AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಅನಿರೀಕ್ಷಿತ ಮಳೆಯಿಂದ ತಂಪಾಯ್ತು ಬೆಂಗಳೂರು; ನಾಳೆಯೂ ತುಂತುರು ಮಳೆ ಸಾಧ್ಯತೆ

Karnataka Weather | ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮತ್ತೆ ಮಳೆಯಾಗಿದೆ. ನಾಳೆ (ಶುಕ್ರವಾರ) ಇಡೀ ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.

Bengaluru Rain: ಅನಿರೀಕ್ಷಿತ ಮಳೆಯಿಂದ ತಂಪಾಯ್ತು ಬೆಂಗಳೂರು; ನಾಳೆಯೂ ತುಂತುರು ಮಳೆ ಸಾಧ್ಯತೆ
ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 12, 2021 | 4:40 PM

Share

ಬೆಂಗಳೂರು: ಐದಾರು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯ ದರ್ಶನವಾಗಿರಲಿಲ್ಲ. ಕಳೆದ 2-3 ದಿನಗಳಿಂದ ಬೆಂಗಳೂರಿನಲ್ಲಿ (Bengaluru Weather Today) ಬಿಸಿಲು ಕಾಣಿಸಿಕೊಂಡಿತ್ತು. ಆದರೆ, ಇಂದು ಮಧ್ಯಾಹ್ನದಿಂದ ಇದ್ದಕ್ಕಿದ್ದಂತೆ ಮಳೆ ಸುರಿಯಲಾರಂಭಿಸಿದೆ. ಬನಶಂಕರಿ, ಬಸವನಗುಡಿ, ಹನುಮಂತನಗರ, ಗಿರಿನಗರ, ಜಯನಗರ, ಚಾಮರಾಜಪೇಟೆ, ಶಾಂತಿನಗರ ಭಾಗದಲ್ಲಿ ಇಂದು ಮಳೆ ಸುರಿದಿದೆ. ನಾಳೆ ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಮಳೆಯಾಗುವ (Bangalore Rain) ಸಾಧ್ಯತೆಯಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮತ್ತೆ ಮಳೆಯಾಗಿದೆ. ನಾಳೆ (ಶುಕ್ರವಾರ) ಇಡೀ ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ 4 ಗಂಟೆಯ ಬಳಿಕ ತುಂತುರು ಮಳೆಯಾಗುವ ಸಾಧ್ಯತೆಯದೆ. ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕಲ್ಯಾಣ ಕರ್ನಾಟಕದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಆ. 13ರವರೆಗೂ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಆಗಸ್ಟ್​ 15ರವರೆಗೂ ವರುಣನ ಆರ್ಭಟ; ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆ

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರಿನ ಪ್ರಮಾಣ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Rain Bangalore Rains Continues till Sunday Weather Today Monsoon Rain in Bengaluru)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ