AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ನಾಳೆಯಿಂದ ಮಳೆಯ ಅಬ್ಬರ ಸಾಧ್ಯತೆ

Karnataka Weather Today: ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ.

Karnataka Rain: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ನಾಳೆಯಿಂದ ಮಳೆಯ ಅಬ್ಬರ ಸಾಧ್ಯತೆ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 04, 2022 | 6:01 AM

Share

Bengaluru Weather Today: ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿತ್ತು. ಆದರೆ, ನಾಳೆಯಿಂದ (ಡಿ. 5) ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಡಿಸೆಂಬರ್ 5ರಿಂದ ಕರ್ನಾಟಕದ (Karnataka Rains) ಬಹುತೇಕ ಜಿಲ್ಲೆಗಳಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ ಎಂಬ ಮುನ್ಸೂಚನೆಯಿದೆ. ಇಂದು ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದೆ. ಡಿಸೆಂಬರ್ 5ರಂದು ಅದೇ ಪ್ರದೇಶದ ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತದ ಪ್ರದೇಶ ನಿರ್ಮಾಣವಾಗಲಿದೆ. ಮೈಸೂರಿನಲ್ಲಿ ಡಿ. 14ರವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಹೆಚ್ಚಾಗಲಿದೆ. ಡಿಸೆಂಬರ್ 8ರ ಸುಮಾರಿಗೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಗೆ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ತಜ್ಞ ಹಾಗೂ ವಿಜ್ಞಾನಿ ಡಾ. ಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather Today: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆಯ ನಿರೀಕ್ಷೆ

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇಂದು ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ – ಮಾಹೆಯಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಇಂದು ಮುಂಜಾನೆ ಉತ್ತರ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಹಿಮಾಚಲ ಪ್ರದೇಶದ ಮೇಲೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಇನ್ನುಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ