AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಜಿಲ್ಲೆಗಳಲ್ಲಿ ನಿಲ್ಲದ ಮಳೆ ಅಬ್ಬರ: ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ ನೋಡಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಬಹುತೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮುಂಗಾರು ಮಳೆ ಅಬ್ಬರದಿಂದ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಅತ್ತ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿಯೂ ಭಾರಿ ಮಳೆ ಆಗುತ್ತಿದೆ. ರಾಜ್ಯದ ಎಲ್ಲೆಲ್ಲಿ ಮಳೆ ಪರಿಸ್ಥಿತಿ ಹೇಗಿದೆ ಎಂಬ ವಿವರ ಇಲ್ಲಿದೆ.

ಕರಾವಳಿ ಜಿಲ್ಲೆಗಳಲ್ಲಿ ನಿಲ್ಲದ ಮಳೆ ಅಬ್ಬರ: ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ ನೋಡಿ
ಮಳೆಯಿಂದಾಗಿ ಕಡಲು ಪ್ರಕ್ಷುಬ್ಧಗೊಂಡಿರುವುದು
Ganapathi Sharma
|

Updated on: Jul 10, 2024 | 6:37 AM

Share

ಬೆಂಗಳೂರು, ಜುಲೈ 10: ಕರಾವಳಿ ಭಾಗದಲ್ಲಿ ಮಳೆ ಸಾಲು ಸಾಲು ಅವಾಂತರಗಳನ್ನು ಸೃಷ್ಟಿಸಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಮೀನು, ಮನೆ, ರಸ್ತೆಗಳನ್ನು ಬಿಡದೇ ಎಲ್ಲವನ್ನೂ ವರುಣ ಆಪೋಷನ ತೆಗೆದುಕೊಳ್ಳುತ್ತಿದ್ದಾನೆ. ಭಾರಿ ಮಳೆಯ ಪರಿಣಾಮ ಕಾರವಾರದ ಕದ್ರಾ ಜಲಾಶಯದಿಂದ ಬಿಟ್ಟು ನೀರು ಅಸ್ನೋಟಿ ಗ್ರಾಮದ ಮನೆಗಳಿಗೆ ನುಗ್ಗಿದೆ. ಕೃಷಿ ಜಮೀನು ಸಂಪೂರ್ಣವಾಗಿ ಜಲಾವೃತವಾಗಿದೆ. ದೇವಸ್ಥಾನದ ಸುತ್ತಲೂ ನೀರು ಆವರಿಸಿದ್ದು, ದೇವರಿಗೂ ಜಲ ದಿಗ್ಬಂಧನವಾಗಿದೆ.

ಸಂತ್ರಸ್ತರನ್ನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ ಎನ್​​ಡಿಆರ್​ಎಫ್

ಉತ್ತರ ಕನ್ನಡ ಜಿಲ್ಲೆಯ ಶರಾವತಿ ಹಾಗೂ ಗುಂಡಬಾಳ ನದಿಗಳು ಅಪಾಯದ ಮಟ್ಟ ಮೀರಿವೆ. ಕಡತೋಕ, ಭಾಸ್ಕೇರಿ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಎನ್​ಡಿಆರ್​ಎಫ್​ ತಂಡ ಸಂತ್ರಸ್ತರನ್ನ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದೆ.

ಹೊನ್ನಾವರ ತಾಲೂಕಿನಲ್ಲಿ ಹಿರೆಕಟ್ಟು ಹಾಗೂ ಬಡಗಣಿ ಹಳ್ಳ ಉಕ್ಕಿ ಹರಿದಿದೆ. ಹಳ್ಳದ ನೀರು ಅಡಕೆ, ಭತ್ತದ ಗದ್ದೆಗೆ ನುಗ್ಗಿದ್ದು, ಲಕ್ಷಾಂತರ ಮೌಲ್ಯದ ಬೆಳೆ ಹಾನಿಯಾಗಿದೆ.

Karnataka Rains, Heavy monsoon rain across coastal districts and other parts of state, Kannada news

ಉತ್ತರ ಕನ್ನಡದ ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಕೃಷಿ ಭೂಮಿ ಜಲಾವೃತಗೊಂಡಿವೆ

ಕಾರವಾರ ತಾಲೂಕಿನ ಗೋಯರ್ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳಿವೆ. ಕಾಡಿನ ಮಧ್ಯೆ ಇದ್ದ ಒಂದೇ ಒಂದು ರಸ್ತೆ ಸಂಪರ್ಕವೂ ಸದ್ಯ ಕಡಿತವಾಗಿದೆ. ಜಿಲ್ಲೆಯಲ್ಲಿ ಮಳೆ ಇಷ್ಟೆಲ್ಲ ರಗಳೆ ಸೃಷ್ಟಿಸಿದ್ರೂ, ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಪತ್ತೆಯೇ ಇಲ್ಲ ಅಂತ ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಫಾಲ್ಸ್, ಬೀಚ್​ಗಳಿಗೆ ಪ್ರವೇಶ ನಿರ್ಬಂಧ

ಮಳೆಯಿಂದ, ವಿಭೂತಿ ಫಾಲ್ಸ್​​ನಲ್ಲಿ ಜಲವೈಭವ ಮರುಕಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಧಾರಾಕಾರ ಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಮಂಗಳೂರಿನ ಪಣಂಬೂರು ಬೀಚ್​ನಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪ್ರವಾಸಿಗರು ಸಮುದ್ರಕ್ಕೆ ಬೇಲಿ ಹಾಕಿದ್ದಾರೆ.

Karnataka Rains, Heavy monsoon rain across coastal districts and other parts of state, Kannada news

ಮಲಗಿದ್ದಾಗಲೇ ಮನೆ ಕುಸಿದು ತಾಯಿ, ಮಗ ಸಾವು

ಬೆಳಗಾವಿ ಗಡಿ ಭಾಗದ ಗೋವಾ ಪ್ರದೇಶಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಧಾರಕಾರ ಮಳೆಯಿಂದ ನ್ಯೂರಾ ಮಂಡೋರ್​​​ನಲ್ಲಿ ಮನೆ ಕುಸಿದು, ತಾಯಿ ಮರಿಯಾ ಮಗ ಅಲ್ಫಾರ್ಡ್​​ ಮೃತಪಟ್ಟಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದಾಗಲೇ ಅನಾಹುತ ನಡೆದಿದೆ.

‘ಪಂಚಗಂಗಾ’ ಪ್ರವಾಹ; ನಿಪ್ಪಾಣಿ ಭಾಗದಲ್ಲಿ ನೆರೆ ಆತಂಕ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪಂಚಗಂಗಾ ನದಿ ಪ್ರಚಂಡ ರೂಪ ತಾಳಿದೆ. 32 ಅಡಿಗಿಂತ ಹೆಚ್ಚಿಗೆ ನೀರಿನ ಹರಿವು ಏರಿದ್ದು, ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ನಿಪ್ಪಾಣಿಯ ಹಲವು ಗ್ರಾಮಗಳಲ್ಲಿ ಪ್ರವಾಹದ ಆತಂಕ ಮನೆಮಾಡಿದೆ. ವಾರದಿಂದ ಸುರಿಯುತ್ತಿರುವ ಮಳೆಗೆ ಬೆಳಗಾವಿ ಜಿಲ್ಲೆ ಖಾನಾಪುರ ವ್ಯಾಪ್ತಿಯಲ್ಲಿ ಮನೆಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಎಲ್ಲೆಲ್ಲಿ ಪ್ರವಾಹ, ಎಷ್ಟು ಮನೆಗಳು ಹಾನಿ? ಸಂಪೂರ್ಣ ಮಾಹಿತಿ ನೀಡಿದ ಸಿಎಂ

ಘಟಪ್ರಭೆ ಪ್ರತಾಪದಿಂದ ಹುಕ್ಕೇರಿಯ ಹುಣ್ಣೂರಿನಲ್ಲಿರುವ ವಿಠ್ಠಲನ ಮಂದಿರ ಸಂಪೂರ್ಣವಾಗಿ ಮುಳುಗಿದೆ. 148 ಅಡಿ ಎತ್ತರದ ದೇಗುಲದಲ್ಲಿ ಸದ್ಯ, ನಾಲ್ಕು ಅಡಿಗಳ ಗೋಪುರ ಮಾತ್ರ ಕಾಣುತ್ತಿದೆ.

ತುರ್ತು ವಿಪತ್ತು ನಿರ್ವಹಣೆಗೆ ಸಿಎಂ ಸೂಚನೆ

Karnataka Rains, Heavy monsoon rain across coastal districts and other parts of state, Kannada news

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ನೆರೆ, ಮನೆಗಳಿಗೆ ಹಾನಿ, ವಿಪತ್ತು ನಿರ್ವಹಣೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಸದ್ಯ ಮಳೆಯಿಂದ 3,714 ಮನೆಗಳಿಗೆ ಹಾನಿಯಾಗಿದೆ. ನೆರೆ ಉಂಟಾಗುವ ಸ್ಥಳಗಳನ್ನ ಮೊದಲೇ ಗುರುತಿಸಿದ್ದೇವೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣವಿದೆ. ಎಸ್​ಡಿಆರ್​ಎಫ್​ನಡಿ ಪರಿಹಾರ ನೀಡಲು‌ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!