ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್​, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ

ಕರಾವಳಿ, ಮಲೆನಾಡನಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದರೆ ಮತ್ತೆ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲ್ಲೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ನಗರದಲ್ಲಿ ಕೇವಲ ಮೋಡ ಕವಿದ ವಾತಾವರಣವಿದ್ದು, ಒಂದು ಹನಿ ಮಳೆ ಆಗಿಲ್ಲ.

ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್​, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ
ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್​, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 27, 2024 | 3:17 PM

ಬೆಂಗಳೂರು, ಜೂನ್​ 27: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ (Rain) ಆರ್ಭಟ ಹೆಚ್ಚಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಇದು ಬೆಂಗಳೂರಿನಲ್ಲಿ (Bangaluru) ಜುಲೈ 1ರ ವರೆಗೆ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಮತ್ತು ಬೆಳಗಾವಿ, ಹಾವೇರಿ, ಧಾರವಾಡ, ಹಾಸನ ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ 

ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲ್ಲೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ಕೆಲ ದಿನಗಳಿಂದ ನಗರದಲ್ಲಿ ಕೇವಲ ಮೋಡ ಕವಿದ ವಾತಾವರಣವಿದ್ದು, ಒಂದು ಹನಿ ಮಳೆ ಆಗಿಲ್ಲ. ಎಲ್ಲೆಡೆ ತಂಪು ಗಾಳಿ ಬೀಸುತ್ತಿದೆ.

ಇದನ್ನೂ ಓದಿ: ತುಂಬಿ ಹರಿಯುತ್ತಿರುವ ಕುಮಾರಧಾರ, ನೇತ್ರಾವತಿ: ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ಕಾರವಾರದ ದೇವಬಾಗ್ ಅರಬ್ಬಿ ಸಮುದ್ರದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಕಡಲ ಕೊರೆತ ಉಂಟಾಗಿದೆ. ದೇವಬಾಗ್ ರೆಸಾರ್ಟ್​​ನ 4 ಕಾಟೇಜ್ ಮನೆಗಳಿಗೆ ಹಾನಿ ಆಗಿದ್ದು, ಕಡಲ ಕೊರೆತದ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ.

ಜೋಗ ಜಲಪಾತಕ್ಕೆ ಮರುಕಳಿಸಿದ ಜೀವ ಕಳೆ

ಮಲೆನಾಡಿನ ಭಾಗದಲ್ಲಿ ಮುಂಗಾರು ಮಳೆ ಚುರುಕು ಹಿನ್ನಲ್ಲೆ ಸಾಗರ ತಾಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೆ ಜೀವ ಕಳೆ ಮರುಕಳಿಸಿದೆ. ಮಳೆ ಹಿನ್ನಲೆ ಮತ್ತೆ ಜೋಗ್ ಫಾಲ್ಸ್​ನಲ್ಲಿ ನೀರು ಧುಮುಕುತ್ತಿದೆ. ಆ ಮೂಲಕ ಮತ್ತೆ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಜಿಲ್ಲೆಯಾದ್ಯಂತ ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆ

ಕೆಲ ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಬಿಡುವು ಕೊಟ್ಟಿದ್ದ ವರುಣ ಇಂದು ಮತ್ತೆ ಸುರಿದಿದೆ. ಕಳೆದ 20 ನಿಮಿಷದಿಂದ ಜಿಟಿ ಜಿಟಿ ಮಳೆ ಆರಂಭವಾಗಿದೆ. ಮಳೆ ಹಿನ್ನಲೆ ವಾಣಿಜ್ಯ ನಗರಿ ಹುಬ್ಬಳ್ಳಿ ಥೇಟ್ ಮಲೆನಾಡಿನಂತಾಗಿದೆ. ಜಿಟಿ ಜಿಟಿ ಮಳೆಗೆ ಜನ ಜೀವನ ಅಸ್ತವ್ಯಸ್ತ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ