಭಾಗಶಃ ಕಡಿತಗೊಂಡಿದೆ. ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿ ಬಂದ್

ರಾಗಿಹೊಸಳ್ಳಿ ಬಳಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ ಕಾರಣ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಸಂಚಾರ ಬಂದ್ ಆಗಿದೆ. ಪರಿಣಾಮವಾಗಿ ಕರಾವಳಿ ಮತ್ತು ಮಲೆನಾಡಿನ ಸಂಪರ್ಕ ಕಷ್ಟವಾಗಿದೆ. ಸದ್ಯ ಕರಾವಳಿ ಭಾಗಕ್ಕೆ ತೆರಳಲು ಮತ್ತು ಅಲ್ಲಿಂದ ಮಲೆನಾಡು ಪ್ರದೇಶಕ್ಕೆ ಪ್ರಯಾಣಿಸಲು ಯಲ್ಲಾಪುರ – ಅಂಕೋಲಾ ರಸ್ತೆ ಅಥವಾ ಶಿರಸಿ – ಯಾಣ – ಕುಮಟಾ ರಸ್ತೆಯನ್ನು ಬಳಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಅತ್ತ ದೇವಿಮನೆ ಘಟ್ಟಡದಲ್ಲಿಯೂ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಪರಿಣಾಮವಾಗಿ ಹಲವೆಡೆ ಭೂಕುಸಿತದ ಆತಂಕ ಎದುರಾಗಿದೆ.

ಬೆಂಗಳೂರು ಮಂಗಳೂರು ಸಂಪರ್ಕ ಭಾಗಶಃ ಕಡಿತ

ಬೆಂಗಳೂರು-ಮಂಗಳೂರು ನಡುವಣ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೂಡ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟಿ ದೊಡ್ಡತಪ್ಲು ಎಂಬಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಅತ್ತ ಸಂಪಾಜೆ ಘಾಟಿಯಲ್ಲಿ ಭೂಕುಸಿತದ ಆತಂಕ ಇರುವ ಕಾರಣ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ 3 ದಿನಗಳ ಕಾಲ ಸಂಚಾರ ನಿಷೇಧಿಸಿ ಮಡಿಕೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಚಿಕ್ಕಮಗಳೂರಿನ ಕೊಟ್ಟಿಗೆಹಾರ ಮೂಲಕ ಸಾಗುವ ಚಾರ್ಮಾಡಿ ಘಾಟಿಯೊಂದೇ ಸದ್ಯ ಮಂಗಳೂರು ಬೆಂಗಳೂರು ಸಂಪರ್ಕಕ್ಕೆ ಉಳಿದುಕೊಂಡಿದೆ. ರೈಲು ಪ್ರಯಾಣಕ್ಕೆ ಈವರೆಗೆ ಯಾವುದೇ ಸಮಸ್ಯೆ ಆಗಿಲ್ಲ.

ಇದನ್ನೂ ಓದಿ: ಬೆಂಗಳೂರು-ಮಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್

ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿ ಬಂದ್ ಆತಂಕ

ಕೊಡಗಿನಲ್ಲಿ ರಣಭೀಕರ ಮಳೆಯಾಗುತ್ತಿದ್ದು, ಮಡಿಕೇರಿ ತಾಲೂಕಿನ ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿದೆ. ಸದ್ಯ ಯಾವುದೇ ಕ್ಷಣ ವಿರಾಜಪೇಟೆ ಸಂಪರ್ಕ‌ ಕಡಿತವಾಗುವ ಸಾಧ್ಯತೆಯಿದೆ.

ಶೃಂಗೇರಿ ಹೊರನಾಡು ರಸ್ತೆ ಬಂದ್

ಶೃಂಗೇರಿ ಮತ್ತು ಹೊರನಾಡು ಮಧ್ಯೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿಯೂ ಸಂಚಾರ ಸ್ಥಗಿತಗೊಂಡಿವೆ. ಕಳಸ ಪಟ್ಟಣ ಸಂಪರ್ಕಿಸುವ ರಸ್ತೆ, ಕೊಪ್ಪ ತಾಲೂಕಿನ ಬಿಳಾಲುಕೊಪ್ಪದಿಂದ ಬಸರೀಕಟ್ಟೆಗೆ ಹೋಗುವ ರಸ್ತೆ ಜಲಾವೃತಗೊಂಡಿದ್ದು, ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಮುಖ್ಯ ರಸ್ತೆಯೇ ಬಂದ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು