Karnataka Rain: ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

| Updated By: ವಿವೇಕ ಬಿರಾದಾರ

Updated on: Aug 08, 2022 | 7:00 AM

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ ಮಳೆಯಾಗಲಿದೆ.

Karnataka Rain: ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Follow us on

Monsoon 2022: ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್​, ಕಲಬುರ್ಗಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 24 ಘಂಟೆ ಮಳೆ ಹೆಚ್ಚಾಗಲಿದೆ. ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ2  ದಿನ ಮೋಡಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಹಗುರ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೇಂಜ್​ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ (Kodagu Rain) ಮಳೆಯಿಂದ  ಆರೇಂಜ್ಅ ಲರ್ಟ್​ (Orange Alert) ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.

ಮುಂದಿನ 2 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ನೀರು ತೀವ್ರ ಮಟ್ಟಕ್ಕೆ ಏರಿದೆ.

ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್?: ಬೆಳಗಾವಿ, ಬೀದರ್, ಕಲಬುರಗಿ, ಶಿವಮೊಗ್ಗ ಮತ್ತು ಹಾಸನ  ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.  ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,  ಕೊಡಗು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ನೀಡಲಾಗಿದೆ.