AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮುಂಗಾರು ಚುರುಕು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಮುಂಗಾರು ಚುರುಕು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​
ಮಳೆImage Credit source: India.com
ನಯನಾ ರಾಜೀವ್
|

Updated on: Jun 25, 2023 | 8:05 AM

Share

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ನೈಋತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು, ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು.

ಕಾರವಾರ ಹಾಗೂ ಹೊನ್ನಾವರದಲ್ಲಿ ಭಾರಿ ಮಳೆಯಾಗಿದೆ. ಮಂಕಿ, ಕುಮಟಾ, ಗೋಕರ್ಣ, ಶಿರಾಲಿ, ಅಂಕೋಲಾ, ಗೇರುಸೊಪ್ಪ, ಪಣಂಬೂರು, ಕೋಟ, ಬೆಳ್ತಂಗಡಿ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಕದ್ರಾ, ಕ್ಯಾಸಲ್ ರಾಕ್, ಕಾರ್ಕಳ, ಕೊಲ್ಲೂರು, ಲಿಂಗನಮಕ್ಕಿ, ಮಂಗಳೂರು, ಉಡುಪಿ, ಮುಲ್ಕಿ, ಸುಳ್ಯ, ಸುಬ್ರಹ್ಮಣ್ಯ, ತಾಳಗುಪ್ಪ, ಬನವಾಸಿ, ಮಾಣಿ, ಯಲ್ಲಾಪುರ, ಕೊಟ್ಟಿಗೆಹಾರ, ಮಂಚಿಕೇರಿ, ಔರಾದ್, ಭಾಲ್ಕಿ, ಸಕಲೇಶಪುರ, ಮೈಸೂರು, ಕಳಸ, ತುಮಕೂರು, ಗೌರಿಬಿದನೂರು, ಮೂರ್ನಾಡುವಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಶಿವಮೊಗ್ಗ, ಕೊಡಗು ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
Video: ಟೆಕ್ ಸ್ಯಾವಿ ಮಂಗನ ಸೆಲ್ಫೀ ಕ್ರೇಜ್! ವಿಡಿಯೋ ವೈರಲ್
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು