AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮೇ 1ರವರೆಗೆ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಆತಂಕ

Karnataka Weather Today: ಇಂದಿನಿಂದ ಮೇ 1ರವರರೆಗೂ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಮೇ 1ರವರೆಗೆ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಆತಂಕ
ಮಳೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Apr 28, 2022 | 5:50 AM

Share

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡರಿಂದ ಮೂರು ದಿನಗಳಿಂದ ಮಳೆ ಉಂಟಾಗಿದೆ. ಇಂದು ಕೂಡ ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ (Rainfall) ಮಳೆಯಾಗಲಿದೆ. ಇಂದಿನಿಂದ ಮೇ 1ರವರರೆಗೂ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಏಪ್ರಿಲ್ 30ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.

ಇಂದು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಡಿಕೇರಿ, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಕೊಪ್ಪ, ಹೊಸನಗರ, ಸಾಗರ, ತೀರ್ಥಹಳ್ಳಿಯ ಸುತ್ತಮುತ್ತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಗಡಿಯಲ್ಲೂ ಮಳೆಯಾಗಲಿದೆ.

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.

ಮೇ 1ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಗಿಂತ ಗುಡುಗು, ಸಿಡಿಲುಗಳ ಆರ್ಭಟ ಜೋರಾಗಿದೆ. ಕರ್ನಾಟಕ ಮಾತ್ರವಲ್ಲದೆ ಇಂದಿನಿಂದ ಈಶಾನ್ಯ ಭಾರತದಲ್ಲಿ ಮಿಂಚು, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಹವಾಮಾನ ಇಲಾಖೆಯು ಗುಜರಾತ್‌ನಲ್ಲಿ ಇಂದಿನವರೆಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಲಘು ಮಳೆಯಾಗಲಿದೆ. ಇಂದು ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಈ ಹವಾಮಾನ ಪರಿಸ್ಥಿತಿಗಳೊಂದಿಗೆ ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಬಿಹಾರ, ಜಾರ್ಖಂಡ್, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ ಕೂಡ ಉಷ್ಣ ಅಲೆ ಉಂಟಾಗಲಿದೆ.

ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಏಪ್ರಿಲ್ 29ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಮಿಂಚು ಮತ್ತು ಬಿರುಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನ ಗುಡುಗು, ಭಾರೀ ಮಳೆ

Karnataka Rain: ಕರಾವಳಿ, ಕೊಡಗು, ಹಾಸನ, ಉತ್ತರ ಕರ್ನಾಟಕದಲ್ಲಿ ಇಂದು ತುಂತುರು ಮಳೆ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು