AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಧಾರಾಕಾರ ಮಳೆಗೆ ನದಿ, ಕೆರೆಗಳು ಭರ್ತಿ, ಅಪಾಯದ ಅಂಚಿನಲ್ಲಿ ಕೆರೆ ತೊಣ್ಣೂರು ಕೆರೆ

ರಾಜ್ಯದ ವಿವಿಧ ಕಡೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ, ಕೆರೆ, ಹಳ್ಳ- ಕೊಳ್ಳಗಳು ಭರ್ತಿಗೊಳ್ಳುತ್ತಿದ್ದು, ಕೆಲವೆಡೆ ಕೆರೆ ಕೋಡಿ ಹೊಡೆದು ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ.

Karnataka Rain: ಧಾರಾಕಾರ ಮಳೆಗೆ ನದಿ, ಕೆರೆಗಳು ಭರ್ತಿ, ಅಪಾಯದ ಅಂಚಿನಲ್ಲಿ ಕೆರೆ ತೊಣ್ಣೂರು ಕೆರೆ
ಮಳೆಗೆ ಭರ್ತಿಗೊಂಡ ಕೆರೆಗಳು
TV9 Web
| Edited By: Rakesh Nayak Manchi|

Updated on: Oct 14, 2022 | 2:51 PM

Share

ತುಮಕೂರು: ರಾಜ್ಯದ ವಿವಿಧ ಕಡೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ, ಕೆರೆ, ಹಳ್ಳ- ಕೊಳ್ಳಗಳು ಭರ್ತಿಗೊಳ್ಳುತ್ತಿದ್ದು, ಕೆಲವೆಡೆ ಕೆರೆ ಕೋಡಿ ಹೊಡೆದು ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಸದ್ಯ ತುಮಕೂರು, ಮಂಡ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಸುರಿದ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೊಂದೆಡೆ ತುಮಕೂರಿನಲ್ಲಿ ಕೆರೆ ತುಂಬಿ ರಸ್ತೆಗೆ ಬಂದ ನೀರಿನಲ್ಲಿ ಮೀನುಗಳು ಕೂಡ ಕೊಚ್ಚಿ ಬಂದಿವೆ. ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿರುವ ಮಾರನಕಟ್ಟೆ ಕೆರೆ ಸತತವಾಗಿ ಸುರಿದ ಮಳೆಯಿಂದಾಗಿ ತುಂಬಿ ನೀರು ರಸ್ತೆಗೆ ಬಂದಿದೆ. ಇದರೊಂದಿಗೆ ಕೆರೆಯಲ್ಲಿದ್ದ ಮೀನುಗಳು ಕೂಡ ರಸ್ತೆಗೆ ಬಂದಿವೆ. ಹಿಗಾಗಿ ಜನರು ಮೀನಿಗಾಗಿ ಮುಗಿಬಿದ್ದಿದ್ದು, ದೃಶ್ಯಾವಳಿಗಳನ್ನು ಮೊಬೈಲ್ ಕ್ಯಾಮಾರಾದಲ್ಲಿ ಸೆರೆಹಿಡಿಯಲಾಗಿದೆ.

ಇನ್ನೊಂದೆಡೆ, ತುಮಕೂರಿನ ಮಧುಗಿರಿ ತಾಲ್ಲೂಕಿನ ಚನ್ನಸಾಗರ ಗ್ರಾಮಕ್ಕೆ ಮುಳುಗಡೆ ಭೀತಿ ಎದುರಾಗಿದೆ. ಈ ಹಿಂದೆ ಎರಡು ಬಾರಿಯ ಮಳೆಗೆ ಸಂಪೂರ್ಣ ಮುಳುಗಡೆಯಾಗಿದ್ದ ಗ್ರಾಮದಲ್ಲಿ ಇದೀಗ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಪರಿಣಾಮವಾಗಿ ಜಯಮಂಗಲಿ ನದಿ ನೀರು ತುಂಬಿ ಹರಿಯುತ್ತಿದೆ. ಹೀಗಾಗಿ ಗ್ರಾಮ ಮುಳುಗಡೆಯಾಗುವ ಭೀತಿ ಎದುರಾದ ಹಿನ್ನೆಲೆ ಕೆಲವರು ಗ್ರಾಮ ತೊರೆಯಲು ಮುಂದಾಗಿದ್ದಾರೆ. ಅಲ್ಲದೆ ಗ್ರಾಮಸ್ಥರನ್ನು ಬೇರೆ ಕಡೆಗಳಿಗೆ ಸ್ಥಳಾಂತರಿಸಲು ಕಂದಾಯ ಅಧಿಕಾರಿಗಳು, ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಜಮೀನುಗಳಿಗೆ ನುಗ್ಗಿದ ಹಳ್ಳದ ನೀರು

ರಾಮನಗರ: ತಡರಾತ್ರಿ ಮಾಗಡಿ‌ ತಾಲೂಕಿನಾದ್ಯಂತ ಬಾರಿ ಮಳೆ ಹಿನ್ನೆಲೆ ಕೂಟಗಲ್, ಶ್ಯಾನಭೋಗನಹಳ್ಳಿ, ಎರೇಹಳ್ಳಿ ಗ್ರಾಮಗಳ ಜಮೀನುಗಳಿಗೆ ಹಳ್ಳದ ನೀರು ನುಗ್ಗಿದೆ. ಪರಿಣಾಮವಾಗಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ನಾಶಗೊಂಡಿದ್ದು, ಬಾಳೆ, ತೆಂಗು, ಸೀಮೆ ಹುಲ್ಲು ಬೆಳೆಗಳು ಸಂಪೂರ್ಣ ನಾಶಗೊಂಡಿವೆ.

ಅಪಾಯದ ಅಂಚಿನಲ್ಲಿ ಕೆರೆ ತೊಣ್ಣೂರು ಕೆರೆ

ಮಂಡ್ಯ: ತಡ ರಾತ್ರಿ ಸುರಿದ ಭಾರೀ ಮಳೆಗೆ ತೊಣ್ಣೂರು ಕೆರೆ ಕೋಡಿ ಬಿದ್ದಿದ್ದು, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿರುವ ನೀರನ್ನ ಕಂಡು ಜನರು ಭಯಭೀತರಾಗಿದ್ದಾರೆ. ತೊಣ್ಣೂರು ಕೆರೆ 20 ವರ್ಷಗಳ ಬಳಿಕ ಕೋಡಿ ಹೊಡೆದಿರುವ ಪರಿಣಾಮ 100 ಎಕರೆಯಷ್ಟು ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಕಬ್ಬು ಬತ್ತ ಬೆಳೆಗಳಿಗೆ ಹಾನಿಯಾಗಿವೆ. ಮುಂಜಾಗ್ರತಾ ಕ್ರಮವಾಗಿ ಕೆರೆಗೆ ಹೋಗುವ ಮಾರ್ಗವನ್ನ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ