AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ಕರ್ನಾಟಕದ ಹಲವೆಡೆ ಭಾರೀ ಮಳೆ: ಸಿಡಿಲಿಗೆ ಹೊತ್ತಿ ಉರಿದ ಪ್ರವಾಸಿತಾಣದ ಗಿರಿಜನ ಮನೆ

ಸುಡುವ ರಣ ಬಿಸಿಲು, ಬಿಸಿ ಗಾಳಿಯಿಂದ ತತ್ತರಿಸಿದ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಈ ಹಿನ್ನೆಲೆಯಲ್ಲಿ ಬಿಸಿ ಬಿಸಿಯಾಗಿದ್ದ ವಾತಾವರಣವೂ ಸಹ ಕೊಂಚ ಕೂಲ್ ಕೂಲ್ ಆಗಿದೆ. ಹೌದು ಇಂದು(ಮೇ 03) ಸುರಿದ ಮಳೆಯಿಂದಾಗಿ ಹಲವೆಡೆ ಕೆಲ ಅನಾಹುತಗಳು ಸಂಭವಿಸಿವೆ. ಹಾಗಾದ್ರೆ, ಯಾವ್ಯಾವ ಜಿಲ್ಲೆಯಲ್ಲಿ ಮಳೆಯಾಗಿದೆ? ಏನೇನು ಅದ್ವಾನವಾಗಿದೆ ಎನ್ನುವ ವಿವರ ಇಲ್ಲಿದೆ.

Karnataka Rain Updates: ಕರ್ನಾಟಕದ ಹಲವೆಡೆ ಭಾರೀ ಮಳೆ: ಸಿಡಿಲಿಗೆ ಹೊತ್ತಿ ಉರಿದ ಪ್ರವಾಸಿತಾಣದ ಗಿರಿಜನ ಮನೆ
ಕರ್ನಾಟಕದ ಹಲವೆಡೆ ಭಾರೀ ಮಳೆ: ಸಿಡಿಲಿಗೆ ಹೊತ್ತಿ ಉರಿದ ಪ್ರವಾಸಿತಾಣದ ಗಿರಿಜನ ಮನೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:May 03, 2024 | 6:04 PM

Share

ಬೆಂಗಳೂರು, ಮೇ 03: ರಾಜ್ಯದಲ್ಲಿ (Karnataka) ಬಿಸಿ ಗಾಳಿಯೊಂದಿಗೆ ತಾಪಮಾನ ಹೆಚ್ಚಾಗಿತ್ತು. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ಅಕ್ಷರಶಃ ನಲುಗಿದ್ದರು. ಇನ್ನು ನಗರದಲ್ಲಿ ಕೂಡ ದಾಖಲೆ ಪ್ರಮಾಣದಲ್ಲಿ ಉಷ್ಣಾಂಶ ದಾಖಲಾಗಿತ್ತು. ಆದರೆ ನಿನ್ನೆಯಿಂದ ವರುಣ ದೇವನ ಕೃಪೆಯಾಗಿದ್ದು, ಬೆಂಗಳೂರಿನಲ್ಲಿ ಜೋರು ಮಳೆಯ (Rain) ಆರ್ಭಟ ಶುರುವಾಗಿದೆ. ಇಂದು ಕೂಡ ಸಿಲಿಕಾನ್​ ಸಿಟಿಯಲ್ಲಿ ಮಳೆ ಸುರಿದಿದ್ದು,  ವಾತಾವರಣವೂ ಸಹ ಕೊಂಚ ಕೂಲ್ ಕೂಲ್ ಆಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಆಗಿದ್ದು, ಕೆಲ ಅವಾಂತರಗಳು ಕೂಡ ಸಂಭವಿಸಿದೆ. ಆ ಮೂಲಕ ಜನ ಜೀವನ ಅಸ್ತವ್ಯಸ್ತವಾಗಿದೆ.

ಸಿಡಿಲು ಬಡಿದು ಹೊತ್ತಿಉರಿದ ಪ್ರವಾಸಿತಾಣದ ಗಿರಿಜನ ಮನೆ

ರಾಮನಗರದಲ್ಲಿ ಭಯಾನಕ‌ ಗುಡುಗು‌ ಸಿಡಿಲಿನೊಂದಿಗೆ ಮಳೆ ಸುರಿದ ಪರಿಣಾಮ ನಗರದ ಪ್ರಖ್ಯಾತ ಪ್ರವಾಸೀ ತಾಣದ ಗಿರಿಜನ ಮನೆ ಹೊತ್ತಿ ಉರಿದಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ ನಿರ್ಮಾಣ ಮಾಡಿದ ಹಾಡಿ ಜನಗಳ ಮನೆ ಹೊತ್ತಿ ಉರಿದಿದೆ. ಹೀಗಾಗಿ ಸಿಡಿಲಿನ ಆರ್ಭಟಕ್ಕೆ ಪ್ರವಾಸಿಗರು ಆತಂಕಗೊಂಡಿದ್ದರು.

ಇದನ್ನೂ ಓದಿ: Bengaluru Rain Today: ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ

ಹುಲ್ಲಿನಿಂದ ಮಾಡಿದ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಿರುಗಾಳಿ ಸಹಿತ ಬಾರಿ ಮಳೆ: ಧರೆಗುರುಳಿದ ಮರದ ರೆಂಬೆ ಕೊಂಬೆಗಳು

ಮೈಸೂರಿನಲ್ಲಿ ಹಲವೆಡೆ ಬಿರುಗಾಳಿ ಸಹಿತ ಬಾರಿ ಮಳೆ ಹಿನ್ನೆಲೆ ಮರದ ರೆಂಬೆ ಕೊಂಬೆಗಳು ಧರೆಗುರುಳಿವೆ. ನಗರದ ಕಾಳಿದಾಸ ರಸ್ತೆಯಲ್ಲಿ ಕಾರುಗಳ ಮೇಲೆ ಮರದ ರಂಬೆಗಳು ಬಿದ್ದ ಪರಿಣಾಮ ಕಾರುಗಳು ಜಖಂ ಆಗಿವೆ. ಬಿರುಗಾಳಿಯ ರಭಸಕ್ಕೆ ರಂಬೆ ಕೊಂಬೆಗಳು ತುಂಡಿರಿಸಿವೆ.

ವರ್ಷದ ಮೊದಲ ಮಳೆ ಕಂಡು ಮಂಡ್ಯ ಜನರ ಮೊಗದಲ್ಲಿ ಹರ್ಷ

ಮಂಡ್ಯದಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ಆ ಮೂಲಕ ಬಿಸಿಲ ಬೇಗೆಯಿಂದ ಬಸವಳಿದಿದ್ದ ಮಂದಿಗೆ ಮಳೆರಾಯ ತಂಪೆರೆದಿದ್ದಾನೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಆಗಿದೆ. ವರ್ಷದ ಮೊದಲ ಮಳೆ ಕಂಡು ರೈತರು, ಮಂಡ್ಯ ಜನರ ಮೊಗದಲ್ಲಿ ಹರ್ಷ ಉಂಟಾಗಿದೆ.

ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆ ಹಿನ್ನಲೆ ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿರುವಂತಹ ಘಟನೆ ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದ ಬಳಿ ಸಂಭವಿಸಿದೆ. ಮಳೆ ಬರುತ್ತಿದ್ದಾಗ ಮರದ ಕೆಳಗೆ ನಿಂತಿದ್ದ ರತ್ನಮ್ಮ ಮೃತ ದುರ್ದೈವಿ. ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:02 pm, Fri, 3 May 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?