AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿ ಬಿದ್ದು ಹರಿಯುತ್ತಿರುವ ವಾಣಿವಿಲಾಸ ಸಾಗರ ಜಲಾಶಯ: ಹಲವೆಡೆ ಅವಾಂತರ

ವಾಣಿವಿಲಾಸ ಸಾಗರ ಜಲಾಶಯ ಕೋಡಿ ಬಿದ್ದ ಹಿನ್ನೆಲೆ ಹೊಸದುರ್ಗ ತಾಲ್ಲೂಕಿನ ಪೂಜಾರಹಟ್ಟಿ ಗ್ರಾಮಕ್ಕೆ ನೀರು ನುಗ್ಗಿ ಹಲವು ಮನೆಗಳು ಜಲಾವೃತಗೊಂಡಿವೆ. ಹಿನ್ನೀರಿನ ಭಾಗದಲ್ಲಿರುವ ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ

ಕೋಡಿ ಬಿದ್ದು ಹರಿಯುತ್ತಿರುವ ವಾಣಿವಿಲಾಸ ಸಾಗರ ಜಲಾಶಯ: ಹಲವೆಡೆ ಅವಾಂತರ
ವಾಣಿವಿಲಾಸ ಸಾಗರ ಜಲಾಶಯ ಕೋಡಿ ಬಿದ್ದು ಹರಿಯುತ್ತಿರುವ ಪರಿಣಾಮ ಗ್ರಾಮಕ್ಕೆ ನುಗ್ಗಿದ ನೀರು
TV9 Web
| Edited By: Rakesh Nayak Manchi|

Updated on:Sep 06, 2022 | 10:04 AM

Share

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯ ಕೋಡಿ ಬಿದ್ದ ಹಿನ್ನೆಲೆ ಅಪಾರ ಪ್ರಮಾಣದಲ್ಲಿ ನೀರಿ ಹೊರ ಹರಿವು ಆಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಬಳಿಯ ಅಣೆಕಟ್ಟು ಕೋಡಿ ಬಿದ್ದು ನೀರು ಹರಿಯುತ್ತಿದ್ದು, ಹೊಸದುರ್ಗ ತಾಲ್ಲೂಕಿನ ಪೂಜಾರಹಟ್ಟಿ ಗ್ರಾಮಕ್ಕೆ ನೀರು ನುಗ್ಗಿ ಹಲವು ಮನೆಗಳು ಜಲಾವೃತಗೊಂಡಿವೆ. ಅಣೆಕಟ್ಟಿನ ಹಿನ್ನೀರಿನ ಭಾಗದಲ್ಲಿರುವ ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ. ಇಷ್ಟೆಲ್ಲಾ ಭೀತಿಯಿಂದ ಜನರು ಕಾಲ ಕಳೆಯುತ್ತಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಕಣ್ಣುಮುಚ್ಚಿ ಕುಳಿತುಕೊಂಡಿದ್ದು, ಶೋಚನೀಯ ಪರಿಸ್ಥಿತಿಯ ನಡುವೆ ಜನರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಇನ್ನೊಂದೆಡೆ ರಾಯಚೂರಿನಲ್ಲಿರುವ ಮಸ್ಕಿ ಜಲಾಶಯ ಕೂಡ ಭರ್ತಿಗೊಂಡಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ಬಳಿಯ ಕಿರು ಜಲಾಶಯ ಭರ್ತಿಗೊಂಡಿದ್ದು, ಎರಡು ಗೇಟ್ ಮೂಲಕ 300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಸ್ಕಿ ಹಳ್ಳಕ್ಕೆ ನೀರು ಬಿಡುಗಡೆ ಮಾಡಲಾಗಿದ್ದು, ಸದ್ಯ ಜಲಾಶಯಕ್ಕೆ 500 ಕ್ಯೂಸೆಕ್ ನೀರಿನ ಒಳಹರಿವು ಕೂಡ ಆಗಿದೆ. ಸದ್ಯ ಜಲಾಶಯದಿಂದ ನೀರನ್ನು ಹೊರ ಬಿಡಲಾಗಿದ್ದು, ಅಧಿಕಾರಿಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಹಳ್ಳದ ಪಾತ್ರದ ಜನ ಹಳ್ಳದಲ್ಲಿ ಇಳಿಯುವುದು, ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ನೀಡಿದ್ದಾರೆ.

ಅಷ್ಟಲ್ಲದೆ, ಸುರಿದ ಧಾರಾಕರ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮ ಜಲಾವೃತವಾದ ಘಟನೆಯೂ ನಡೆದಿದೆ. ಹಲವಾರು ಮನೆಗಳು ಜಲಾವೃತವಾಗುವುದರ ಮೂಲಕ ಜನ ಜೀವನ ಅಸ್ತವ್ಯಸ್ತ ಆಗಿದ್ದು, ಮಹಿಳೆಯರು ಮಕ್ಕಳು ಸೇರಿದಂತೆ ಜನರು ನೀರಿನಲ್ಲೆ ಪರದಾಡುವಂತಾಗಿದೆ. ಮನೆಯಲ್ಲಿ ಇದುವರೆಗೂ ಅಡುಗೆ ಮಾಡಲು ಸಾದ್ಯವಾಗದ ಪರಿಸ್ಥಿತಿ ಇದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:04 am, Tue, 6 September 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು