AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿ ಬಿದ್ದು ಹರಿಯುತ್ತಿರುವ ವಾಣಿವಿಲಾಸ ಸಾಗರ ಜಲಾಶಯ: ಹಲವೆಡೆ ಅವಾಂತರ

ವಾಣಿವಿಲಾಸ ಸಾಗರ ಜಲಾಶಯ ಕೋಡಿ ಬಿದ್ದ ಹಿನ್ನೆಲೆ ಹೊಸದುರ್ಗ ತಾಲ್ಲೂಕಿನ ಪೂಜಾರಹಟ್ಟಿ ಗ್ರಾಮಕ್ಕೆ ನೀರು ನುಗ್ಗಿ ಹಲವು ಮನೆಗಳು ಜಲಾವೃತಗೊಂಡಿವೆ. ಹಿನ್ನೀರಿನ ಭಾಗದಲ್ಲಿರುವ ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ

ಕೋಡಿ ಬಿದ್ದು ಹರಿಯುತ್ತಿರುವ ವಾಣಿವಿಲಾಸ ಸಾಗರ ಜಲಾಶಯ: ಹಲವೆಡೆ ಅವಾಂತರ
ವಾಣಿವಿಲಾಸ ಸಾಗರ ಜಲಾಶಯ ಕೋಡಿ ಬಿದ್ದು ಹರಿಯುತ್ತಿರುವ ಪರಿಣಾಮ ಗ್ರಾಮಕ್ಕೆ ನುಗ್ಗಿದ ನೀರು
TV9 Web
| Edited By: |

Updated on:Sep 06, 2022 | 10:04 AM

Share

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯ ಕೋಡಿ ಬಿದ್ದ ಹಿನ್ನೆಲೆ ಅಪಾರ ಪ್ರಮಾಣದಲ್ಲಿ ನೀರಿ ಹೊರ ಹರಿವು ಆಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಬಳಿಯ ಅಣೆಕಟ್ಟು ಕೋಡಿ ಬಿದ್ದು ನೀರು ಹರಿಯುತ್ತಿದ್ದು, ಹೊಸದುರ್ಗ ತಾಲ್ಲೂಕಿನ ಪೂಜಾರಹಟ್ಟಿ ಗ್ರಾಮಕ್ಕೆ ನೀರು ನುಗ್ಗಿ ಹಲವು ಮನೆಗಳು ಜಲಾವೃತಗೊಂಡಿವೆ. ಅಣೆಕಟ್ಟಿನ ಹಿನ್ನೀರಿನ ಭಾಗದಲ್ಲಿರುವ ಗ್ರಾಮಗಳಿಗೆ ಜಲಕಂಟಕ ಎದುರಾಗಿದೆ. ಇಷ್ಟೆಲ್ಲಾ ಭೀತಿಯಿಂದ ಜನರು ಕಾಲ ಕಳೆಯುತ್ತಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಕಣ್ಣುಮುಚ್ಚಿ ಕುಳಿತುಕೊಂಡಿದ್ದು, ಶೋಚನೀಯ ಪರಿಸ್ಥಿತಿಯ ನಡುವೆ ಜನರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಇನ್ನೊಂದೆಡೆ ರಾಯಚೂರಿನಲ್ಲಿರುವ ಮಸ್ಕಿ ಜಲಾಶಯ ಕೂಡ ಭರ್ತಿಗೊಂಡಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ಬಳಿಯ ಕಿರು ಜಲಾಶಯ ಭರ್ತಿಗೊಂಡಿದ್ದು, ಎರಡು ಗೇಟ್ ಮೂಲಕ 300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಸ್ಕಿ ಹಳ್ಳಕ್ಕೆ ನೀರು ಬಿಡುಗಡೆ ಮಾಡಲಾಗಿದ್ದು, ಸದ್ಯ ಜಲಾಶಯಕ್ಕೆ 500 ಕ್ಯೂಸೆಕ್ ನೀರಿನ ಒಳಹರಿವು ಕೂಡ ಆಗಿದೆ. ಸದ್ಯ ಜಲಾಶಯದಿಂದ ನೀರನ್ನು ಹೊರ ಬಿಡಲಾಗಿದ್ದು, ಅಧಿಕಾರಿಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಹಳ್ಳದ ಪಾತ್ರದ ಜನ ಹಳ್ಳದಲ್ಲಿ ಇಳಿಯುವುದು, ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ನೀಡಿದ್ದಾರೆ.

ಅಷ್ಟಲ್ಲದೆ, ಸುರಿದ ಧಾರಾಕರ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮ ಜಲಾವೃತವಾದ ಘಟನೆಯೂ ನಡೆದಿದೆ. ಹಲವಾರು ಮನೆಗಳು ಜಲಾವೃತವಾಗುವುದರ ಮೂಲಕ ಜನ ಜೀವನ ಅಸ್ತವ್ಯಸ್ತ ಆಗಿದ್ದು, ಮಹಿಳೆಯರು ಮಕ್ಕಳು ಸೇರಿದಂತೆ ಜನರು ನೀರಿನಲ್ಲೆ ಪರದಾಡುವಂತಾಗಿದೆ. ಮನೆಯಲ್ಲಿ ಇದುವರೆಗೂ ಅಡುಗೆ ಮಾಡಲು ಸಾದ್ಯವಾಗದ ಪರಿಸ್ಥಿತಿ ಇದ್ದರೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:04 am, Tue, 6 September 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ