AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಭಾರೀ ಮಳೆಗೆ ಶಿವಮೊಗ್ಗ, ಚಿಕ್ಕಮಗಳೂರು ತತ್ತರ; ಇಂದು ಈ ಜಿಲ್ಲೆಗಳಲ್ಲಿ ವರುಣನ ಆರ್ಭಟ

Karnataka Weather Today: ನಿನ್ನೆ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇಂದು ಕೂಡ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ

Karnataka Rain: ಭಾರೀ ಮಳೆಗೆ ಶಿವಮೊಗ್ಗ, ಚಿಕ್ಕಮಗಳೂರು ತತ್ತರ; ಇಂದು ಈ ಜಿಲ್ಲೆಗಳಲ್ಲಿ ವರುಣನ ಆರ್ಭಟ
ಮಳೆ
TV9 Web
| Edited By: |

Updated on: Mar 20, 2022 | 5:48 AM

Share

Karnataka Weather Today: ಭಾರತದಲ್ಲಿ ಅಸಾನಿ ಚಂಡಮಾರುತ (Cyclone Asani) ಅಪ್ಪಳಿಸಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ನೆರೆಯ ತಮಿಳುನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅಕಾಲಿಕವಾಗಿ ಮಳೆಯಾಗುತ್ತಿದೆ. ಶುಕ್ರವಾರ ಸುರಿದ ಮಳೆಗೆ ಹಾವೇರಿ ಜಿಲ್ಲೆಯ ರವಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದರ ನಡುವೆ ನಿನ್ನೆ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಇಂದು ಕೂಡ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಮಾ.20) ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ (Rainfall) ಸಾಧ್ಯತೆ ಇದೆ.

ಶನಿವಾರ ಉತ್ತರ ಕನ್ನಡದಲ್ಲಿ ಮಳೆರಾಯ ಅಬ್ಬರಿಸಿದ್ದು, ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯಲ್ಲಿ ಸೇರಿದ್ದ ಜನರು, ವ್ಯಾಪಾರಿಗಳು ಕಂಗಾಲಾಗುವಂತಾಯಿತು. ಅಲ್ಲದೆ, ಜಾತ್ರೆಯಲ್ಲಿ ಹಾಕಲಾಗಿದ್ದ ಜಾಯಿಂಟ್ ವೀಲ್ ಕೂಡ ಕೆಳಗೆ ಬಿದ್ದಿತ್ತು. ಚಿಕ್ಕಮಗಳೂರಿನ ಕಳಸ, ಮೂಡಿಗೆರೆ, ಶೃಂಗೇರಿ, ಎನ್​ಆರ್​ ಪುರ, ಕೊಪ್ಪದಲ್ಲಿ ಭಾರೀ ಮಳೆಯಾಗಿದೆ. ಅನೇಕ ಕಡೆ ವಿದ್ಯುತ್ ಕಂಬಗಳು, ರಸ್ತೆಗಳು ಕುಸಿದಿವೆ. ಕಳಸದಲ್ಲಿ ಮರ ಬಿದ್ದು ಮೆನಯೇ ಕುಸಿದು ಬಿದ್ದಿದೆ. ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಸಾಗರ, ತೀರ್ಥಹಳ್ಳಿ, ಶಿವಮೊಗ್ಗ ನಗರ ಸೇರಿದಂತೆ ಕೆಲವೆಡೆ ಶನಿವಾರ ಮಳೆಯಾಗಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಇಂದು (ಮಾರ್ಚ್ 20) ಮತ್ತು ಮಾರ್ಚ್​ 21ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 4 ದಿನಗಳಲ್ಲಿ ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡು, ಕರ್ನಾಟಕದ ಕೆಲವೆಡೆ ಮಳೆ ಹೆಚ್ಚಾಗಿದ್ದು, ನಾಳೆಯಿಂದ ಇನ್ನಷ್ಟು ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ 22 ರ ಅವಧಿಯಲ್ಲಿ ರಾಯಲಸೀಮಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಾರ್ಚ್ 21ರಿಂದ ಈಶಾನ್ಯ ಭಾರತದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Cyclone Asani: ಅಸಾನಿ ಚಂಡಮಾರುತದ ಅಬ್ಬರದಿಂದ ಸೋಮವಾರದವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆ

Karnataka Rain Today: ಬೆಂಗಳೂರು, ಕೊಡಗು, ಕರಾವಳಿ ಸೇರಿ ಹಲವೆಡೆ ಇಂದು ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ