Karnataka Rains: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರು, ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರು, ರೆಡ್ ಅಲರ್ಟ್​ ಘೋಷಣೆ
ಮಳೆ
Image Credit source: Business Today

Updated on: Jul 07, 2023 | 7:26 AM

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 8 ರಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಲ್ಕಿ, ಕೋಟ, ಕಾರ್ಕಳ, ಉಡುಪಿ, ಮಂಕಿ, ಪಣಂಬೂರು, ಶಿರಾಲಿ, ಮಂಗಳೂರಿನಲ್ಲಿ ಅತ್ಯಧಿಕ ಮಳೆಯಾಗಿದೆ.
ಕುಂದಾಪುರ, ಮಂಗಳೂರು ವಿಮಾನ ನಿಲ್ದಾಣ, ಕದ್ರಾ, ಕಾರವಾರ, ಗೇರುಸೊಪ್ಪ, ಸಿದ್ದಾಪುರ, ಪುತ್ತೂರು, ಮಾಣಿ, ಸುಳ್ಯ, ಬೆಳ್ತಂಗಡಿ, ಹೊನ್ನಾವರ, ಅಂಕೋಲಾ, ಕ್ಯಾಸಲ್ ರಾಕ್, ಕುಮಟಾ, ಕೊಲ್ಲೂರು, ಭಾಗಮಂಡಲದಲ್ಲಿ ಭಾರಿ ಮಳೆ ಸುರಿದಿದೆ.
ಬೇಲಿಕೇರಿ, ಲಿಂಗನಮಕ್ಕಿ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಗೋಕರ್ಣ, ಕಳಸ, ಧರ್ಮಸ್ಥಳ, ಯಲ್ಲ್ಲಾಪುರ, ಶೃಂಗೇರಿ,ತಾಳಗುಪ್ಪ, ನಾಪೋಕ್ಲು, ಮಂಚಿಕೆರೆ, ಜಯಪುರ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಕಮ್ಮರಡಿ, ಲೋಂಡಾ, ತ್ಯಾಗರ್ತಿ, ಕೊಪ್ಪ, ಬಾಳೆಹೊನ್ನೂರು, ಮೂರ್ನಾಡು, ಸೋಮವಾರಪೇಟೆ, ಪೊನ್ನಂಪೇಟೆ, ಕಿರವತ್ತಿ, ಹಳಿಯಾಳ, ಜಾನ್​ಮನೆ, ಸಿದ್ದಾಪುರ, ಮುಂಡಗೋಡು, ಔರಾದ್, ಮಂಡಗದ್ದೆ, ಶ್ರೀಮಂಗಲ, ಸುಂಟಿಕೊಪ್ಪ, ಬನವಾಸಿ, ಶನಿವಾರಸಂತೆ, ಹಾಸನ, ಬಂಡೀಪುರ, ಸಕಲೇಶಪುರ, ಬೆಳಗಾವಿ, ಹುಕ್ಕೇರಿ, ಬೈಲಹೊಂಗಲ, ಧಾರವಾಡ, ಅಕ್ಕಿಆಲೂರು, ಸವಣೂರು, ಧಾರವಾಡ, ಕಮಲಾಪುರ, ಭದ್ರಾವತಿ, ಆನವಟ್ಟಿ, ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ:Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಧಾರಾಕಾರ ಮಳೆ

ಕರಾವಳಿಯ ಎಲ್ಲಾ ಜಿಲ್ಲೆಗಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಭಾರಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆಯಿಂದಲೇ ಜಿನುಗು ಮಳೆ ಶುರುವಾಗಿದೆ.

ಎಚ್​ಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us