AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದಲ್ಲಿ ಮೇಘಸ್ಫೋಟ; ಜಲಾವೃತಗೊಂಡ ಸಂಪಾಜೆ, ಹಲವು ಮನೆಗಳು ಮುಳುಗಡೆ

ಕೊಡಗು-ದಕ್ಷಿಣ ಕನ್ನಡ ಗಡಿ ಭಾಗವಾದ ಬೆಟ್ಟವೊಂದರಲ್ಲಿ ಭಾರೀ ಶಬ್ದ ಕೇಳಿಸಿದೆ. ಇದರ ಬೆನ್ನಲ್ಲೆ ರಸ್ತೆ ಬದಿಯಲ್ಲಿದ್ದ ಸಣ್ಣಪುಟ್ಟ ತೊರೆಗಳಲ್ಲಿ ಮಳೆ ನೀರು ಉಕ್ಕಿ ಹರಿಯಲು ಆರಂಭವಾಗಿದ್ದು, ನೋಡನೋಡುತ್ತಿದ್ದಂತೆ ಹಲವು ಮನೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಸಂಭವಿಸಿದ ಈ ಜಲಸ್ಫೋಟಕ್ಕೆ ಜನಜೀವನ ತತ್ತರಿಸಿದೆ.

Karnataka Rain: ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದಲ್ಲಿ ಮೇಘಸ್ಫೋಟ; ಜಲಾವೃತಗೊಂಡ ಸಂಪಾಜೆ, ಹಲವು ಮನೆಗಳು ಮುಳುಗಡೆ
ಜಲಾವೃತವಾದ ಸಂಪಾಜೆ
TV9 Web
| Edited By: Rakesh Nayak Manchi|

Updated on:Aug 02, 2022 | 8:52 AM

Share

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಇದರ ಬೆನ್ನಲ್ಲೆ ಸಣ್ಣಪುಟ್ಟ ತೊರೆಗಳು ಏಕಾಏಕಿ ಹರಿಯಲು ಆರಂಭಿಸಿದೆ. ಪರಿಣಾಮವಾಗಿ ಸಂಪಾಜೆ ಗ್ರಾಮದಲ್ಲಿ ಹಲವು ಮನೆಗಳು ಮುಳುಗಡೆಯಾಗಿದ್ದು, ಕ್ಷಿಪ್ರ ಪ್ರವಾಹ ಉಂಟಾದ ಪ್ರದೇಶದಿಂದ ಜನರು ಓಡಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಸಂಪಾಜೆ ಗ್ರಾಮದ ಗಣೇಶ್, ಶ್ರೀಧರ್, ಪುರುಷೋತ್ತಮ್, ಜಯರಾಮ್ ನಿವಾಸಗಳು ಸಂಪೂರ್ಣ ಮುಳುಗಡೆಯಾಗಿದ್ದು, ಗೊತ್ತು ಗುರಿಯಿಲ್ಲದ ಪ್ರವಾಹಕ್ಕೆ ಜನರು ಕಣ್ಣೀರು ಸುರಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡುಗು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಪರಿಣಾಮವಾಗಿ ಸಂಜಾಪೆ ಗ್ರಾಮದಲ್ಲಿನ ಸಣ್ಣಪುಟ್ಟ ತೊರೆಗಳು ಉಕ್ಕಿ ಹರಿದಿದೆ. ಇದರಿಂದಾಗಿ ಜನಬಿಡ ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ಇದ್ದ ಹಲವು ಮನೆಗಳು ಕೂಡ ಮುಳುಗಡೆಯಾಗಿದ್ದು, ಗ್ರಾಮದ ಗಣೇಶ್, ಶ್ರೀಧರ್, ಪುರುಷೋತ್ತಮ್, ಜಯರಾಮ್ ನಿವಾಸಗಳು ಸಂಪೂರ್ಣ ಮುಳುಗಡೆಯಾಗಿದೆ. ಕ್ಷಿಪ್ರ ಪ್ರವಾಹದಿಂದ ಕಂಗೆಟ್ಟ ಗ್ರಾಮದ ಜನರು, ತಮ್ಮ ಜೀವ ಉಳಿಸಲು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದಾರೆ. ಯಾವುದೇ ಪ್ರವಾಹದ ಮುನ್ಸೂಚನೆಯೂ ಸಿಗದ ಜನರು ಇದೀಗ ತಮ್ಮ ಮನೆಗಳನ್ನು ಕಳೆದುಕೊಂಡು ಕಣ್ಣೀರಿಡುವಂತಾಗಿದೆ.

ಅಷ್ಟಕ್ಕೂ ಆಗಿದ್ದೇನು?

ಕೊಡಗು-ದಕ್ಷಿಣ ಕನ್ನಡ ಗಡಿ ಭಾಗವಾದ ಬೆಟ್ಟವೊಂದರಲ್ಲಿ ಭಾರೀ ಶಬ್ದ ಕೇಳಿಸಿದೆ. ಈ ಶಬ್ದ ಕೇಳಿದ ಜನರು ಭೀತಿಗೊಳಗಾಗಿದ್ದಾರೆ. ಈ ಘಟನೆ ಬೆನ್ನಲ್ಲೇ ರಸ್ತೆ ಬದಿಯಲ್ಲಿನ ಸಣ್ಣಪುಟ್ಟು ಕೊಲ್ಲಿಗಳು ಹರಿಯಲಾರಂಭಿಸಿದ್ದು, ನೋಡನೋಡುತ್ತಿದ್ದಂತೆ ಕೊಲ್ಲಿಗಳು, ರಸ್ತೆಗಳು ಸಂಪೂರ್ಣ ನದಿಯಂತಾಗಿದೆ. ಪರಿಣಾಮವಾಗಿ ನೀರು ತಗ್ಗುಪ್ರದೇಶಗಳಲ್ಲಿನ ಜನಬಿಡ ಪ್ರದೇಶಗಳಿಗೆ ನುಗ್ಗಿದ್ದು, ಸಂಪಾಜೆ ಗ್ರಾಮವೇ ಜಲಾವೃತಗೊಂಡಿದೆ.

Published On - 8:28 am, Tue, 2 August 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ