AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕಲಬುರಗಿ, ಯಾದಗಿರಿ ಸೇರಿದಂತೆ ಹಲವೆಡೆ ಮಳೆ; ಸಿಡಿಲಿಗೆ ಇಬ್ಬರು ಬಲಿ

Karnataka Rain: ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ(Rain)ಯಾಗುತ್ತಿದ್ದು, ತಂಪಾದ ವಾತಾವರಣ ನಿರ್ಮಾಣವಾಗಿದೆ. ಅದರಂತೆ ಇಂದು ಕೆಲವೆಡೆ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮೇ ತಿಂಗಳ ಕೊನೆ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎಂದು ಭಾರತ ಹವಾಮಾನ ಇಲಾಖೆ(IMD) ಸೂಚನೆ ನೀಡಿದೆ.

Karnataka Rain: ಕಲಬುರಗಿ, ಯಾದಗಿರಿ ಸೇರಿದಂತೆ ಹಲವೆಡೆ ಮಳೆ; ಸಿಡಿಲಿಗೆ ಇಬ್ಬರು ಬಲಿ
ಕಲಬುರಗಿ, ಯಾದಗಿರಿ, ಉಡುಪಿಯಲ್ಲಿ ಮಳೆ
ಕಿರಣ್ ಹನುಮಂತ್​ ಮಾದಾರ್
|

Updated on: May 26, 2024 | 7:43 PM

Share

ಕಲಬುರಗಿ, ಮೇ.26: ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ(Rain)ಯಾಗುತ್ತಿದ್ದು, ತಂಪಾದ ವಾತಾವರಣ ನಿರ್ಮಾಣವಾಗಿದೆ. ಅದರಲ್ಲೂ ಇಂದು(ಮೇ.26) ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಮತ್ತು ರೆಡ್​ ಅಲರ್ಟ್​ ಘೋಷಿಸಲಾಗಿದೆ. ಅದರಂತೆ ಇಂದು ಕೆಲವೆಡೆ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮೇ ತಿಂಗಳ ಕೊನೆ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎಂದು ಭಾರತ ಹವಾಮಾನ ಇಲಾಖೆ(IMD) ಸೂಚನೆ ನೀಡಿದೆ.

ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಏಕನಾಥ್ ವಾಘಮೂಡೆ(55) ಹಾಗೂ ಸತೀಶ್ ಶಳಕೆ(40) ಮೃತರು. ಇಬ್ಬರೂ ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳಾಗಿದ್ದು, ಮಳೆ ಬಂದ ಹಿನ್ನೆಲೆ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಮಳೆಯಿಂದ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ದಂಪತಿ ಸಮಾಧಿ ಮುಳುಗಡೆ

ಯಾದಗಿರಿಯಲ್ಲಿ ಮಳೆಗೆ ಕರೆಯಂತಾದ ಬಡಾವಣೆ

ಯಾದಗಿರಿ: ಬಿರುಗಾಳಿ ಸಹಿತ ಬಾರಿ ಮಳೆ ಹಿನ್ನಲೆ ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿಯ ಬಡಾವಣೆ  ಕರೆಯಂತಾಗಿದೆ. ಮನೆಗಳ‌ ಸುತ್ತ ಮಳೆ ನೀರು ಆವರಿಸಿಕೊಂಡಿದ್ದು, ಮಳೆ‌ ನಿಂತ ಮೇಲೂ ಮನೆಯಿಂದ ಹೊರ ಬರಲಾಗದೆ ನಿವಾಸಿಗಳ ಪರದಾಟ ನಡೆಸಿದ್ದಾರೆ. ಸತತ ಮೂರು ಗಂಟೆಗಳ ಕಾಲ ಸುರಿದಿರುವ ಮಳೆಯಿಂದ ರಸ್ತೆ ಮೇಲೂ ಸಹ ನೀರು ಆವರಿಸಿಕೊಂಡಿದೆ. ಇದರಿಂದ  ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಇನ್ನು ವಿದ್ಯುತ್ ಕಂಬಗಳು, ಬೃಹತ್ ಮರಗಳು ಸಹ ನೆಲಕ್ಕುರಳಿದ್ದರಿಂದ ವಾಹನ ಸಂಚಾರಕ್ಕೂ ಅಡಚಣೆ‌ ಆಗಿದೆ.

ಬಿಸಿಲನಾಡು ಕೊಪ್ಪಳ, ಕರಾವಳಿ ಜಿಲ್ಲೆ ಉಡುಪಿಯಲ್ಲೂ ಮಳೆ

ಕೊಪ್ಪಳ: ಬಿಸಿಲನಾಡು ಕೊಪ್ಪಳವೂ ಇದೀಗ ಪುಲ್ ಕೂಲ್ ಕೂಲ್ ಆಗಿದೆ. ಮುಂಜಾನೆಯಿಂದ ಕೊಪ್ಪಳ ನಗರ ಸೇರಿ ಹಲವಡೆ ಭರ್ಜರಿ ಮಳೆಯಾಗಿದ್ದು, ಮುಂಜಾನೆಯೇ ಗುಡುಗು ಸಹಿತ ವರುಣನ ಆಗಮನವಾಗಿದೆ. ಮಳೆಯಿಂದ ಕೊಪ್ಪಳ ಜನತೆ ಸಂತಸಗೊಂಡಿದ್ದಾರೆ. ಇತ್ತ ಕರಾವಳಿ ಜಿಲ್ಲೆ ಉಡುಪಿಯಲ್ಲೂ ಗುಡುಗು ಸಹಿತ ಭಾರಿ ಮಳೆ ಆಗಿತ್ತಿದ್ದು, ಸಾಸ್ತಾನ, ಸಾಲಿಗ್ರಾಮ, ಕೋಟದ ಕೋಟೇಶ್ವರದಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಮುಂದಿನ 2 ದಿನ ಉಡುಪಿ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್