Karnataka Rain: ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇಂದಿನಿಂದ ಜೂನ್ 13ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದ್ದು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಗೂ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

Karnataka Rain: ಜೂನ್ 13ರ ವರೆಗೂ ರಾಜ್ಯದಲ್ಲಿ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಮಳೆ
Follow us
|

Updated on: Jun 08, 2024 | 7:50 AM

ಬೆಂಗಳೂರು, ಜೂನ್.08: ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (Karnataka Rain). ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ. ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲೆಿಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲೆಿಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮಳೆಯಿಂದಾಗಿ ಭಾರೀ ಅವಾಂತರ; ಮನೆ, ಠಾಣೆಗಳಿಗೆ ನುಗ್ಗಿದ ನೀರು, ಜಲ ಮೂಲಗಳಿಗೆ ಜೀವ ಕಳೆ

ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(40-50kmph) ತುಂಬಾ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಹಾವೆೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (30-40 kmph) ಸಂಭವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಚಂಡಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೆೇಗದಲ್ಲಿ 65 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಸಲಾಗಿದೆ.

ಇನ್ನು ಮಿಂಚು ಮತ್ತು ಗುಡುಗು ಸಿಡಿಲಿನಿಂದ ಎಚ್ಚರ! ಈ ಸಾರ್ವಜನಿಕ ಜಾಗೃತಿ ವಿಡಿಯೋವನ್ನು ವೀಕ್ಷಿಸಿ, ಸುರಕ್ಷತಾ ಕ್ರಮಗಳನ್ನು ತಿಳಿಯಿರಿ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಟ್ವೀಟ್ ಮೂಲಕ ತಿಳಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ