AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain:ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇನ್ನೂ 5 ದಿನ ಮಳೆ

ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಬೆಂಗಳೂರು(Bengaluru Rain) ತಲ್ಲಣಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಶೀತಗಾಳಿಗೆ ಬೆಂಗಳೂರು ಮಂದಿ ನಡುಗುತ್ತಿದ್ದು, ಇನ್ನೂ 5 ದಿನ ರಾಜ್ಯದಲ್ಲಿ ಇದೇ ಪರಿಸ್ಥಿತಿ ಮುಂದುವರಿಯಲಿದೆ.

Karnataka Rain:ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಇನ್ನೂ 5 ದಿನ ಮಳೆ
ಮಳೆ
TV9 Web
| Edited By: |

Updated on: Dec 13, 2022 | 7:12 PM

Share

ಬೆಂಗಳೂರು: ತಮಿಳುನಾಡಿನಲ್ಲಿ ಮ್ಯಾಂಡಸ್‌ ಚಂಡಮಾರುತ ಕರ್ನಾಟಕದ ಮೇಲೂ ಪರಿಣಾಮ ಬೀರಿದೆ. ಕರ್ನಾಟಕದ ಹಲವೆಡೆ ಮಳೆಯ (Karnataka Rain) ಅಬ್ಬರ ಅಷ್ಟಾಗಿ ಇರದಿದ್ದರೂ ತುಂತುರು ಮಳೆಯಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣ ಇದ್ದು, ಶೀತಗಾಳಿ ಬೀಸುತ್ತಿದೆ. ಈ ಹಿನ್ನೆಲೆಯಲ್ಲಿ ಚಳಿಗೆ ಜನ ಥರಗುಟ್ಟಿದ್ದಾರೆ.  ಇದರ ಮಧ್ಯೆ ಇನ್ನೂ  5 ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗಾಳಿ-ಮಳೆಯಿರಲಿ, ಕೊರೆಯುವ ಚಳಿಯಿರಲಿ; ಜನರಿಗೆ ಕೆಲಸಕ್ಕೆ ಹೋಗುವುದು ಮಾತ್ರ ತಪ್ಪದು!

ಈ ಬಗ್ಗೆ ಇಂದು(ಡಿಸೆಂಬರ್ 13) ಟಿವಿ9ಗೆ ಪ್ರತಿಕ್ರಿಯಿಸಿರುವ ಹವಮಾನ ಇಲಾಖೆ ತಜ್ಞ ಪ್ರಸಾದ್, ನಿನ್ನೆ((ಡಿಸೆಂಬರ್ 12)) ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ದಾವಣಗೆರೆಯಲ್ಲಿ 14 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಾಲಾಗಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಇರುವ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ ಇರಲಿದೆ. ದಕ್ಷಿಣ ಒಳನಾಡಿನ ಹಲವೆಡೆ ನಾಳೆ(ಡಿ.14) ಬಹುತೇಕ ಕಡೆ ಗುಡುಗು ಮಿಂಚಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಕರಾವಳಿಯ ಬಹುತೇಕ ಕಡೆ ಇಂದು ಮಳೆಯಾಗಿದ್ದು, ನಾಳೆಯೂ(ಡಿಸೆಂಬರ್ 14) ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಬೆಂಗಳೂರಿನಲ್ಲಿ ಮೊಡಕವಿದ ವಾತಾವರಣ ಮುಂದುವರಿದಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಾದ್ಯಂತ ಶೀತಗಾಳಿ, ಮಳೆ: ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ, ಆರೋಗ್ಯ ಸಚಿವರ ಸಲಹೆ ಪಾಲನೆ ಮಾಡುವುದು ಅವಶ್ಯ

ಡಿ.11ರಂದು ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇದ್ದು, ಒಂದು ಮೀ ಮೀಟರ್ ಮಳೆಯಾಗಿದೆ . ಅಕ್ಟೋಬರ್ 1 ರಿಂದ ಡಿಸೆಂಬರ್ 13 ರವರೆಗೂ 46 ಸೆಂ ಮೀಟರ್ ಮಳೆಯಾಗಿದೆ. ನಿನ್ನೆ(ಸೋಮವಾರ) ಹೆಚ್ ಎ ಎಲ್ ನಲ್ಲಿ 5 ಮಿಲಿ ಮೀಟರ್ ಮಳೆಯಾಗಿದೆ ಎಂದರು.

ಅಕ್ಟೋಬರ್ 1 ರಿಂದ ಡಿಸೆಂಬರ್ 13ರ ವೆರೆಗೂ 41 ಸೆಂ ಮೀ ಮಳೆಯಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5 ಮಿಲಿ ಮೀಟರ್ ಮಳೆಯಾಗಿದ್ದು ಗರಿಷ್ಠ ತಾಪಮಾನ 25.5 ಡಿಗ್ರಿ, ಕನಿಷ್ಟ ತಾಪಮಾನ. 19.5 ಕಂಡುಬಂದಿದೆ.

ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಇದ್ದು, ಕನಿಷ್ಟ ತಾಪಾಮಾನ 19 ಡಿಗ್ರಿ ಕಂಡುಬಂದಿದೆ. ನಾಳೆಯು‌ ಮುಸುಕಿನ ಮೋಡ ಇರಲಿದ್ದು, ಗುಡುಗು ಮಿಂಚಿನ‌ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?