AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಮುಂದಿನ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ
Follow us
ನಯನಾ ರಾಜೀವ್
|

Updated on: Jun 18, 2023 | 8:05 AM

ಮುಂದಿನ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೂನ್ 20 ರಂದು ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕ್ಯಾಸಲ್ ರಾಕ್, ಸಿದ್ದಾಪುರ, ಕದ್ರಾ, ಕೊಲ್ಲೂರಿನಲ್ಲಿ ಮಳೆಯಾಗಿದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಸಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:ಬಿಪೊರ್ ಜಾಯ್ ಅಬ್ಬರ, ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್, ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ

ಭಾರೀ ಸಂಚಲನವನ್ನುಂಟು ಮಾಡಿದ್ದ ಬಿಪೋರ್​ಜಾಯ್ ಚಂಡಮಾರುತ ಸದ್ಯ ತನ್ನ ಉಗ್ರರೂಪವನ್ನು ನಿಧಾನವಾಗಿ ಕಡಿಮೆ ಮಾಡುತ್ತಿದೆ. ಗುಜರಾತ್‌ನಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದ್ದ ಚಂಡಮಾರುತ ಸದ್ಯ ಪಾಕಿಸ್ತಾನದತ್ತ ಸಾಗುತ್ತಿದ್ದು, ನಂತರ ಪುನಃ ಭಾರತದತ್ತ ವ್ಯಾಪಿಸುವ ಸಾಧ್ಯತೆ ಇದೆ.

ಚಂಡಮಾರುತ ಗುಜರಾತ್​ನಲ್ಲಿ ಭಾರೀ ಅನಾಹುತ ಸೃಷ್ಟಿಸಿದ್ದು, ಸುಮಾರು 940 ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ನೂರಾರು ಮರಗಳು ಧರೆಗುರುಳಿವೆ. ಚಂಡಮಾರುತವು ಗಂಟೆಗೆ 108 ಕಿಮೀ ವೇಗದಲ್ಲಿ ಅರಬ್ಬಿ ಸಮುದ್ರದಿಂದ ಜಖೌ ಬಂದರಿನ ಬಳಿ ಭೂಕುಸಿತ ಉಂಟು ಮಾಡಿದೆ. ಚಂಡಮಾರುತದ ಬೀಸಿದ ನಂತರ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯೂ ಆಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?