AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ
ಮಳೆImage Credit source: Pipa News
ನಯನಾ ರಾಜೀವ್
|

Updated on: May 18, 2023 | 7:25 AM

Share

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬುಧವಾರದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಶ್ಚಾತ್ಯ ಪ್ರಕ್ಷುಬ್ಧತೆ ಸಕ್ರಿಯವಾಗಿದೆ. ಇದರ ಪರಿಣಾಮದಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಬಲವಾದ ಗಾಳಿ ಬೀಸಿದ್ದು, ಹಲವೆಡೆ ಗುಡುಗು ಸಹಿತ ಮಳೆ ಸುರಿದಿದೆ.

ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ತಿಳಿಯುವುದಾದರೆ, ದಕ್ಷಿಣ ಹರಿಯಾಣದಲ್ಲಿ ಲಘು ಧೂಳಿನ ಬಿರುಗಾಳಿ ಬೀಸಿದೆ. ಕರಾವಳಿ ಆಂಧ್ರಪ್ರದೇಶ, ಪೂರ್ವ ಮಧ್ಯಪ್ರದೇಶ ಮತ್ತು ಆಗ್ನೇಯ ಉತ್ತರ ಪ್ರದೇಶ ಮತ್ತು ಹರಿಯಾಣದ ಕೆಲವೆಡೆ ಲಘು ಮಳೆಯಾಗಿದೆ. ಸಿಕ್ಕಿಂ, ಕರಾವಳಿ ಒಡಿಶಾ, ಆಂತರಿಕ ತಮಿಳುನಾಡಿನ ಕೆಲವು ಭಾಗಗಳು, ದಕ್ಷಿಣ ಕರ್ನಾಟಕ, ದಕ್ಷಿಣ ಮಧ್ಯಪ್ರದೇಶ ಮತ್ತು ಗುಜರಾತ್‌ ನಲ್ಲಿ ಕೂಡ ಹಗುರದಿಂದ ಸಾಧಾರಣ ಮಳೆಯಾಗಿದೆ.

ಮತ್ತಷ್ಟು ಓದಿ: Cyclone Mocha: ಕರ್ನಾಟಕದಲ್ಲಿ ಮೋಕಾ ಚಂಡಮಾರುತ ಎಫೆಕ್ಟ್, ಇನ್ನೂ ಮೂರು ದಿನ ಭಾರೀ ಮಳೆ

ಕೇರಳ, ತಮಿಳುನಾಡು, ಈಶಾನ್ಯ ಬಿಹಾರ ಮತ್ತು ಗಿಲ್ಗಿಟ್-ಬಲಿಸ್ತಾನ್, ಮುಜಫರಾಬಾದ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ದೆಹಲಿಯಲ್ಲಿ ಮುಂದಿನ 24 ಗಂಟೆಗಳ ಹವಾಮಾನ ಪರಿಸ್ಥಿತಿಯ ಬಗ್ಗೆ ತಿಳಿಯುವುದಾದರೆ, ಪಂಜಾಬ್, ಹರಿಯಾಣ, ವಾಯುವ್ಯ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಕೆಲವು ಭಾಗಗಳಲ್ಲಿ ಲಘು ಮಳೆಯೊಂದಿಗೆ ಧೂಳಿನಿಂದ ಕೂಡಿದ ಬಿರುಗಾಳಿ ಬೀಸಬಹುದು.

ಇಂದು ಮತ್ತು ನಾಳೆ ಅಂದರೆ ಮೇ 19ರಂದು ದೆಹಲಿ-ಎನ್‌ಸಿಆರ್ ಜನರಿಗೆ ಮಳೆರಾಯನ ದರ್ಶನದಿಂದ ತಂಪಾದ ವಾತವಾರಣ ಸಿಗಬಹುದು. ಮೇ 20-21 ರಂದು ಬಲವಾದ ಬಿಸಿಲು ಇರುತ್ತದೆ. ಮೇ 22 ರಂದು ಹಗಲಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 23 ರಂದು ಕೂಡ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ