Karnataka Rains: ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಹುಚ್ಚು ಮಳೆ, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಮೇ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಬೆಂಗಳೂರಿನಲ್ಲಿ ಮೇ 18ರ ತಡರಾತ್ರಿಯಿಂದ ಸೋಮವಾರ ಬೆಳಗ್ಗೆಯವರೆಗೂ ಹುಚ್ಚು ಮಳೆ ಬಂದಿದೆ. ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ಕೂಡ ನೀರು ನಿಂತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಹುಚ್ಚು ಮಳೆ, ಆರೆಂಜ್ ಅಲರ್ಟ್
ಮಳೆ
Image Credit source: PTI

Updated on: May 19, 2025 | 7:34 AM

ಬೆಂಗಳೂರು, ಮೇ 19:ಬೆಂಗಳೂರು ಸೇರಿ ಕರ್ನಾಟಕದ 18ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾನುವಾರ ಕೂಡ ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿದಿದ್ದು, ಎಲ್ಲೆಡೆ ನೀರು ನಿಂತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಮಂಕಿ, ಹೊನ್ನಾವರ, ಪುತ್ತೂರು, ಅಂಕೋಲಾ, ಕ್ಯಾಸಲ್ ರಾಕ್, ಕುಮಟಾ, ಹುನಗುಂದ, ಖಾನಾಪುರ, ಅಫ್ಜಲ್​ಪುರ, ಹುಬ್ಬಳ್ಳಿ, ಅಣ್ಣಿಗೆರೆ, ಹುಮ್ನಾಬಾದ್, ಗುರುಮಿಟ್ಕಲ್, ಹಿಡಕಲ್, ಸಂಕೇಶ್ವರ, ಶಿಗ್ಗಾಂವ್, ಜೇವರಗಿ, ಕಲಬುರಗಿಯಲ್ಲಿ ಮಳೆಯಾಗಿದೆ. ಜಗಳೂರು, ಕೊಟ್ಟಿಗೆಹಾರ, ವೈಎನ್ ಹೊಸಕೋಟೆ, ಚಿಕ್ಕಮಗಳೂರು, ಮದ್ದೂರು, ಕೊಬ್ಬನಹಳ್ಳಿ, ನಾಯಕನಹಟ್ಟಿ, ಚನ್ನಗಿರಿ, ನಾಗಮಂಗಲ, ಸಿರಾ, ಕುಣಿಗಲ್, ಅಜ್ಜಂಪುರ, ಬೇಲೂರು, ಮೈಸೂರು, ಭದ್ರಾವತಿ, ಜಯಪುರ, ಪರಶುರಾಂಪುರ, ನಾಪೋಕ್ಲುವಿನಲ್ಲಿ ಮಳೆಯಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಧರ್ಮಸ್ಥಳ, ಚಿಕ್ಕೋಡಿ, ತಾವರಗೇರಾ, ಧಾರವಾಡ, ಮುದಗಲ್, ಚಿಂಚೋಳಿ, ದೇವರಹಿಪ್ಪರಗಿ, ಕಕ್ಕೇರಿ, ಸಿಂಧಗಿ, ಲಿಂಗಸುಗೂರು, ಜೇವರಗಿ, ಹುಣಸಗಿ, ಆಲಮಟ್ಟಿಯಲ್ಲಿ ಮಳೆಯಾಗಿದೆ.ರಾಯಚೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆ, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಯಾವ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ?
ಮೇ 19 ರಿಂದ 24 ರವರೆಗೆ ಕರ್ನಾಟಕ, ಗೋವಾ, ಕೊಂಕಣ ಮತ್ತು ಕೇರಳದಂತಹ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಲ್ಲದೆ, ಮುಂದಿನ ಐದರಿಂದ ಆರು ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಗಳನ್ನು ನೀಡಲಾಗಿದೆ. ಅದೇ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಮೇ 19 ರವರೆಗೆ, ಪಶ್ಚಿಮ ರಾಜಸ್ಥಾನದಲ್ಲಿ ಮೇ 19-22 ರವರೆಗೆ ಶಾಖದ ಅಲೆ ಮುಂದುವರೆಯಲಿದೆ.
ಈಶಾನ್ಯ ಭಾರತದ ಬಗ್ಗೆ ಹೇಳುವುದಾದರೆ, ಮೇ 19-20 ರವರೆಗೆ ಅರುಣಾಚಲ ಪ್ರದೇಶದಲ್ಲಿ, ಮೇ 19-24 ರವರೆಗೆ ಅಸ್ಸಾಂ, ಮೇಘಾಲಯ, ಮೇ 19 ರಿಂದ ತ್ರಿಪುರ, ನಾಗಾಲ್ಯಾಂಡ್, ಮೇ 19 ರಿಂದ 20 ರವರೆಗೆ ಅಸ್ಸಾಂ, ಮೇಘಾಲಯದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ