AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Report: ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ, ಬೆಂಗಳೂರಿನಲ್ಲೂ ಎರಡು ದಿನ ಮಳೆ ಸಾಧ್ಯತೆ; ವಿವರ ಇಲ್ಲಿದೆ

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರಂದು ಆರೆಂಜ್ ಅಲರ್ಟ್, 16ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather Report: ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ, ಬೆಂಗಳೂರಿನಲ್ಲೂ ಎರಡು ದಿನ ಮಳೆ ಸಾಧ್ಯತೆ; ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 14, 2021 | 7:44 PM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿಕೆ ನೀಡಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಜುಲೈ 14ರಿಂದ 18ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಆಗುವ ಸಂಭವ ಇದೆ ಎಂದು ಅವರು ಹೇಳಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಜುಲೈ 14, 15, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 16ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಕೂಡ ಯಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಇಂದು ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಸುಬ್ರಹ್ಮಣ್ಯ 10 ಸೆಂ.ಮೀ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ 9 ಸೆಂ.ಮೀ ಮಳೆಯಾಗಿದೆ. ಕರಾವಳಿ ಉತ್ತರ ಒಳನಾಡು ದಕ್ಷಿಣ ಒಳನಾಡು ಜುಲೈ 14 ರಿಂದ 18 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯ ಕೆಲವು ಕಡೆ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರಂದು ಆರೆಂಜ್ ಅಲರ್ಟ್, 16ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸುತ್ತಮುತ್ತಲೂ ಉತ್ತಮ ಮಳೆಯಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಗೌಡಳ್ಳಿಯಲ್ಲಿ ನದಿ ನೀರು ಸೇತುವೆ ಮಟ್ಟದಲ್ಲಿ ಹರಿಯುತ್ತಿದೆ.

ಕೋಟೆನಾಡು ಚಿತ್ರದುರ್ಗದಲ್ಲಿ ಕೂಡ ಧಾರಾಕಾರ ಮಳೆ ಸುರಿದಿದೆ. ಕೆಲ ದಿನದಿಂದ ಮೋಡ ಮುಸುಕಿದ ವಾತಾವರಣ, ತುಂತುರು ಮಳೆ ಇತ್ತು. ಇಂದು ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ.

ಇದನ್ನೂ ಓದಿ: ಸೂರ್ಯೋದಯಕ್ಕೆ ಅವಕಾಶವೇ ಕೊಡದೆ ಬೆಂಗಳೂರಿನಲ್ಲಿ ಮಳೆ, ಹವಾಮಾನ ಮುನ್ಸೂಚನೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು!?

Himachal Pradesh Rain: ಹಿಮಾಚಲ ಪ್ರದೇಶದಲ್ಲಿ ನಿಲ್ಲದ ಪ್ರವಾಹ; ಭಾರೀ ಮಳೆಯಿಂದ ಸೂಫಿ ಗಾಯಕ ಸೇರಿ 8 ಜನ ಸಾವು

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು