AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರಾವಳಿಯಲ್ಲಿ ತಗ್ಗಿದ ಮಳೆ; ಬೆಂಗಳೂರು, ಶಿವಮೊಗ್ಗ ಸೇರಿ 20 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

Bengaluru Rains: ಬೆಂಗಳೂರಿನಲ್ಲಿ ನಿನ್ನೆ ಸಂಜೆಯೂ ಮಳೆಯಾಗಲಿದ್ದು, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದೆ. ಮಲೆನಾಡು, ಉತ್ತರ ಒಳನಾಡಿನ 20 ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

Karnataka Rain: ಕರಾವಳಿಯಲ್ಲಿ ತಗ್ಗಿದ ಮಳೆ; ಬೆಂಗಳೂರು, ಶಿವಮೊಗ್ಗ ಸೇರಿ 20 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ
ಮಳೆ
TV9 Web
| Edited By: |

Updated on: Oct 10, 2022 | 9:23 AM

Share

ಬೆಂಗಳೂರು: ಕರ್ನಾಟಕದ ಬೆಂಗಳೂರು, (Karnataka Rain) ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಅ. 12ರವರೆಗೂ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ 20 ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿಯ 3 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ, ಕೊಪ್ಪಳ, ತುಮಕೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಅ. 11ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ದಿನಗಳ ಬಳಿಕ ಮತ್ತೆ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.​ ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯದಿಂದ ಮಳೆಯಾಗುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕಕ್ಕೆ ಈ ವಾರದಲ್ಲಿ ಹಿಂಗಾರು ಪ್ರವೇಶವಾಗಲಿದೆ. ಅಲ್ಲಿಯ ತನಕ ಮುಂಗಾರು ಮಳೆ ಮುಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆಯೂ ಮಳೆಯಾಗಲಿದ್ದು, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದೆ. ಇಂದು ಸಂಜೆಯ ವೇಳೆಗೆ ಬೆಂಗಳೂರಿನ ಹಲವೆಡೆ ಮಳೆ ಸುರಿಯುವ ನಿರೀಕ್ಷೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ