AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಧಾರಾಕಾರ ಮಳೆ

ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಧಾರಾಕಾರ ಮಳೆ
ಹವಾಮಾನImage Credit source: Farheen Hussain( Twitter)
ನಯನಾ ರಾಜೀವ್
|

Updated on:Jul 06, 2023 | 7:28 AM

Share

ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕಾರವಾರ, ಹೊನ್ನಾವರ, ಶಿರಾಲಿ, ಮುಲ್ಕಿ, ಬೆಳ್ತಂಗಡಿ, ಕಾರ್ಕಳ, ಕೊಲ್ಲೂರು, ಗೇರುಸೊಪ್ಪ, ಕುಮಟಾ, ಮಂಗಳೂರು, ಮಾಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಮಳೆಯಾಗಿದೆ.

ಪಣಂಬೂರು, ಧರ್ಮಸ್ಥಳ, ಪುತ್ತೂರು, ಕೋಟ, ಸಿದ್ದಾಪುರ, ಮುಧೋಳ,ಮಂಕಿ, ಗೋಕರ್ಣ,ನಿರ್ಣಾ, ಉಪ್ಪಿನಂಗಡಿ, ಬೇಲಿಕೇರಿ, ಕದ್ರಾ, ಕೊಟ್ಟಿಗೆಹಾರ, ಅಡಕಿ, ಭಾಗಮಂಡಲ, ಅಂಕೋಲಾ, ಕ್ಯಾಸಲ್​ರಾಕ್, ಕಮ್ಮರಡಿಯಲ್ಲಿ ಭಾರಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ: ರೆಡ್ ಅಲರ್ಟ್​ ಘೋಷಣೆ

ಮಂಚಿಕೆರೆ, ಸುಬ್ರಹ್ಮಣ್ಯ, ಶೃಂಗೇರಿ, ಜಯಪುರ, ಲಿಂಗನಮಕ್ಕಿ, ಸಿದ್ದಾಪುರ, ಸುಳ್ಯ, ಬೀದರ್, ದೇವದುರ್ಗ, ಕಳಸ, ಕೊಪ್ಪ, ವಿರಾಜಪೇಟೆ, ರಾಯಲ್ಪಾಡು, ಮಹಾಗಾವ್, ಶ್ರೀಮಂಗಲ, ನಾಪೋಕ್ಲು, ತಾಳಗುಪ್ಪ, ಹುಂಚದಕಟ್ಟೆ, ಮಾನ್ವಿ, ಮಸ್ಕಿ, ರಾಜೇಶ್ವರ, ಹಳಿಯಾಳ, ತ್ಯಾಗರ್ತಿ, ಶೋರಾಪುರ, ನಾಯಕನಹಟ್ಟಿ, ಅಕ್ಕಿಆಲೂರು, ಕಲಘಟಗಿ, ಸೈದಾಪುರ, ಕಕ್ಕೇರಿ, ರಾಯಚೂರು, ಹೊಸಕೋಟೆ, ಪಾವಗಡ, ಹಾರಂಗಿ, ಶನಿವಾರಸಂತೆ, ಬಂಡೀಪುರ, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಹರಪನಹಳ್ಳಿಯಲ್ಲಿ ಮಳೆಯಾಗಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡದಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45-55 ಕಿ.ಮೀ ಇಂದ 65 ಕಿ.ಮೀ ವರೆಗೂ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Thu, 6 July 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು