
ಬೆಂಗಳೂರು, ಆಗಸ್ಟ್ 27: ಇಂದಿನಿಂದ (ಆ.27) ರಾಜ್ಯಾದ್ಯಂತ ಮಳೆ (Rain) ಹೆಚ್ಚಾಗಲಿದ್ದು, ಸೆಪ್ಟೆಂಬರ್ 01ವರೆಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 30 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು, ಒತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆಗಸ್ಟ್ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ಆ.27) ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 28 ರವರೆಗೆ ಗಾಳಿಯ ವೇಗವು ಪ್ರತಿ ಗಂಟೆಗೆ 30-40 ಕಿಮೀ ಇರಲಿದೆ. ಇನ್ನು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 29ರವರೆಗೆ ಗಾಳಿಯ ವೇಗವು ಗಂಟೆಗೆ 30-40 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 28 ರಿಂದ ಆಗಸ್ಟ್ 30ರ ವರೆಗೂ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 30ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಲಿದೆ. ಗಾಳಿಯ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Published On - 8:40 am, Wed, 27 August 25